ಪತ್ನಿಯ ಕೊಂದಿದ್ದ ಆರೋಪಿ ತಮಿಳುನಾಡಲ್ಲಿ ಸೆರೆ
Team Udayavani, Jul 16, 2019, 3:02 AM IST
ಬೆಂಗಳೂರು: ಪತ್ನಿ ಮೇಲೆ ಅನುಮಾನಗೊಂಡು ಆಕೆ ಮಲಗಿದ್ದಾಗ ಖಾಲಿ ಸಿಲಿಂಡರ್ನಿಂದ ಹೊಡೆದು ಹತ್ಯೆಗೈದು ತಮಿಳುನಾಡಿನ ಧರ್ಮಪುರಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪತಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಕೋಲೇಔಟ್ನ ಬಿಳೇಕಳ್ಳಿ ನಿವಾಸಿ ಚಿನ್ನಸ್ವಾಮಿ (40) ಬಂಧಿತ. ಜು.12 ರ ತಡರಾತ್ರಿ ಆರೋಪಿ, ಪತ್ನಿ ಉಮಾರಾಣಿ (30)ಯನ್ನು ಖಾಲಿ ಸಿಲಿಂಡರ್ನಿಂದ ಮೂರು ಬಾರಿ ಹೊಡೆದು ಹತ್ಯೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ತಮಿಳುನಾಡಿನ ಧರ್ಮಪುರಿ ಮೂಲದ ಚಿನ್ನಸ್ವಾಮಿ ಮತ್ತು ಉಮಾರಾಣಿ ದಂಪತಿ 15 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಬಿಳೇಕಳ್ಳಿಯಲ್ಲಿ ವಾಸವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ಉಮಾರಾಣಿ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ಕೀಪಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಚಿನ್ನಸ್ವಾಮಿ ಗುಜುರಿ ವ್ಯಾಪಾರ ಮಾಡುತ್ತಿದ್ದ.
ಇತ್ತೀಚೆಗೆ ಪತ್ನಿ ಉಮಾರಾಣಿ ಮೇಲೆ ಅನುಮಾನಗೊಂಡಿದ್ದ ಆರೋಪಿ, ಆಕೆಯೊಂದಿಗೆ ನಿತ್ಯ ಜಗಳ ಆಡುತ್ತಿದ್ದ. ಅಲ್ಲದೆ, ಮದ್ಯ ಸೇವಿಸಿ ಆಕೆ ಮೇಲೆ ಹಲ್ಲೆ ಕೂಡ ನಡೆಸುತ್ತಿದ್ದ. ಶನಿವಾರ ರಾತ್ರಿ ದಂಪತಿ ನಡುವೆ ಇದೇ ವಿಚಾರಕ್ಕೆ ಜಗಳ ನಡೆದಿದ್ದು, ಕೆಲ ಹೊತ್ತಿನ ಬಳಿಕ ಪತ್ನಿ ಉಮಾರಾಣಿ ಮಲಗಿದ್ದಾರೆ.
ತಡರಾತ್ರಿ 2 ಗಂಟೆ ಸುಮಾರಿಗೆ ಆರೋಪಿ ಮನೆಯಲ್ಲಿದ್ದ ಖಾಲಿ ಸಿಲಿಂಡರ್ನಿಂದ ಪತ್ನಿಗೆ ಮೂರು ಬಾರಿ ಹೊಡೆದು ಹತ್ಯೆಗೈದಿದ್ದಾನೆ. ಅದನ್ನು ಕಂಡ ಮಕ್ಕಳು ಜೋರಾಗಿ ಕೂಗಲಾರಂಭಿಸಿದ್ದಾರೆ. ಹೆದರಿದ ಆರೋಪಿ ಬಾಗಿಲು ಹಾಕಿಕೊಂಡು ತಲೆಮರೆಸಿಕೊಂಡಿದ್ದ. ವಿಶೇಷ ಕಾರ್ಯಾಚರಣೆ ನಡೆಸಿದ ಮೈಕೋ ಲೇಔಟ್ ಪೊಲೀಸರು ಸೋಮವಾರ ತಮಿಳುನಾಡಿನ ಧರ್ಮಪುರಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ