ಬರ್ತ್‌ಡೇಗೆ ಕರೆಸಿ ಪ್ರೇಯಸಿ ಕತ್ತು ಕತ್ತರಿಸಿದ

ಯುವತಿ ವರಸೆಯಲ್ಲಿ ತಂಗಿ ಆಗಿದ್ದರೂ ಪ್ರೀತಿಸುತ್ತಿದ್ದ ಪಾಗಲ್‌ ಪ್ರೇಮಿ

Team Udayavani, Apr 16, 2023, 1:08 PM IST

ಬರ್ತ್‌ಡೇಗೆ ಕರೆಸಿ ಪ್ರೇಯಸಿ ಕತ್ತು ಕತ್ತರಿಸಿದ

ಬೆಂಗಳೂರು: ಹುಟ್ಟುಹಬ್ಬದ ಆಚರಣೆಗೆಂದು ಪ್ರೇಯಸಿ ಕರೆದು ಕೇಕ್‌ ಕತ್ತರಿಸುತ್ತಿದ್ದಂತೆ ಆಕೆಯ ಕತ್ತು ಕತ್ತರಿಸಿ ಹತ್ಯೆಗೈದ ಪ್ರಿಯಕನೊಬ್ಬ ಕೊನೆಗೆ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.

ಕೋರಮಂಗಲ ನಿವಾಸಿ ನವ್ಯಾ(25) ಹತ್ಯೆಯಾದವರು. ಆಕೆಯ ಪ್ರಿಯಕರ ಹಾಗೂ ದೂರದ ಸಂಬಂಧಿ ಪ್ರಶಾಂತ್‌ ಪೊಲೀಸರಿಗೆ ಶರಣಾಗಿದ್ದಾನೆ.

ಕನಕಪುರ ಮೂಲದ ನವ್ಯಾ ಮತ್ತು ಪ್ರಶಾಂತ್‌ ದೂರದ ಸಂಬಂಧಿಯಾಗಿದ್ದಾರೆ. ನವ್ಯಾ ತಂದೆ ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರ ಉದ್ಯೋಗವನ್ನು ಕೊನೆ ಮಗಳು ನವ್ಯಾಗೆ ನೀಡಲಾಗಿತ್ತು. ಒಂದೂವರೆ ವರ್ಷಗಳಿಂದ ಆಂತರಿಕಾ ಭದ್ರತಾ ವಿಭಾಗದಲ್ಲಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದರು. ಪ್ರಶಾಂತ್‌ ಲಗ್ಗೆರೆಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದು, ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದು, ನವ್ಯಾ ಮತ್ತು ಪ್ರಶಾಂತ್‌ ಆರೇಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ವರಸೆಯಲ್ಲಿ ಅಣ್ಣ-ತಂಗಿ: ಪ್ರಶಾಂತ್‌ ಮತ್ತು ನವ್ಯಾ ವಿಚಾರ ಮನೆಯವರಿಗೆ ಗೊತ್ತಾಗಿ, ಪರಿಶೀಲಿಸಿದಾಗ ಇಬ್ಬರು ವರಸೆಯಲ್ಲಿ ಅಣ್ಣ-ತಂಗಿ ಆಗುತ್ತಾರೆ ಎಂಬುದು ಗೊತ್ತಾಗಿದೆ. ಹೀಗಾಗಿ 2-3 ವರ್ಷಗಳ ಹಿಂದೆ ಹಿರಿಯರು ಇಬ್ಬರಿಗೂ ಬುದ್ಧಿವಾದ ಹೇಳಿದ್ದರು. ಹೀಗಾಗಿ ಇಬ್ಬರು ದೂರವಾಗಿದ್ದರು. ಆದರೆ, ಪ್ರಶಾಂತ್‌, ನವ್ಯಾಳ ಫೋಟೋವನ್ನು ಎದೆ ಮೇಲೆ ಹಚ್ಚೆ ಹಾಕಿಕೊಂಡಿದ್ದು, ಆಗಾಗ್ಗಿ ಕರೆ ಮಾಡಿ ಗಂಟೆಗಟ್ಟಲೇ ಮಾತನಾಡುತ್ತಿದ್ದ. ಮತ್ತೂಂದೆಡೆ ಆಕೆಗೆ ಸರ್ಕಾರಿ ಉದ್ಯೋಗ ಸಿಕ್ಕಿದೆ ಎಂಬುದು ಗೊತ್ತಾಗುತ್ತಿದ್ದಂತೆ ಆಕೆಗೆ ಇನ್ನಷ್ಟು ಹತ್ತಿರವಾಗಲೂ ಮುಂದಾಗಿದ್ದಾನೆ. ಆದರೆ, ಆಕೆ ಹಿರಿಯರ ಸೂಚನೆ ಮೇರೆಗೆ ಅಂತರ ಕಾಯ್ದುಕೊಂಡಿದ್ದಳು ಎಂಬುದು ಗೊತ್ತಾಗಿದೆ.

ಸಹೋದ್ಯೋಗಿ ಜತೆ ಚಾಟಿಂಗ್‌: ಇದೇ ವೇಳೆ ನವ್ಯಾ ತನ್ನ ಸಹೋದ್ಯೋಗಿ ಯುವಕನೊಬ್ಬನ ಜತೆ ಆತ್ಮೀಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಆತನೊಂದಿಗೆ ಹೆಚ್ಚು ಚಾಟಿಂಗ್‌ ಮಾಡುತ್ತಿದ್ದಳು. ಕಚೇರಿ ವೇಳೆಯಲ್ಲೂ ಆತ್ಮೀಯವಾಗಿರುತ್ತಿದ್ದರು. ಈ ವಿಚಾರ ತಿಳಿದ ಪೋಷಕರು ಅನ್ಯ ಜಾತಿಯಾದ್ದರಿಂದ ಮದುವೆಗೆ ನಿರಾಕರಿಸಿದ್ದರು. ಆಗಲೂ ನವ್ಯಾಗೆ ಮನೆಯವರು ಎಚ್ಚರಿಕೆ ನೀಡಿದ್ದರು. ಹೀಗಾಗಿ ಕೆಲ ದಿನಗಳಿಂದ ಸಹೋದ್ಯೋಗಿ ಸ್ನೇಹಿತನಿಂದಲೂ ಅಂತರ ಕಾಯ್ದುಕೊಂಡಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಹುಟ್ಟುಹಬ್ಬಕ್ಕೆ ಕರೆದು, ಹತ್ಯೆ: ಏ.18ರಂದು ನವ್ಯಾಳ ಹುಟ್ಟುಹಬ್ಬ ಇತ್ತು. ಪ್ರಶಾಂತ್‌ ಕರೆ ಮಾಡಿ, ಏ.18ರಂದು ತನ್ನೊಂದಿಗೆ ಹುಟ್ಟುಹಬ್ಬ ಆಚರಿಸಬೇಕೆಂದು ಬೇಡಿಕೆ ಇಟ್ಟಿದ್ದ. ಆದರೆ, ನವ್ಯಾ ಅಂದು ಬಿಡುವಿಲ್ಲ ಎಂದಿದ್ದಳು. ಹೀಗಾಗಿ ನಾಲ್ಕು ದಿನ ಮುಂಗಡವಾಗಿಯೇ ಹುಟ್ಟುಹಬ್ಬ ಆಚರಣೆ ಮಾಡೋಣ ಎಂದು ಲಗ್ಗೆರೆಯಲ್ಲಿರುವ ತನ್ನ ರೂಮ್‌ಗೆ ಆಹ್ವಾನಿಸಿದ್ದಾನೆ. ಏ.14ರಂದು ಅಂಬೇಡ್ಕರ್‌ ಜಯಂತಿ ಹಿನ್ನೆಲೆಯಲ್ಲಿ ಆಕೆ ಮಧ್ಯಾಹ್ನವೇ ಆತನ ರೂಮ್‌ಗೆ ಹೋಗಿದ್ದಾಳೆ. ಬಳಿಕ ತಾನೇ ತಂದಿದ್ದ ಕೇಕ್‌ ಕತ್ತರಿಸುವಂತೆ ಹೇಳಿದ ಪ್ರಶಾಂತ್‌, ಆಕೆ ಕೇಕ್‌ ಕತ್ತರಿಸುವ ಫೋಟೋಗಳನ್ನು ತೆಗೆದು, ಪರಸ್ಪರ ತಿನ್ನಿಸಿದ್ದಾರೆ. ಈ ಮಧ್ಯೆ ಸಹೋದ್ಯೋಗಿ ಸ್ನೇಹಿತನ ವಾಟ್ಸ್ ಆ್ಯಪ್‌ ಸಂದೇಶ ಬಂದಿದ್ದು, ಅದಕ್ಕೆ ಆಕೆ ಪ್ರತಿಕ್ರಿಯೆ ನೀಡಿದ್ದಾಳೆ. ಅದರಿಂದ ಆಕ್ರೋಶಗೊಂಡ ಆರೋಪಿ, ನವ್ಯಾ ಜತೆ ವಾಗ್ವಾದ ನಡೆಸಿದ್ದಾನೆ. ಕೊನೆಗೆ ತರಕಾರಿ ಹಚ್ಚುವ ಚಾಕುವಿನಿಂದ ಆಕೆಯ ಕುತ್ತಿಗೆ ಭಾಗದಲ್ಲಿ ಐದಾರು ಬಾರಿ ಇರಿದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.

ಐದಾರು ಗಂಟೆ ಮೃತದೇಹದ ಬಳಿಯಿದ್ದ! : ಸಂಜೆ ನಾಲ್ಕು ಗಂಟೆ ಸುಮಾರಿಗೆ ಪ್ರೇಯಸಿಯನ್ನು ಹತ್ಯೆಗೈದ ಪ್ರಶಾಂತ್‌ ರಾತ್ರಿ 10 ಗಂಟೆವರೆಗೂ ಮೃತದೇಹದ ಬಳಿಯೇ ಇದ್ದ. ಈ ಮಧ್ಯೆ ತನ್ನ ಮನೆಯವರಿಗೆ, ಸ್ನೇಹಿತರಿಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಲು ಯತ್ನಿಸಿದ್ದಾನೆ. ಆದರೆ, ಯಾರು ಕರೆ ಸ್ವೀಕರಿಸಿಲ್ಲ. ಹೀಗಾಗಿ ರಾತ್ರಿ 10 ಗಂಟೆ ಸುಮಾರಿಗೆ ರಾಜಗೋಪಾಲನಗರ ಠಾಣೆಗೆ ಚಾಕು ಸಮೇತ ಹಾಜರಾಗಿ ಹತ್ಯೆ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರಂಭದಲ್ಲಿ ಆಕೆಯ ಡಿಜಿಪಿ ಕಚೇರಿಯ ಉದ್ಯೋಗಿ ಎಂದಿದ್ದ. ಆದರೆ, ಆತನ ಮೊಬೈಲ್‌ನಲ್ಲಿದ್ದ ಫೋಟೋದಿಂದ ಆಕೆ ಐಎಸ್‌ಡಿಯಲ್ಲಿ ಕೆಲಸ ಮಾಡುತ್ತಿರುವುದು ಗೊತ್ತಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಹೋದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು ಎಂದು ಪೊಲೀಸರು ಹೇಳಿದರು. ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.