ತಬ್ಬಿಕೊಳ್ಳುವ ನೆಪದಲ್ಲಿ ವ್ಯಕ್ತಿಯ ಚಿನ್ನದ ಸರ ಕದ್ದ ತೃತೀಯ ಲಿಂಗಿ
Team Udayavani, Jan 15, 2023, 1:08 PM IST
ಬೆಂಗಳೂರು: ತೃತೀಯ ಲಿಂಗಿಯೊಬ್ಬರು ತಬ್ಬಿಕೊಳ್ಳುವ ನೆಪದಲ್ಲಿ ಕ್ಯಾಬ್ಗ ಕಾಯುತ್ತಿದ್ದ ವ್ಯಕ್ತಿಯ ಚಿನ್ನದ ಸರ ದೋಚಿರುವ ಘಟನೆ ಎಂ.ಜಿ.ರಸ್ತೆಯಲ್ಲಿ ನಡೆದಿದೆ.
ತಮಿಳುನಾಡಿನ ಚೆನ್ನೈ ಮೂಲದ 34 ವರ್ಷದ ವ್ಯಕ್ತಿ ಸರ ಕಳೆದುಕೊಂಡವರು.
ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ಜ.8ಕ್ಕೆ ಬೆಂಗ ಳೂರಿಗೆ ಬಂದು ಎಂ.ಜಿ. ರಸ್ತೆಯಲ್ಲಿ ಬೆಳಗಿನ ಜಾವ 3 ಗಂಟೆಯಲ್ಲಿ ಸ್ನೇಹಿತನ ಜತೆಗೆ ಕ್ಯಾಬ್ಗ ಕಾಯುತ್ತಿ ದ್ದರು. ಆಗ ಅಲ್ಲಿಗೆ ಬಂದ ತೃತೀಯ ಲಿಂಗಿ, ದೂರು ದಾರನೊಂದಿಗೆ ಅಸಭ್ಯ ವಾಗಿ ವರ್ತಿಸಲು ಮುಂದಾಗಿದ್ದಾರೆ. ಅದಕ್ಕೆ ದೂರು ದಾರ ಒಪ್ಪದಿದ್ದಾಗ ಮೂರ್ನಾಲ್ಕು ಬಾರಿ ತಬ್ಬಿಕೊಂಡು ಕತ್ತಿನ ಲ್ಲಿದ್ದ 1.64 ಲಕ್ಷ ರೂ. ಮೌಲ್ಯದ 32 ಗ್ರಾಂ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ.
ಕೆಲ ಹೊತ್ತಿನ ಬಳಿಕ ಕುತ್ತಿಗೆ ಬಳಿ ಕೈ ಹಾಕಿದಾಗ ಸರ ಕಸಿದು ಕಳುವಾ ಗಿರುವುದು ಗೊತ್ತಾಗಿದೆ. ನಂತರ ಸ್ನೇಹಿ ತನ ಜತೆ ಅಕ್ಕಪಕ್ಕದ ರಸ್ತೆ ಯಲ್ಲಿ ಹುಡು ಕಾಟ ನಡೆಸಿ, ಪತ್ತೆಯಾಗ ದಿದ್ದಾಗ ಕೊನೆಗೆ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು