ಮಾರುಕಟ್ಟೆಗೆ ಆಗಬೇಕು ಮೇಜರ್‌ ಸರ್ಜರಿ!

ಮಾರುಕಟ್ಟೆಗೆಂದು ಕಾಯಕಲ್ಪ?

Team Udayavani, Jun 12, 2019, 3:09 AM IST

marukatte

ಬೆಂಗಳೂರು: ಒಂದು ಕಾಲದಲ್ಲಿ ನಗರದ ಪ್ರತಿಷ್ಠೆಯ ಪ್ರತಿಬಿಂಬಗಳಾಗಿದ್ದ ಮಾರುಕಟ್ಟೆಗಳೇ ಇಂದು ಶೋಚನೀಯ ಸ್ಥಿತಿಗೆ ಸ್ವತಃ ಕನ್ನಡಿ ಹಿಡಿಯುತ್ತಿವೆ. ನಿತ್ಯ ಸಾವಿರಾರು ಜನ ಬಂದು-ಹೋಗುವ ಮಾರುಕಟ್ಟೆಗಳು ಸಮಸ್ಯೆ ಕೂಪಗಳಾಗಿವೆ. ಆಳುವವರು ಮನಸ್ಸು ಮಾಡಿದರೆ, ಇವು ಮತ್ತೆ ತಮ್ಮ ವೈಭವಕ್ಕೆ ಮರುಳುತ್ತವೆ. ಅಷ್ಟೇ ಅಲ್ಲ, ಪ್ರಮುಖ ಆದಾಯದ ಮೂಲಗಳನ್ನಾಗಿಯೂ ಪರಿವರ್ತಿಸಬಹುದು. ಆದರೆ, ಇದಕ್ಕೆ ಮನಸ್ಸು ಮಾಡಬೇಕಾಗಿದೆ.

ಮಾರುಕಟ್ಟೆ ಮತ್ತು ಸಮಸ್ಯೆಗಳು ಒಂದೇ ನಾಣ್ಯದ ಎರಡು ಮುಖಗಳು ಎನ್ನುವಷ್ಟರಮಟ್ಟಿಗೆ ಮಾರುಕಟ್ಟೆಗಳ ಸ್ಥಿತಿ ತಲುಪಿದೆ. ಒತ್ತುವರಿ, ಉಪಗುತ್ತಿಗೆ, ಕಸ ವಿಲೇವಾರಿ, ಪ್ಲಾಸ್ಟಿಕ್‌ ಬಳಕೆ, ಹದಗೆಟ್ಟ ರಸ್ತೆ ಹೀಗೆ ಹಲವಾರು ಸಮಸ್ಯೆಗಳಿಂದ ನಲುಗುತ್ತಿವೆ. ಇದಕ್ಕಾಗಿ ಬಿಬಿಎಂಪಿ ಮೇಜರ್‌ ಸರ್ಜರಿ ಮಾಡಬೇಕಾದ ಅವಶ್ಯಕತೆ ಇದೆ ಎನ್ನುತ್ತಾರೆ ತಜ್ಞರು.

ಬಿಬಿಎಂಪಿ 2018-19ರ ಬಜೆಟ್‌ನಲ್ಲಿ ವಾಣಿಜ್ಯ ಕಟ್ಟಡಗಳು ಸೇರಿದಂತೆ ನಗರದ ಮಾರುಕಟ್ಟೆಗಳಿಂದ 90 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿ ಹಾಕಿಕೊಂಡಿತ್ತು. ಆದರೆ, ಸಂಗ್ರಹವಾಗಿರುವುದು 35 ಕೋಟಿ ರೂ. ಮಾತ್ರ! ಬಿಬಿಎಂಪಿ ಮಳಿಗೆಗಳಿಂದ ಎಷ್ಟು ಸರ್ಮಪಕವಾಗಿ ಹಣ ಸಂಗ್ರಹಣೆ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಓಬೀರಾಯನ ಕಾಲದ ಪದ್ಧತಿ ಅಳವಡಿಸಿಕೊಂಡಿದ್ದು, ಪ್ರಸ್ತುತ ಬಾಡಿಗೆ ದರಕ್ಕೆ ಸಂಬಂಧಪಟ್ಟಂತೆ ಅದನ್ನು ಪರಿಷ್ಕರಿಸಿಲ್ಲ. ವಸೂಲಿಯೂ ಸರಿಯಾಗಿ ಆಗುತ್ತಿಲ್ಲ. ಹೀಗಾಗಿ, ಬಿಬಿಎಂಪಿಗೆ ಪ್ರತಿ ವರ್ಷ ಕೋಟ್ಯಂತರ ರೂ. ಆದಾಯ ಕೈತಪ್ಪುತ್ತಿದೆ.

ಇನ್ನು ಪ್ಲಾಸ್ಟಿಕ್‌ ತ್ಯಾಜ್ಯ ಬೃಹತ್‌ ಪ್ರಮಾಣದಲ್ಲಿ ಮೈದಳೆಯುವಲ್ಲಿ ಸಾರ್ವಜನಿಕರ ಪಾತ್ರವೂ ದೊಡ್ಡದಿದೆ. ಒಮ್ಮೆ ಮಾರುಕಟ್ಟೆಗೆ ಹೋದರೂ ಮನೆಗೆ ಬರುವಾಗ ಹತ್ತಾರು ಪ್ಲಾಸ್ಟಿಕ್‌ ಚೀಲಗಳು ಜತೆಗೆ ಬರುತ್ತವೆ. ಬಳಸಿದ ಪ್ಲಾಸ್ಟಿಕ್‌ ಚೀಲಗಳಲ್ಲಿ ಕೆಲವು ಮಾರುಕಟ್ಟೆಯ ಅಂಗಳದಲ್ಲೇ ಅನಾಥವಾಗುತ್ತವೆ. ಸಾರ್ವಜನಿಕರು ಪ್ಲಾಸ್ಟಿಕ್‌ ಸಮಸ್ಯೆಗೆ ತಾವೇ ಕಡಿವಾಣ ಹಾಕಿಕೊಳ್ಳಬೇಕು. ಇದರಿಂದ ನಗರದ ಮಾರುಕಟ್ಟೆಗಳಲ್ಲಿ ಬಳಸಲಾಗುತ್ತಿರುವ ಪ್ಲಾಸ್ಟಿಕ್‌ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ.

ಉಪಗುತ್ತಿಗೆ ಹಾವಳಿ?: ಬಿಬಿಎಂಪಿ ಮಾರುಕಟ್ಟೆಯ ಮಳಿಗೆಗಳನ್ನು ಕೆಲವು ವ್ಯಾಪಾರಿಗಳು ಉಪಗುತ್ತಿಗೆ ನೀಡಿ ಹೆಚ್ಚಿನ ಹಣ ಸಂಪಾದಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪವೂ ಇದೆ. ಬಿಬಿಎಂಪಿ ಮಳಿಗೆಗಳನ್ನು ಹಲವು ವರ್ಷಗಳವರೆಗೆ ಭೋಗ್ಯಕ್ಕೆ ನೀಡಲಾಗಿದೆ. ವ್ಯಾಪಾರಿಗಳು ಈ ಮಳಿಗೆಗಳನ್ನು ಉಪಗುತ್ತಿಗೆ ನೀಡಿ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ವರದಿ ನೀಡುವುದಷ್ಟೇ ಕೆಲಸ: ಮಾರುಕಟ್ಟೆಗಳಲ್ಲಿ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳಬಗ್ಗೆ ತಿಳಿಸುವಂತೆ ಹೈಕೋರ್ಟ್‌ ಆದೇಶದ ಮೇಲೆ ಅಗ್ನಿಶಾಮಕದಳ ಮಾರುಕಟ್ಟೆಗಳಲ್ಲಿ ಅಗ್ನಿಶಮನ ಸಾಧನ, ಆಂಬ್ಯುಲನ್ಸ್‌, ಅಗ್ನಿಶಾಮಕ ವಾಹನಗಳಿಗೆ ಜಾಗ ಸೇರಿದಂತೆ 19 ಅಂಶಗಳ ಮಾರ್ಗಸೂಚಿಯನ್ನು ಅಳವಡಿಸಿಕೊಳ್ಳಬೇಕಿದೆ ಎಂದು ವರದಿ ನೀಡಿತ್ತು.

ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಹೈಕೋರ್ಟ್‌ ಆದೇಶಿಸಿದೆ. ಆದರೆ, ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಪರಿಶೀಲಿಸಿ ಮಾರ್ಗಸೂಚಿಗಳನ್ನು ನೀಡುವುದಕಷ್ಟೇ ಅಗ್ನಿಶಾಮಕ ಇಲಾಖೆಗೆ ಅಧಿಕಾರವಿದೆ. ಇದನ್ನು ಪಾಲಿಸುವುದು ಬಿಬಿಎಂಪಿಯ ಕೆಲಸ. ಮಾರುಕಟ್ಟೆಗಳು ಬಿಬಿಎಂಪಿ ಅಧೀನದಲ್ಲಿ ಇರುವುದರಿಂದ ಅವರೇ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎನ್ನುತ್ತಾರೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು.

ವ್ಯಾಪಾರಿಗಳೂ ಬದ್ಧತೆ ಪ್ರದರ್ಶಿಸಲಿ: ಮಾರುಕಟ್ಟೆ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಬಿಬಿಎಂಪಿ ಅಧಿಕಾರಿಗಳಷ್ಟೇ ಜವಾಬ್ದಾರಿಯು ವ್ಯಾಪಾರಿಗಳ ಮೇಲೂ ಇದೆ. ತಾವಿರುವ ಸುತ್ತಲಿನ ಪ್ರದೇಶ ಸ್ವಚ್ಛವಾಗಿ ಮತ್ತು ನಾವು ಪ್ಲಾಸ್ಟಿಕ್‌ ಕೈಚೀಲಗಳನ್ನು ಬಳಸುವುದಿಲ್ಲ ಎಂದು ಪಣ ತೊಡಬೇಕಿದೆ.

ಸ್ಥಳ ನೀಡಿ “ಸ್ಮಾರ್ಟ್‌’ ಕೆಲಸ ಆರಂಭಿಸಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೃಷ್ಣರಾಜೇಂದ್ರ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಆದರೆ, ಕಾಮಗಾರಿ ನಡೆಯುವಾಗ ವ್ಯಾಪಾರಿಗಳನ್ನು ಎಲ್ಲಿ ಸ್ಥಳಾಂತರಿಸಬೇಕು ಎನ್ನುವುದರ ಬಗ್ಗೆ ಇನ್ನೂ ಯೋಚಿಸಿಲ್ಲ. “ಹಂತ-ಹಂತವಾಗಿ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಸಲಾಗುವುದು.

ಏಕಕಾಲಕ್ಕೆ ಕಾಮಗಾರಿ ನಡೆಸುವುದಿಲ್ಲ. ಕಾಮಗಾರಿ ನಡೆಯುವ ಪ್ರದೇಶದಲ್ಲಿ ಇರುವ ವ್ಯಾಪಾರಿಗಳನ್ನು ಮಾರುಕಟ್ಟೆಯ ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲಾಗುವುದು’ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ಮಾಡಿದರೆ ಮಾದರಿ ಯೋಜನೆಯೂ ಸಮಸ್ಯೆಯಾಗಿ ಬದಲಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ, ಕಾಮಗಾರಿ ಪ್ರಾರಂಭಿಸುವ ಮೊದಲು ಇಲ್ಲಿನ ವ್ಯಾಪಾರಿಗಳಿಗೆ ಜಾಗ ನೀಡಿ ಯೋಜನೆ ಪ್ರಾರಂಭಿಸಬೇಕಿದೆ.

ಮೇಯರ್‌ ಏನಂತಾರೆ?: ನಗರದ ಪಾರಂಪರಿಕ ಮಾರುಕಟ್ಟೆಗಳನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು ಮತ್ತು ಗ್ರಾಹಕರೂ ಬಿಬಿಎಂಪಿಯೊಂದಿಗೆ ಸಹಕಾರ ನೀಡಬೇಕು ಎನ್ನುತ್ತಾರೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌.
ಕೆ.ಆರ್‌.ಮಾರುಕಟ್ಟೆ ಮತ್ತು ರಸೆಲ್‌ ಮಾರುಕಟ್ಟೆಗಳನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು.

ಎರಡೂ ಮಾರುಕಟ್ಟೆಗಳಿಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ನಡೆಯಲಿವೆ. ಕೆ.ಆರ್‌.ಮಾರುಕಟ್ಟೆಯ ಕೆಲವು ಭಾಗಗಳು ತುಂಬಾ ಶಿಥಿಲಗೊಂಡಿದ್ದು, ಅವುಗಳನ್ನು ನೆಲಸಮಗೊಳಿಸಿ, ಮರುನಿರ್ಮಾಣ ಮಾಡಬೇಕಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು. ಮಾರುಕಟ್ಟೆ ಒತ್ತುವರಿ ತೆರವು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳುವುದು ಸವಾಲಿನ ಕೆಲಸ.

ಪ್ರತಿ ಬಾರಿ ಮಾರುಕಟ್ಟೆ ಪ್ರದೇಶಗಳಿಗೆ ಭೇಟಿ ನೀಡಿದ ದಿನ ಮಾತ್ರ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಸ್ವಚ್ಛತೆ ಕಾಪಾಡಿಕೊಳ್ಳುತ್ತಿದ್ದಾರೆ. ಅದರ ಮರುದಿನ ಮಾರುಕಟ್ಟೆ ಯಥಾಸ್ಥಿತಿ ತಲುಪುತ್ತಿದೆ. ಇದನ್ನು ನಿಭಾಯಿಸುವುದಕ್ಕೆ ದಂಡ ವಿಧಿಸುವುದೊಂದೇ ಉಪಾಯ ಎನ್ನುವ ಸಲಹೆಗಳು ಬರುತ್ತಿವೆ. ಆದರೆ, ವ್ಯಾಪಾರಿಗಳ ಹಿತದೃಷ್ಟಿಯಿಂದ ಈ ಕ್ರಮ ಕಷ್ಟ. ದಂಡ ಪ್ರಯೋಗವೇ ಕೊನೆಯ ಅಸ್ತ್ರ ಎನ್ನುವಂತಾಗಬಾರದು ಎಂದು ಅಭಿಪ್ರಾಯಪಟ್ಟರು.

ಕಸದ ಡಬ್ಬಿ ನೀಡುವುದಕ್ಕೆ ಚಿಂತನೆ: ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸುವ ಉದ್ದೇಶದಿಂದ ಅವರಿಗೆ ಕಸದ ಡಬ್ಬಿಗಳನ್ನು ನೀಡಲು ಚಿಂತಿಸಲಾಗುತ್ತಿದೆ. ಇದಕ್ಕೆ ಯಾವುದಾದರು ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿ ಯೋಜನೆಯ ಮೂಲಕ ನೆರವು ನೀಡಿದರೆ ಈ ಯೋಜನೆಯನ್ನು ಜಾರಿ ಮಾಡಬಹುದು ಎಂದು ಮೇಯರ್‌ ಹೇಳಿದರು.

“ಉದಯವಾಣಿ’ ಅಭಿಯಾನಕ್ಕೆ ಮೆಚ್ಚುಗೆ: “ಉದಯವಾಣಿ’ ನಡೆಸಿದ “ಮಾರುಕಟ್ಟೆಗೆಂದು ಕಾಯಕಲ್ಪ’ ಅಭಿಯಾನಕ್ಕೆ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದ ಪಾರಂಪರಿಕ ಮಾರುಕಟ್ಟೆಗಳ ಬಗ್ಗೆ ತಿಳಿಸುವುದರ ಜತೆಗೆ ಅಲ್ಲಿನ ಸಮಸ್ಯೆಗಳನ್ನು “ಉದಯವಾಣಿ’ ಹೊರಗೆಳೆದಿದೆ. ಈ ಸಮಸ್ಯೆಗಳಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

* ಹಿತೇಶ್‌ ವೈ

Ad

ಟಾಪ್ ನ್ಯೂಸ್

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

10-

Madikeri: ಹಸು, ಎಮ್ಮೆಗಳ ಕಳ್ಳತನ : ನಾಲ್ವರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Mangaluru: ಮಳಿಗೆಯಿಂದ 3.30 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

9-train

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಜಾರಿಗೆ ಪ್ರಯತ್ನ; ಸೋಮಣ್ಣ ನೇತೃತ್ವದ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Kamal Sridevi Movie: ಶೂಟಿಂಗ್‌ ಮುಗಿಸಿದ ‘ಕಮಲ್‌ ಶ್ರೀದೇವಿ’

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

Arrested: ಕರೆ ಮಾಡಲು ಕೊಟ್ಟ ಮೊಬೈಲ್‌ ವಾಪಸ್‌ ಕೇಳಿದ್ದಕ್ಕೆ ಹಲ್ಲೆ: ಬಂಧನ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

Bengaluru: ವರದಕ್ಷಿಣೆ‌: ಡಿವೈಎಸ್ಪಿ ವಿರುದ್ಧ ಕೇಸ್‌

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

High Court: ಗಾರ್ಡನ್‌ ಅಲ್ಲ, ಫ್ಲೆಕ್ಸ್‌ ಸಿಟಿ: ಹೈಕೋರ್ಟ್‌ ಚಾಟಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

2

Mangaluru: ದಾವಣಗೆರೆ ಮೂಲದ ಯುವತಿ ನಾಪತ್ತೆ

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ

hun-Arrest

ರಸ್ತೆಯಲ್ಲಿ ವ್ಹೀಲಿಂಗ್‌, ಲಾಂಗ್‌ ಹಿಡಿದು ರೀಲ್ಸ್‌: ಯುವಕ ಬಂಧನ

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.