ಬಸ್‌ಸ್ಟಾಂಡ್‌ ಮೇಲೆ ಮಾಲ್‌, ಥಿಯೇಟರ್‌


Team Udayavani, May 17, 2017, 11:33 AM IST

mall-theastre.jpg

ಬೆಂಗಳೂರು: ಬಸ್‌ ನಿಲ್ದಾಣ, ಮಾಲ್‌ ಮತ್ತು ಮಲ್ಟಿಪ್ಲೆಕ್ಸ್‌ ಥಿಯೇಟರ್‌, ಒಳಾಂಗಣ ಕ್ರೀಡಾಂ­ಗಣ… ಇದೆಲ್ಲವೂ ಒಂದೇ ಸೂರಿನಡಿ ಸಿಕ್ಕರೆ ಹೇಗಿರುತ್ತದೆ? ಹೌದು, ಬಿಎಂಟಿಸಿ ಬಸ್‌ ಟಿಟಿಎಂಸಿಗಳ ಮೇಲ್ಛಾ­ವಣಿಯಲ್ಲಿ ಶಾಪಿಂಗ್‌ ಮಾಲ್‌, ಮಲ್ಟಿಪ್ಲೆಕ್ಸ್‌ ಥಿಯೇಟರ್‌, ಶೆಟಲ್‌ ಬ್ಯಾಡ್ಮಿಂಟನ್‌ ಕೋರ್ಟ್‌, ಹೋಟೆಲ್‌ ಈ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಬಿಎಂಟಿಸಿ ಚಿಂತನೆ ನಡೆಸಿದ್ದು, ಶೂನ್ಯ ಬಂಡ­ವಾಳದಲ್ಲಿ ಆದಾಯ ವೃದ್ಧಿಯ ಜತೆಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲು ನಿಗಮವು ಈ ಐಡಿಯಾ ಮಾಡಿದೆ. 

ಅದರಂತೆ ಟಿಟಿಎಂಸಿ ಮೇಲ್ಛಾವಣಿಯಲ್ಲಿ ಕನಿಷ್ಠ 4 ಸಾವಿರ ಚದರಡಿಯಿಂದ ಗರಿಷ್ಠ 36 ಸಾವಿರ ಚದರಡಿ ಜಾಗ ಇದೆ. ಅಲ್ಲಿ ಈ “ಆಸ್ತಿ ಸೃಜನೆ’ (ಪ್ರಾಪರ್ಟಿ ಡೆವಲಪ್‌ಮೆಂಟ್‌)ಗೆ ನಿಗಮ ಮುಂದಾಗಿದ್ದು, ಈ ಸಂಬಂಧ ಟೆಂಡರ್‌ ಪ್ರಕ್ರಿಯೆಗೆ ಸಿದ್ಧತೆ ನಡೆಸಿದೆ. 

ಇದರ ಉದ್ದೇಶ ಜನರಿಗೆ ಹಲವು ಸೇವೆಗಳು ಒಂದೇ ಕಡೆ ಕಲ್ಪಿಸುವುದು. ಉದಾಹರಣೆಗೆ ಈಗಿರುವ ವ್ಯವಸ್ಥೆಯಲ್ಲಿ ಬಸ್‌ ನಿಲ್ದಾಣಕ್ಕೆ ಬಂದಿಳಿ­ಯುವ ಪ್ರಯಾಣಿಕರು ಥಿಯೇಟರ್‌ಗೆ ಹೋಗಬೇಕಾದರೆ, ಮತ್ತೂಂದು ದಿಕ್ಕಿಗೆ ತೆರಳಬೇಕು. ಕೆಲವರು ಇದೇ ಕಾರಣಕ್ಕೆ ನೇರವಾಗಿ ಆಟೋ ಅಥವಾ ಆ್ಯಪ್‌ ಆಧಾರಿತ ಟ್ಯಾಕ್ಸಿ ಬುಕ್‌ ಮಾಡಿ, ನೇರವಾಗಿ ಮಲ್ಟಿಪ್ಲೆಕ್ಸ್‌ ಅಥವಾ ಶಾಪಿಂಗ್‌ ಮಾಲ್‌ಗೆ ತೆರಳುತ್ತಾರೆ. ಇದೆಲ್ಲವೂ ಒಂದೇ ಕಡೆ ಸಿಕ್ಕರೆ ಜನ ಸಾರ್ವಜನಿಕ ಸಾರಿಗೆಯತ್ತ ಮುಖಮಾಡುತ್ತಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸುತ್ತಾರೆ. 

ಎಲ್ಲೆಲ್ಲಿ ಯೋಜನೆ?: ವಿಜಯನಗರ, ಬನಶಂಕರಿ, ಕೆಂಗೇರಿ, ಯಶವಂತಪುರ, ಯಲಹಂಕ ಓಲ್ಡ್‌ ಟೌನ್‌, ಇಸ್ರೋ ಲೇಔಟ್‌ನಲ್ಲಿರುವ ಟಿಟಿಎಂಸಿಗಳ ಮೇಲ್ಛಾವಣಿಯಲ್ಲಿ ಖಾಲಿ ಇರುವ ಜಾಗದಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಇಸ್ರೋ ಲೇಔಟ್‌ನಲ್ಲಿ ಶೆಟಲ್‌ ಬ್ಯಾಡ್ಮಿಂಟನ್‌ ಕೋರ್ಟ್‌ ಹಾಗೂ ಉಳಿದೆಡೆ ಮಲ್ಟಿಪ್ಲೆಕ್ಸ್‌ ಥಿಯೇಟರ್‌ ನಿರ್ಮಿಸಲು ಉದ್ಯಮಿಗಳು ಮುಂದೆಬಂದಿದ್ದಾರೆ. 

ಟೆಂಡರ್‌ ಮೂಲಕ 12 ವರ್ಷಗಳ ಮಟ್ಟಿಗೆ ಗುತ್ತಿಗೆ ನೀಡಲಾಗುವುದು. ಇದರಲ್ಲಿ ನಿಗಮದ ಯಾವುದೇ ಬಂಡವಾಳ ಇರುವುದಿಲ್ಲ. ಬದಲಿಗೆ ಖಾಲಿ ಇರುವ ಜಾಗದಲ್ಲಿ ಈ ಸೇವೆಗಳು ಲಭ್ಯವಾ­ಗುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಜತೆಗೆ ಆದಾಯವೂ ಹರಿದುಬರುತ್ತದೆ ಎಂದೂ ಅಧಿಕಾರಿಗಳು ಹೇಳಿದರು. 

ನಗರದಲ್ಲಿ ಹತ್ತು ಟಿಟಿಎಂಸಿಗಳು ಸೇರಿದಂತೆ ಎಲ್ಲ ನಿಲ್ದಾಣಗಳಲ್ಲಿರುವ ಮಳಿಗೆಗಳಿಂದ ಬರುವ ಬಾಡಿಗೆ ವಾರ್ಷಿಕ 5 ಕೋಟಿ ರೂ. ಹಾಗೊಂದು ವೇಳೆ ಉದ್ದೇಶಿತ ಆರು ಟಿಟಿಎಂಸಿ ಮೇಲ್ಛಾವಣಿಯಲ್ಲಿ ಹೂಡಿಕೆ ಮಾಡಿದರೆ, ಹೆಚ್ಚು-ಕಡಿಮೆ ಇಷ್ಟೇ ಆದಾಯ ಬರುವ ಸಾಧ್ಯತೆ ಇದೆ. ಆದರೆ, ಈಗಲೇ ಈ ಬಗ್ಗೆ ನಿಖರವಾಗಿ ಹೇಳುವುದು ಕಷ್ಟ ಎಂದು ವಾಣಿಜ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ಮೆಟ್ರೋ ಪ್ರೇರಣೆ?
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ)ವು “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ಹೋಟೆಲ್‌, ಕಾಫಿ ಡೇ ಸೇರಿದಂತೆ ಹತ್ತುಹಲವು ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿ ಕೊಟ್ಟಿದೆ. ಇದರಿಂದ ಪ್ರಸಕ್ತ ಸಾಲಿನಲ್ಲಿ ಸುಮಾರು 25 ಕೋಟಿ ರೂ. ಆದಾಯ ಹರಿದುಬಂದಿದೆ.  ಮುಂದಿನ ದಿನಗಳಲ್ಲಿ ನಿಗಮವು ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಮಾಲ್‌, ಥಿಯೇಟರ್‌ನಂತಹ ವಿವಿಧ ಯೋಜನೆಗಳಿಗೆ ಕೈಹಾಕಲು ಉದ್ದೇಶಿಸಿದೆ. ಈ ಪ್ರಯೋಗವನ್ನು ಬಿಎಂಟಿಸಿ ಕೂಡ ತನ್ನ ಟಿಟಿಎಂಸಿಗಳಲ್ಲಿ ಮಾಡಲು ಮುಂದಾಗಿದೆ ಎನ್ನಲಾಗಿದೆ. 

ಪ್ರಯೋಗ ಹೊಸದು
ಈ ಹಿಂದೆ ಬಿಎಂಟಿಸಿಯು ಜಯನಗರ ಮತ್ತಿತರ ಟಿಟಿಎಂಸಿಗಳನ್ನು ಬಿಗ್‌ ಬಜಾರ್‌ ಸೇರಿದಂತೆ ಹಲವು ವಾಣಿಜ್ಯ ಚಟುವಟಿಕೆಗಳಿಗೆ ನೀಡಿದೆ. ಹಾಗಾಗಿ, ಬಿಎಂಆರ್‌ಸಿಯ ಪ್ರೇರಣೆ ಎನ್ನಲಾಗದು. ಆದರೆ, ಮೇಲ್ಛಾವಣಿಯಲ್ಲಿ ಈ ಪ್ರಯೋಗ ಹೊಸದು. ಅಷ್ಟಕ್ಕೂ ಸುಮಾರು ದಿನಗಳಿಂದ ಈ ಚಿಂತನೆ ನಡೆದಿದೆ. ಇದುವರೆಗೆ ಮಂಡಳಿಯಲ್ಲಿ ಅನುಮೋದನೆಗೊಂಡಿಲ್ಲ ಎಂದೂ ಅಧಿಕಾರಿಯೊಬ್ಬರು ಅನುಮಾನ ವ್ಯಕ್ತಪಡಿಸುತ್ತಾರೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.