ದುರುದ್ದೇಶದ ದಾಳಿ: ಗೃಹ ಸಚಿವ
Team Udayavani, Mar 29, 2019, 11:47 AM IST
ಬೆಂಗಳೂರು: ಜೆಡಿಎಸ್ ಮುಖಂಡರು ಹಾಗೂ ಸರ್ಕಾರಿ ಅಧಿಕಾರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಮಾಡಿರುವ ದಾಳಿ ದುರುದ್ದೇಶದಿಂದ ಕೂಡಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾಳಿ ನಡೆಸಲು ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿದೆ. ನಿಷ್ಪಕ್ಷಪಾತವಾಗಿ ಎಲ್ಲರ ಮೇಲೂ ದಾಳಿ ನಡೆಸಬಹುದಿತ್ತು. ಚುನಾವಣೆ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರ ಮನೆಗಳ ಮೇಲೆ ದಾಳಿ ನಡೆಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಐಟಿ ಮತ್ತು ಸಿಬಿಐಗಳನ್ನು ದುರುಪಯೋಗಪಡೆಸಿಕೊಂಡಿದ್ದಾರೆ. ದಾಳಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಮುಖ್ಯಮಂತ್ರಿಗಳಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ದೊರೆತಿರಬಹುದು ಎಂದು ಹೇಳಿದರು.
ಕುಸಿದು ಕುಳಿತ ಶಾಸಕಿ ಸೌಮ್ಯರೆಡ್ಡಿ: ಪ್ರತಿಭಟನೆ ವೇಳೆ ಜಯನಗರ ಶಾಸಕಿ ಸೌಮ್ಯರೆಡ್ಡಿ ಬಿಸಿಲಿನ ತಾಪ ತಾಳಲಾರದೆ, ಕುಸಿದು ಕುಳಿತ ಘಟನೆ ನಡೆಯಿತು. ತಕ್ಷಣವೇ ಮಹಿಳಾ ಕಾರ್ಯಕರ್ತೆಯರು ಅವರನ್ನು ನೆರಳಿದ್ದ ಸ್ಥಳಕ್ಕೆ ಕರೆದೊಯ್ದು ನೀರು ಕುಡಿಸಿ ಆರೈಕೆ ಮಾಡಿದರು. ನಂತರ ಕೆಲ ಹೊತ್ತು ಚೇತರಿಸಿಕೊಂಡ ಸೌಮ್ಯರೆಡ್ಡಿ ಕಾರಿನಲ್ಲಿ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ