ಮಾಲ್‌ಗೆ ಲಗ್ಗೆಯಿಟ್ಟ “ಗ್ರಾಮೀಣ ಹಬ್ಬ’


Team Udayavani, Oct 13, 2019, 3:08 AM IST

maal-lagge

ಬೆಂಗಳೂರು: ಕೃಷಿ, ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್‌ (ನಬಾರ್ಡ್‌) ಐದು ದಿನಗಳ “ಗ್ರಾಮೀಣ ಹಬ್ಬ- 2019′ ಏರ್ಪಡಿಸಿದ್ದು, ರಾಜಧಾನಿಯ ಮಾಲ್‌ನಲ್ಲಿ ಐದು ದಿನ ಕುಶಲಕರ್ಮಿಗಳಿಗೆ ಉಚಿತ ಮಳಿಗೆ ವ್ಯವಸ್ಥೆ ಮಾಡಿದೆ.

ಗ್ರಾಮೀಣ ಕೃಷಿ ಮತ್ತು ಕರಕುಶಲ ವಸ್ತುಗಳು ಕೇವಲ ಹಳ್ಳಿಗಾಡುಗಳಿಗೆ ಸೀಮಿತವಾಗಿರದೇ ಬೆಂಗಳೂರು ನಗರದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದ್ದು, ಅ.18ರಿಂದ 22ರವರಗೆ ಬೆಂಗಳೂರಿನ ಗರುಡಾ ಮಾಲ್‌ನಲ್ಲಿ ನಡೆಯುವ ಮೇಳದಲ್ಲಿ 40 ಮಳಿಗೆಗಳಲ್ಲಿ 250ರಿಂದ 300 ಕರಕುಶಲ ವಸ್ತುಗಳು ಮಾರಾಟಕ್ಕೆ ಇರಲಿದ್ದು, 17 ಮಳಿಗೆ ಕರ್ನಾಟಕದ ಕರಕುಶಲಕರ್ಮಿಗಳು ಹಾಗೂ 23 ಮಳಿಗೆಗಳಲ್ಲಿ ವಿವಿಧ ರಾಜ್ಯದವರು ತಮ್ಮ ಭಾಗದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಸಲಿದ್ದಾರೆ.

ಈ ಮೇಳದಲ್ಲಿ ಅಮೇಜಾನ್‌ ರೀತಿಯ ಆನ್‌ಲೈನ್‌ ಮಾರುಕಟ್ಟೆ ಸೇರಿ ರಾಜ್ಯ, ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಕಂಪನಿಗಳು ಭಾಗವಹಿಸಲಿದ್ದು, ಮಾರಾಟಗಾರರು ಮತ್ತು ಕಂಪನಿಗಳ ನಡುವೆ ಒಡಂಬಡಿಕೆ ಕೂಡ ಏರ್ಪಡಲಿದೆ. ಕೃಷಿ ಹಾಗೂ ಗ್ರಾಮೀಣಭಿವೃದ್ಧಿಯಲ್ಲಿ 37 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನಬಾರ್ಡ್‌, ದೇಶಾದ್ಯಂತ 300ಕ್ಕೂ ಅಧಿಕ ಸ್ವಾಯತ್ತ ಸಂಸ್ಥೆಗಳು, 242ಕ್ಕೂ ಅಧಿಕ ಕೃಷಿ ಉತ್ಪನ್ನ ಕಂಪನಿಗಳು, 49 ಸಾವಿರ ಸ್ವಸಹಾಯ ಸಂಘಗಳನ್ನು ನೇರವಾಗಿ ಹಾಗೂ ಪರೋಕ್ಷವಾಗಿ ಪೋಷಿಸುತ್ತಿದ್ದು, ಸಂಘಗಳ ಸದಸ್ಯರು ತಯಾರಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಮೇಳ ಆಯೋಜಿಸಿದೆ.

ಏನೆಲ್ಲ ವಸ್ತುಗಳ ಮಾರಾಟ?: ಕರ್ನಾಟಕದ ಮೊಳಕಾಲ್ಮೂರು ಸೀರೆ, ಕಸೂತಿ, ಹ್ಯಾಂಡ್‌ಲೂಮ್ಸ್‌, ಲಂಬಾಣಿ ಸಮುದಾಯದ ಆಭರಣಗಳು, ಚನ್ನಪಟ್ಟಣದ ಬೊಂಬೆ, ಮೈಸೂರಿನ ವಿಶಿಷ್ಟ ರೋಸ್‌ವುಡ್‌ ಕಲಾಕೃತಿಗಳು, ಫೈಬರ್‌ ಉತ್ಪನ್ನಗಳು, ಸಾವಯವ ಆಹಾರ ಪದಾರ್ಥ, ಸಾಂಬಾರು ಪದಾರ್ಥ, ಬಿದಿರಿನ ಉತ್ಪನ್ನ ಸೇರಿ ಹಲವು ಆಕರ್ಷಕ ವಸ್ತುಗಳು, ಛತ್ತಿಸ್‌ಗಢ, ಅಹಮದಾಬಾದ್‌, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಲಖನೌ, ಹರಿಯಾಣ, ಪಂಜಾಬ್‌, ಭೋಪಾಲ್‌, ಪಶ್ಚಿಮ ಬಂಗಾಳ, ಮಹರಾಷ್ಟ್ರ, ಒಡಿಶಾ ಸೇರಿ 21ಕ್ಕೂ ಅಧಿಕ ರಾಜ್ಯಗಳ ಕರಕುಶಲಕರ್ಮಿಗಳು ತಾವು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ.

ಕಳೆದ ವರ್ಷ ಜಯನಗರದಲ್ಲಿ ನಡೆದ ಗ್ರಾಮೀಣ ಹಬ್ಬದಲ್ಲಿ ಸುಮಾರು 40 ಲಕ್ಷ ರೂ. ಮೌಲ್ಯದ ವಸ್ತುಗಳು ಮಾರಾಟವಾಗಿದ್ದವು. ಹಾಗೇ ವಿವಿಧ ಕಂಪನಿಗಳು ರೈತರು ಮತ್ತು ಕಲಾವಿದರೊಡನೆ ಒಡಂಬಡಿಕೆ ಮಾಡಿಕೊಂಡಿದ್ದವು. ಪ್ರಸಕ್ತ ವರ್ಷ ನಬಾರ್ಡ್‌ನಿಂದ 18 ಲಕ್ಷ ರೂ. ವೆಚ್ಚದಲ್ಲಿ ಮೇಳ ಆಯೋಸಿದ್ದು, ಐದು ದಿನ ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು.
-ಪಿ.ವಿ.ಎಸ್‌.ಸೂರ್ಯಕುಮಾರ್‌, ನಬಾರ್ಡ್‌ ಮುಖ್ಯ ವ್ಯವಸ್ಥಾಪಕ ನಿರ್ವಾಹಕ

ಮರದ ಕೆತ್ತನೆ, ಅಗರಬತ್ತಿ, ದೇವರ ಮಂಟಪ ತಯಾರಿಸುವ ನಮಗೆ ಮಾರುಕಟ್ಟೆ ಸಮಸ್ಯೆ ಇತ್ತು. ಕಳೆದ ವರ್ಷ ಮೇಳದಲ್ಲಿ ಭಾಗವಹಿಸಿದ್ದರಿಂದ ನಮ್ಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ್ದು, ಪ್ರಸುತ ಮೂರು ಗುಂಪುಗಳಲ್ಲಿ 38 ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದಾರೆ.
-ಸಿದ್ದರಾಜು, ಮೈಸೂರಿನ ಕುಶಲಕರ್ಮಿ

* ಮಂಜುನಾಥ್‌ ಗಂಗಾವತಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.