ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು: ಪತಿ-ಮಗಳಿಂದಲೇ ಕೊಲೆಯಾದ ಅರ್ಚನಾ!


Team Udayavani, Dec 31, 2021, 12:34 PM IST

ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು: ಪತಿ-ಮಗಳಿಂದಲೇ ಕೊಲೆಯಾದ ಅರ್ಚನಾ!

ಬೆಂಗಳೂರು: ಇತ್ತೀಚೆಗೆ ನಡುರಸ್ತೆಯಲ್ಲಿ ಹತ್ಯೆಗೀಡಾದ ಬೆಳ್ಳಂದೂರು ನಿವಾಸಿ ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು, ಆಸ್ತಿ ಹಾಗೂ ಐಷಾರಾಮಿ ಜೀವನಕ್ಕಾಗಿ ತಾಯಿಯ ಎರಡನೇ ಪತಿ ಜತೆ ಸೇರಿಕೊಂಡು ಪುತ್ರಿಯೇ ಕೃತ್ಯಕ್ಕೆ ಸಂಚು ರೂಪಿಸಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಅರ್ಚನಾ ರೆಡ್ಡಿ ಎರಡನೇ ಪತಿ ನವೀನ್‌ ಕುಮಾರ್‌ (33), ಆಕೆಯ ಪುತ್ರಿ ಯುವಿಕಾ (21), ನವೀನ್‌ ಸ್ನೇಹಿತ ಸಂತೋಷ್‌ (35), ಅನೂಪ್‌, ದೀಪು ಹಾಗೂ ಇತರೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ:ಆತ್ಮಗಳ ಜತೆ ಮಾತನಾಡುತ್ತೇನೆ ಎಂದ ಬೆಂಗಳೂರಿನ ಬಾಲಕಿ ನಾಪತ್ತೆ

ಅರ್ಚನಾ ರೆಡ್ಡಿ ಈ ಮೊದಲು ಅರವಿಂದ್‌ ಎಂಬುವರನ್ನು ಮದುವೆಯಾಗಿದ್ದು, ದಂಪತಿಗೆ ಯುವಿಕಾ ರೆಡ್ಡಿ ಮತ್ತು ಒಬ್ಬ ಪುತ್ರ ಇದ್ದಾನೆ. ಈ ಮಧ್ಯೆ ದೇಹದಾರ್ಢ್ಯ ಕೇಂದ್ರದಲ್ಲಿ ತರಬೇತಿದಾರನಾಗಿರುವ ನವೀನ್‌ ಕುಮಾರ್‌ ಪರಿಚಯಿಸಿಕೊಂಡ ಅರ್ಚನಾ ರೆಡ್ಡಿ, ಮೊದಲ ಪತಿಗೆ ವಿಚ್ಛೇದನ ನೀಡಿ, ನವೀನ್‌ ಕುಮಾರ್‌ ನನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳ ಜತೆ ಬೆಳ್ಳಂದೂರಿನ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದರು.

ಪುತ್ರಿಯ ಜತೆಯೇ ಅನೈತಿಕ ಸಂಬಂಧ: ಈ ಮಧ್ಯೆ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಯುವಿಕಾ ರೆಡ್ಡಿ, ನವೀನ್‌ ಕುಮಾರ್‌ಗೆ ಪ್ರೀತಿಸುವಂತೆ ಕೋರಿದ್ದಳು. ಹೀಗಾಗಿ ಕಳೆದ ಮಾರ್ಚ್‌ನಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಮನೆಯಲ್ಲೇ ಇಬ್ಬರು ಒಟ್ಟಿಗೆ ಇರುತ್ತಿದ್ದರು. ಈ ವಿಚಾರ ತಿಳಿದ ಅರ್ಚನಾ ರೆಡ್ಡಿ, ಪುತ್ರಿ ಹಾಗೂ ಎರಡನೇ ಪತಿ ನವೀನ್‌ ಕುಮಾರ್‌ನನ್ನು ಮನೆಯಿಂದ ಹೊರ ಹಾಕಿ, ಒಂದಿಷ್ಟು ದುಡ್ಡು ಕೊಟ್ಟು ಕಳುಹಿಸಿದ್ದರು. ಸುಮಾರು ನಾಲ್ಕೈದು ತಿಂಗಳು ಆರೋಪಿಗಳು ಒಟ್ಟಿಗೆ ಇದ್ದರು. ಆದರೆ, ಇಬ್ಬರು ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದು, ತಮ್ಮಲ್ಲಿದ್ದ ಹಣವನ್ನು ಖಾಲಿ ಮಾಡಿಕೊಂಡಿದ್ದರು. ಅನಂತರ ನವೀನ್‌, ತನ್ನ ಪ್ರೇಯಸಿ ಯುವಿಕಾಳನ್ನು ತಾಯಿ ಮನೆಗೆ ಕಳುಹಿಸಿ, ಆಸ್ತಿ, ಹಣ ತರುವಂತೆ ಕಳುಹಿಸಿದ್ದ. ಆದರೆ, ಅರ್ಚನಾ ರೆಡ್ಡಿ ಮನೆಗೆ ಸೇರಿಸದೆ ವಾಪಸ್‌ ಕಳುಹಿಸಿದ್ದರು. ಅದರಿಂದ ಆಕ್ರೋಶಗೊಂಡು ಪುತ್ರಿ ಯುವಿಕಾ, ಪ್ರಿಯಕರ ನವೀನ್‌ ಕುಮಾರ್‌ಗೆ ತಾಯಿ ಅರ್ಚನಾ ರೆಡ್ಡಿ ಕೊಲೆಗೈದರೆ, ಚನ್ನಪಟ್ಟಣದಲ್ಲಿರುವ ಆಸ್ತಿ ಕಬಳಿಸಬಹುದು ಎಂದು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

ಎಲೆಕ್ಟ್ರಾನಿಕ್‌ ಸಿಟಿ ಉಪ ವಿಭಾಗ ಎಸಿಪಿ ಪವನ್‌, ಎಲೆಕ್ಟ್ರಾನಿಕ್‌ ಸಿಟಿ ಠಾಣಾಧಿಕಾರಿ ಅನಿಲ್‌ ಕುಮಾರ್‌ ನೇತೃತ್ವದಲ್ಲಿ ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು

ಸ್ನೇಹಿತರಿಗೆ ಸುಳ್ಳು ಹೇಳಿದ್ದ ನವೀನ್‌: ಆರೋಪಿ ನವೀನ್‌, ತನ್ನ ಸ್ನೇಹಿತರಿಗೆ ಪತ್ನಿ ಅರ್ಚನಾ ರೆಡ್ಡಿ ಬಗ್ಗೆ ಸುಳ್ಳು ಹೇಳಿದ್ದ. ಮದುವೆಯಾದ ಬಳಿಕ ಅರ್ಚನಾ ರೆಡ್ಡಿಗೆ ಸಾಕಷ್ಟು ಸಹಾಯ ಮಾಡಿದ್ದೇನೆ. ಆಸ್ತಿ ವಿವಾದಗಳನ್ನು ಬಗೆಹರಿಸಿಕೊಟ್ಟಿದ್ದೇನೆ. ಆದರೆ, ಕ್ಷುಲ್ಲಕ ವಿಚಾರಕ್ಕೆ ತನ್ನನ್ನೆ ಮನೆಯಿಂದ ಹೊರಹಾಕಿದ್ದಾಳೆ. ಅಲ್ಲದೆ, ಅದನ್ನು ಪ್ರಶ್ನಿಸಿದ ಪುತ್ರಿ ಯುವಿಕಾ ರೆಡ್ಡಿಯನ್ನು ಮನೆಯಿಂದ ಕಳುಹಿಸಿದ್ದಾಳೆ. ಆಕೆಯನ್ನು ಹತ್ಯೆಗೈಯ ಬೇಕು ಎಂದು ಕೋರಿಕೊಂಡಿದ್ದಾನೆ. ಅಲ್ಲದೆ, ಸಹಕಾರ ನೀಡಿದ ಎಲ್ಲ ಸ್ನೇಹಿತರಿಗೆ ಕಂಠಪೂರ್ತಿ ಮದ್ಯ ಕುಡಿಸಿದಲ್ಲದೆ, ಖರ್ಚಿಗೆಂದು ತಲಾ 4-5 ಸಾವಿರ ರೂ. ಕೊಟ್ಟಿದ್ದಾನೆ ಎಂಬುದು ತನಿಖೆಯಲ್ಲೇ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.