ಬೆಂಗಳೂರಿನಲ್ಲಿ ಮಗು ಕೊಂದು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಗೃಹಿಣಿ
Team Udayavani, Apr 21, 2022, 11:05 AM IST
ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್ ಶೆಟ್ಟಿ ಮೃತಪಟ್ಟ ತಾಯಿ-ಮಗ.
ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಪುರ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಏ.17ರಂದು ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
36 ವರ್ಷದ ರೋಹಿಣಿ ಗೃಹಿಣಿಯಾಗಿದ್ದರು. ಪತಿ ಪ್ರವೀಣ್ ಖಾಸಗಿ ಕಂಪೆನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ರೋಹಿಣಿ ತಾಯಿ 12 ವರ್ಷಗಳ ಹಿಂದೆ ನೇಣು ಬಿಗಿದು ಕೊಂಡು ಸಾವನ್ನಪ್ಪಿದ್ದರು. ಆಗಿನಿಂದಲೂ ಮಾನಸಿಕ ಖನ್ನತೆಗೆ ಒಳಗಾಗಿದ್ದ ರೋಹಿಣಿ, ಮದುವೆಯಾದ ಬಳಿಕವೂ ಎರಡು-ಮೂರು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.
ಇದನ್ನೂ ಓದಿ:ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಮಹಿಳಾ ಇನ್ಸ್ಪೆಕ್ಟರ್
ಏ.17 ರಂದು ರಾತ್ರಿ ಊಟ ಮುಗಿಸಿ ಪ್ರತ್ಯೇಕ ಕೊಠಡಿಯಲ್ಲಿ ತಾಯಿ-ಮಗ ಹಾಗೂ ಪತಿ ಪ್ರವೀಣ್ ಮಲಗಿದ್ದರು. ಮಾರನೇ ದಿನ ಬೆಳಗ್ಗೆ ಪ್ರವೀಣ್, ಹೆಂಡತಿ ಮಲಗಿದ್ದ ಕೊಠಡಿ ಕದ ತಟ್ಟಿದ್ದು, ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಕಂಡು ಅನುಮಾನ ಉಂಟಾಗಿದೆ. ಬಳಿಕ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ಒಳ ಹೋದಾಗ ತಾಯಿ-ಮಗ ಆತ್ಮಹತ್ಯೆ ಮಾಡಿ ಕೊಂಡಿರುವುದು ಬೆಳಕಿಗೆ ಬಂದಿದೆ.
ಐದು ವರ್ಷದ ಮಗನನ್ನು ಸಾಯಿಸಿ ಬಳಿಕ ಅದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಅಸಹಜ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ