ಕನ್ನಡಿಗರಲ್ಲಿ ಪ್ರತ್ಯೇಕ ರಾಜ್ಯದ ಕಿಚ್ಚು ಹಚ್ಚುತ್ತಿರುವ ಕತ್ತಿ ಹೇಳಿಕೆ ಖಂಡನೀಯ : ಜೋಶಿ


Team Udayavani, Jun 28, 2022, 6:37 PM IST

ಕನ್ನಡಿಗರಲ್ಲಿ ಪ್ರತ್ಯೇಕ ರಾಜ್ಯದ ಕಿಚ್ಚು ಹಚ್ಚುತ್ತಿರುವ ಕತ್ತಿ ಹೇಳಿಕೆ ಖಂಡನೀಯ : ಮಹೇಶ ಜೋಶಿ

ಬೆಂಗಳೂರು: ರಾಜ್ಯ ಪ್ರತ್ಯೇಕತೆ ಕುರಿತು ಮಾತನಾಡಿ ಕನ್ನಡಿಗರ ನಡುವೆ ಗೊಂದಲ ಸೃಷ್ಟಿಸಿದ ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ಅವರ ಹೇಳಿಕೆಯನ್ನು ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕಟುವಾಗಿ ಖಂಡಿಸಿದ್ದಾರೆ.

ಕಳೆದ ಕೆಲ ವರ್ಷಗಳಿಂದ ನಿರಂತರವಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿಸುವ ಕುರಿತು ಸ್ವಾರ್ಥ ಹಾಗೂ ಸ್ವಹಿತಾಸಕ್ತಿ ಹಿನ್ನೆಲೆಯಲ್ಲಿ ಸಚಿವ ಉಮೇಶ ಕತ್ತಿಯವರು ಹೇಳಿಕೆಗಳನ್ನು ನೀಡುತ್ತ ಬಂದಿದ್ದಾರೆ. ಇವರ ಪ್ರಚೋದನಾಕಾರಿ ಹೇಳಿಕೆಯಿಂದ ಕನ್ನಡಿಗರಲ್ಲಿ ಗೊಂದಲ ಉಂಟಾಗುತ್ತಿದೆ. ರಾಜ್ಯದಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಲು ಕಾರಣವಾಗುತ್ತಿದೆ. ಸರಕಾರ ಅವರಿಗೆ ಮುಖ್ಯ ಖಾತೆಯಾದ ಅರಣ್ಯ ಇಲಾಖೆಯನ್ನು ನೀಡಿದೆ. ಅದರಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಬದಲು ಕನ್ನಡಿಗರಲ್ಲಿ ಪ್ರತ್ಯೇಕ ರಾಜ್ಯದ ಕಿಚ್ಚು ಹಚ್ಚುತ್ತಿರುವ ಇವರ ಹೇಳಿಕೆಗಳು ಖಂಡನೀಯ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.

ಕನ್ನಡ ನಾಡಿನ ಏಕೀಕರಣ ಸಂದರ್ಭದಲ್ಲಿ ಕನ್ನಡ ನೆಲಕ್ಕಾಗಿ ಅನೇಕ ಮಹನೀಯರು ಹೋರಾಟದಲ್ಲಿ ಪಾಲ್ಗೊಂಡು ನಾಡು ಒಂದಾಗಲು ಶ್ರಮಿಸಿದ್ದಾರೆ. ಅವರ ಹೋರಾಟ, ತ್ಯಾಗ, ಶ್ರಮದ ಫಲವಾಗಿ ಹರಿದು ಹಂಚಿ ಹೋಗಿದ್ದ ಕನ್ನಡ ನಾಡು ಒಂದಾಯಿತು. ಹೀಗೆ ಒಂದಾಗಿರುವ ಕನ್ನಡ ನೆಲ ಒಡೆಯುವ ಮಾತನ್ನು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.

ಕನ್ನಡಿಗರೇ ಹೆಚ್ಚಾಗಿರುವ ಇನ್ನೂ ಹಲವು ಪ್ರದೇಶಗಳು ನೆರೆಯ ರಾಜ್ಯಗಳಲ್ಲಿ ಉಳಿದುಕೊಂಡಿವೆ. ಅವುಗಳನ್ನು ಕರ್ನಾಟಕಕ್ಕೆ ವಿಲೀನಗೊಳಿಸುವ ಇಚ್ಛಾಶಕ್ತಿಯನ್ನು ಉತ್ತರ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವ ಕತ್ತಿಯವರು ಪ್ರಕಟಿಸಬೇಕಿತ್ತು. ಇವರ ಸ್ವಕ್ಷೇತ್ರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಮರಾಠಿಗರ ಅಟ್ಟಹಾಸವನ್ನು ಮಟ್ಟಹಾಕುವ ಧ್ವನಿ ಎತ್ತುವ ಬದಲು ಪ್ರತ್ಯೇಕತೆಯ ಸ್ವರ ಎಬ್ಬಿಸುತ್ತಿದ್ದಾರೆ. “ಕನ್ನಡಕ್ಕಾಗಿ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುವುದುʼ ಎಂಬ ಸದಾಶಯದ ನುಡಿಯ ವಿಭಜನೆಗಾಗಿ ಕತ್ತಿ ಮಸೆಯುತ್ತ ಕಿಡಿ ಹಚ್ಚುವ ಕತ್ತಿಯವರ ನಡೆ ಸರಿಯಲ್ಲ.

ಅಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್‌ನ ಮಹಾಧಿವೇಶನದ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ಆಗ ವಿಶೇಷ ಚಾಲನೆ ದೊರೆಯಿತು. ಕರ್ನಾಟಕ ಸಭೆಯ ಮೊದಲ ಪರಿಷತ್ತು ಬೆಳಗಾವಿಯಲ್ಲಿ 25-12-1924 ರಂದು, ಸರ್ ಸಿದ್ದಪ್ಪ ಕಂಬಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆ ಸಂದರ್ಭದಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆಯನ್ನು ಮೊದಲ ಬಾರಿಗೆ ಹಾಡಲಾಯಿತು. ಇದರೊಂದಿಗೆ ಮದ್ರಾಸ್ ಮತ್ತು ಮುಂಬಯಿ ಆಧಿಪತ್ಯದ ವಿಧಾನ ಸಭೆಗಳಲ್ಲೂ ಕರ್ನಾಟಕ ಏಕೀಕರಣದ ವಿಷಯ ಪ್ರಸ್ತಾಪಿತಗೊಂಡಿತು. ಮದ್ರಾಸ್ ವಿಧಾನ ಸಭೆಯಲ್ಲಿ ಎ. ರಂಗನಾಥ ಮೊದಲಿಯಾರ್, ಜೆ. ಎ. ಸಲ್ಡಾನ, ಎ. ಬಿ. ಶೆಟ್ಟಿ, ಡಾ. ನಾಗನಗೌಡ ಮುಂತಾದ ಸದಸ್ಯರು ಕರ್ನಾಟಕ ಏಕೀಕರಣವನ್ನು ಬೆಂಬಲಿಸಿದರೂ ಸರ್ಕಾರ ಅದನ್ನು ತಿರಸ್ಕರಿಸಿತು. ಮುಂಬಯಿ ವಿಧಾನ ಸಭೆಯಲ್ಲಿ 1919ರಲ್ಲಿ ವಿ. ಎನ್. ಜೋಗ್ ಕರ್ನಾಟಕ ಪ್ರಾಂತ ರಚನೆಗೆ ಕೋರಿ ಠರಾವು ಮಂಡಿಸಿದ್ದರು. ಆದರೆ, ಅದೂ ತಿರಸ್ಕೃತವಾಯಿತು. 1926ರಲ್ಲಿ ಸರ್ ಸಿದ್ದಪ್ಪ ಕಂಬಳಿ ಪುನಃ ಕರ್ನಾಟಕ ಪ್ರಾಂತ ರಚನೆಗೆ ಠರಾವು ಮಂಡಿಸಿದರಾದರೂ, ಏಕೀಕರಣಕ್ಕೆ ಕನ್ನಡಿಗರ ಬೆಂಬಲವಿಲ್ಲ ಎಂಬ ಕಾರಣ ನೀಡಿ ಸರ್ಕಾರ ಠರಾವನ್ನು ತಿರಸ್ಕರಿಸಿತು. ಆದರೂ ಛಲಬಿಡದ ತ್ರಿವಿಕ್ರಮನಂತೆ ಹೋರಾಟ ನಡೆಸಿ ಕರ್ನಾಟಕವನ್ನು ಕಟ್ಟಿದ ಪರಿಯನ್ನು ಉಮೇಶ ಕತ್ತಿಯವರು ತಿಳಿದುಕೊಳ್ಳುವ ಅವಶ್ಯಕತೆ ಇದೆ.

ಅಪಸ್ವರದ ರಾಗದಿಂದಲೇ ತನ್ನ ಅಸ್ತಿತ್ವವನ್ನು ತೋರಿಸಿಕೊಳ್ಳುತ್ತಿರುವ ಉಮೇಶ ಕತ್ತಿಯವರು ಕನ್ನಡಿಗರ ಹಾಗೂ ಅಖಂಡ ಕರ್ನಾಟಕದ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಉಮೇಶ ಕತ್ತಿಯವರ ಹೇಳಿಕೆಯನ್ನು ಸಮಸ್ತ ಕನ್ನಡ ಜನತೆ ಬೆಂಬಲಿಸಬಾರದು, ನಿರ್ಲಕ್ಷಿಸಬಾರದು. ಮುಖ್ಯಮಂತ್ರಿಗಳು ಉಮೇಶ ಕತ್ತಿಯವರಿಗೆ, ಮಾತಿನಲ್ಲಿ ಹಿಡಿತ ಇಟ್ಟುಕೊಂಡು ಎಚ್ಚರದಲ್ಲಿರುವಂತೆ ಸೂಚಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸಿದೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.