ಅಮೃತ ಮಹೋತ್ಸವದಲ್ಲಿ ಮರೆತುಹೋದ “ಗಾಂಧಿ’!
Team Udayavani, Aug 17, 2021, 2:57 PM IST
ಬೆಂಗಳೂರು: ಸ್ವಾತಂತ್ರ್ಯದಿನದ ಅಮೃತ ಮಹೋತ್ಸವ ಆಚರಣೆ ರಾಜಧಾನಿಯಲ್ಲಿ ಅತ್ಯಂತ ಸಡಗರದಿಂದ ನೆರವೇರಿತು. ಆಡಳಿತದ ವಿಧಾನಸೌಧ ಮತ್ತು ರಾಜಭವನವು ವಿದ್ಯುದ್ದೀಪಾಲಂಕಾರಗಳಿಂದ ಕಂಗೊಳಿಸಿತು.
ಮೊದಲ ಬಾರಿಗೆ ಬ್ಯಾಂಕ್ವೆಟ್ ಹಾಲ್ನಲ್ಲಿ ಸ್ವಾತಂತ್ರ್ಯೋತ್ಸವದ ಉಪನ್ಯಾಸವೂ ನಡೆಯಿತು. ಆದರೆ, ಈ ಎಲ್ಲ ಸಂಭ್ರಮಕ್ಕೆ ಕಾರಣರಾದ ಎರಡೂ ಶಕ್ತಿಸೌಧಗಳ ನಡುವಿರುವ ಮಹಾತ್ಮ ಗಾಂಧಿ ಮರೆತುಹೋದರು!
ಹೌದು, ವಿಧಾನಸೌಧ ಮತ್ತು ವಿಕಾಸ ಸೌಧ ಮಧ್ಯೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದೆ. ಆದರೆ, ಅದೇ ಸ್ವಾತಂತ್ರ್ಯೋತ್ಸವದ ಸಡಗರದಲ್ಲಿ ಆ ಪ್ರತಿಮೆಗೆಕೊನೆಪಕ್ಷ ಮಾಲಾರ್ಪಣೆ
ಮಾಡುವುದನ್ನೂ ಮರೆತಿದೆ.
ಇದನ್ನೂ ಓದಿ:ಅಫ್ಘಾನ್ ವಲಸಿಗರು ಮತ್ತೆ ಅತಂತ್ರ: ಟರ್ಕಿಯಿಂದ 295 ಕಿಲೋ ಮೀಟರ್ ಬೃಹತ್ ಗೋಡೆ ನಿರ್ಮಾಣ!
75 ವಸಂತಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ವಿಶೇಷ. ಇದೇಕಾರಣಕ್ಕೆ ಸರ್ಕಾರ ಅಮೃತ ಮಹೋತ್ಸವದ ಸವಿನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿದೆ. ಸ್ವಾತಂತ್ರ್ಯೋತ್ಸವಕ್ಕೆ ಎರಡು ದಿನ ಮುಂಚಿತವಾಗಿಯೇ ವಿಧಾನಸೌಧ ಮತ್ತು
ಆವರಣವನ್ನು ವಿದ್ಯುದ್ದೀಪಾಲಂಕಾರ ಮಾಡಲಾಗಿತ್ತು. ದೀಪಗಳಿಂದ ಮಿಂಚುತ್ತಿದ್ದ ವಿಧಾನಸೌಧದ ಮುಂದೆ ಸಿಬ್ಬಂದಿ”ಫೋಟೋ ಸೆಷನ್’ ನಡೆಯಿತು. ಆದರೆ, ವಿಧಾನಸೌಧ ಪಕ್ಕದಲ್ಲೇ ಇರುವ ಗಾಂಧಿ ಪ್ರತಿಮೆ ಕಾಣಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್