ಕುಡಿಯಲು ಹಣ ನೀಡದ್ದಕ್ಕೆ ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ!


Team Udayavani, Mar 12, 2022, 10:33 AM IST

ಕುಡಿಯಲು ಹಣ ನೀಡದ್ದಕ್ಕೆ ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ!

ಬೆಂಗಳೂರು: ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯೇ ಗರ್ಭಿಣಿ ಪತ್ನಿಗೆ ಡಿಸೇಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಘಟನೆ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಜತೆಗೆ ಎರಡೂವರೆ ವರ್ಷದ ಮಗು ಮೇಲೂ ಹಲ್ಲೆ ನಡೆಸಿದ್ದಾನೆ.

ಹಳೇ ಬೈಯಪ್ಪನಹಳ್ಳಿ ನಿವಾಸಿ ಮೀನಾ (24) ಗಾಯಗೊಂಡ ಮಹಿಳೆ. ಈ ಸಂಬಂಧ ಆಕೆಯ 2ನೇ ಪತಿ ಬಾಬು(37)ನನ್ನು ಬಂಧಿಸಲಾಗಿದೆ.

ಮೀನಾ ಈ ಮೊದಲು ವಿಜಯಕಾಂತ್‌ ಎಂಬವರನ್ನು ಮದುವೆಯಾಗಿದ್ದು, ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದರು. 6 ತಿಂಗಳ ಹಿಂದೆ ವಿಜಯಕಾಂತ್‌ ಮೃತಪಟ್ಟಿದ್ದರು. ಇನ್ನು ಬಾಬು ಮೊದಲ ಪತ್ನಿಯಿಂದ ದೂರವಾಗಿದ್ದು, ಒಬ್ಬನೆ ವಾಸಿಸುತ್ತಿದ್ದ. ಕೋರಿಯರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಕೂಲಿ ಕೆಲಸ ಮಾಡುವ ಮೀನಾ ಪರಿಚಯವಾಗಿದ್ದು, ಇಬ್ಬರು ಎರಡನೇ ಮದುವೆಯಾಗಿದ್ದಾರೆ. ಹೀಗಾಗಿ ಮೀನಾ ತನ್ನ ಮೂವರು ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಇರಿಸಿದ್ದರು. ದಂಪತಿ ಹಳೇ ಬೈಯಪ್ಪನಹಳ್ಳಿಯಲ್ಲಿ ವಾಸವಾಗಿದ್ದರು.

ಇದನ್ನೂ ಓದಿ:ಮನೆ ಮೇಲೆ ದಾಳಿ ಮಾಡಲು ಬಂದ ಅರಣ್ಯಾಧಿಕಾರಿಗಳನ್ನು 2 ಗಂಟೆ ಕೂಡಿ ಹಾಕಿದ ಗ್ರಾಮಸ್ಥರು

ಈ ಮಧ್ಯೆ ಬಾಬು ಕಂಠ ಪೂರ್ತಿ ಮದ್ಯ ಸೇವಿಸಿ ನಿತ್ಯ ಜಗಳ ಮಾಡುತ್ತಿದ್ದ. ಜತೆಗೆ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ. ಅದರಿಂದ ಬೇಸತ್ತ ಮೀನಾ, ಗರ್ಭಿಣಿಯಾಗಿದ್ದೇನೆ. ಇದೇ ರೀತಿ ಹಿಂಸೆ ಕೊಟ್ಟರೆ ಡಿಸೇಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದರು. ಗುರುವಾರ ಕೂಡ ದಂಪತಿ ನಡುವೆ ಗಲಾಟೆಯಾಗಿದೆ. ಆಗ ಕೋಪಗೊಂಡ ಆರೋಪಿ, ಯಾವಾಗಲೂ ಬೆಂಕಿ ಹಚ್ಚಿಕೊಂಡು ಸಾಯುತ್ತೇನೆ ಎಂದು ಹೇಳುತ್ತಿದೆ ಅಲ್ಲವೇ? ಇವತ್ತು ನಾನೇ ಬೆಂಕಿ ಹಚ್ಚುತ್ತೇನೆ ಎಂದು ಮನೆ ಯಲ್ಲಿದ್ದ ಡಿಸೇಲ್‌ ಸುರಿದು ಬೆಂಕಿ ಹಚ್ಚಿದ್ದಾನೆ.

ಗರ್ಭಿಣಿ ಆಗಿರುವ ಮೀನಾ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವೇಳೆ ಮೀನಾ ಅವರ ಮೊದಲ ಪತಿಯ ಮಗಳು ಮನೆಯಲ್ಲಿದ್ದು, ಆಕೆಗೂ ಆರೋಪಿ ಕಚ್ಚಿ ಗಾಯಗೊಳಿಸಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.