ತಿಂಗಳಾಂತ್ಯಕ್ಕೆ ಮಾವು ಮೇಳಗಳು ಆರಂಭ


Team Udayavani, May 13, 2019, 3:06 AM IST

tinglantya

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಾವು-ಹಲಸು ಮೇಳ ಏರ್ಪಡಿಸಲು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ಹಾಗೂ ರಾಜ್ಯ ತೋಟಗಾರಿಕೆ ಇಲಾಖೆ ಮುಂದಾಗಿದೆ.

ಈಗಾಲೇ ಸುಗ್ಗಿ ಆರಂಭವಾಗಿ ತಿಂಗಳು ಕಳೆದೆ. ಆದರೂ ಸಿಲಿಕಾನ್‌ ಸಿಟಿಯಲ್ಲಿ ಇನ್ನು ಮಾವು ಮೇಳೆ ಆರಂಭವಾದೆ ಮಾವು ಪ್ರಿಯರು ಎದುರು ನೋಡುವಂತಾಗಿದೆ. ಚುನಾವಣೆ ಹಾಗೂ ಮಾವಿನ ಫಸಲು ತಡವಾದ್ದರಿಂದ ಮೇಳವೂ ತಡವಾಗಿದ್ದು, ಮೇ 30 ರಿಂದ ಲಾಲ್‌ಬಾಗ್‌ನಲ್ಲಿ ಹಾಗೂ ಜೂನ್‌ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯಗಳಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದೆ ಎಂದು ಮಾವು ನಿಗಮ ತಿಳಿಸಿದೆ.

ಇದರ ಜತೆಗೆ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯು ಮೇ 28 ಮತ್ತು 29ರಂದು ಹೆಸರಘಟ್ಟದ ಐಸಿಎಆರ್‌-ಐಐಎಚ್‌ಆರ್‌ ಪ್ರಾಂಗಣದಲ್ಲಿ ಮಾವು ಮತ್ತು ಹಲಸು ವೈವಿಧ್ಯತಾ ಮೇಳ, ಜೂ.1 ಮತ್ತು 2 ರಂದು ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಮಾವು ಮತ್ತು ಹಲಸು ವೈವಿಧ್ಯತಾ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳಗಳ ಉದ್ದೇಶ ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರು ನೇರವಾಗಿ ಗ್ರಾಹಕರಿಗೆ ತಾಜಾ ಹಾಗೂ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಬೇಕು ಎಂಬುದಾಗಿದೆ. ಲಾಲ್‌ಬಾಗ್‌ನಲ್ಲಿ ನಡೆಯುವ ಮೇಳಕ್ಕೆ ಕೋಲಾರ ಮತ್ತಿತರ ಭಾಗಗಳಿಂದ ತೋತಾಪುರಿ, ಮಲಗೋವಾ, ನೀಲಂ, ಆಮ್ರಪಾಲಿ, ಬಂಗನಪಲ್ಲಿ, ತೋತಾಪುರಿ ಸೇರಿದಂತೆ 12 ಬಗೆಯ ವಾಣಿಜ್ಯ ಮಾವಿನ ತಳಿಗಳು, ಜಿಕೆವಿಕೆ, ಐಐಎಚ್‌ಆರ್‌ಗಳಲ್ಲಿ ಸಂಶೋಧನೆ ನಡೆಸಿದ ಹೊಸ ಹಲಸಿನ ತಳಿಗಳು ಹಾಗೂ ರೈತರು ಬೆಳೆದ ನಾನಾ ತಳಿಯ ಹಲಸಿನ ಬರಲಿವೆ. ಇನ್ನು ಈ ವರ್ಷ ಜುಲೈ ಅಂತ್ಯದವರೆಗೆ ಹಣ್ಣು ಗ್ರಾಹಕರಿಗೆ ಲಭ್ಯವಾಗಲಿವೆ.

ರಾಸಾಯನಿಕ ಮಾವಿಗಿಲ್ಲ ಅವಕಾಶ: ಮೇಳಗಳಲ್ಲಿ ಯಾವುದೇ ರಾಸಾಯನಿಕಗಳನ್ನು ಬಳಸದೆ ಸಹಜವಾಗಿ ಮಾಗಿಸಿದ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಕೃತಕವಾಗಿ ಮಾಗಿಸಿದ ಮಾವು ಮೇಳದಲ್ಲಿ ನಿಷೇಧ. ಇನ್ನು ಹಣ್ಣಿನ ಗುಣಮಟ್ಟ, ದರ ನಿಗದಿಗೆ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರು ರಾಸಾಯನಿಕ ಬಳಸಿದ ಹಣ್ಣುಗಳ ಬಗ್ಗೆ ನಿಗಾ ವಹಿಸುತ್ತದೆ.

“ಮ್ಯಾಂಗೊ ಪಿಕ್ಕಿಂಗ್‌ ಟೂರ್‌’: ಗ್ರಾಹಕರು ನೇರವಾಗಿ ತೋಟಕ್ಕೆ ಲಗ್ಗೆ ಇಟ್ಟು ಮರದಿಂದ ಮಾವು ಕಿತ್ತು ಸವಿಯಲೆಂದೇ ಮಾವು ನಿಗಮದ ವತಿಯಿಂದ ಈ ಬಾರಿಯೂ ಮ್ಯಾಂಗೊ ಪಿಕ್ಕಿಂಗ್‌ ಟೂರ್‌ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಮಾವು ನಿಗಮದ ವೆಬ್‌ಸೈಟ್‌ನಲ್ಲಿ ನೋಂದಣಿ ಆರಂಭವಾಗಿದ್ದು, ಭಾನುವಾರದಂದು ಬೆಂಗಳೂರಿನಿಂದ ಸಾರ್ವಜನಿಕರನ್ನು ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳ ಯಾವುದಾದರೊಂದು ಮಾವು ತೋಟಗಳಿಗೆ ಬಸ್‌ಗಳಲ್ಲಿ ಕರೆದುಕೊಂಡು ಹೋಗಲಾಗುತ್ತದೆ. ಬೆಳಗ್ಗೆಯಿಂದ ಸಂಜೆವರೆಗೂ ತೋಟ ಸುತ್ತಿ ಗ್ರಾಹಕರು ತಮಗೆ ಬೇಕಾದಷ್ಟು ಮಾವನ್ನು ಕಿತ್ತು ಖರೀದಿಸಬಹುದು. ಆಸಕ್ತರು ನಿಗಮದ ಡಿಡಿಡಿ.ksಞಛಞcl.ಟ್ಟಜ ವೆಬ್‌ಸೈಟ್‌ನಲ್ಲಿ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

ಹಾಪ್‌ಕಾಮ್ಸ್‌ನಲ್ಲಿ ಮೇ.17 ರಿಂದ ಮಾವು ಮೇಳ ಆರಂಭವಾಗಲಿದ್ದು, ಸುಗ್ಗಿ ಮುಗಿಯುವವರೆಗೂ ಮೇಳ ನಡೆಯಲಿದೆ. ಎಲ್ಲಾ ಹಾಪ್‌ಕಾಮ್ಸ್‌ ಮಳಿಗೆಗಳಲ್ಲೂ ಪ್ರತ್ಯೇಕ ಜಾಗ ಮಾಡಿ ವಿವಿಧ ತಳಿಯ ಮಾವುಗಳನ್ನು ಮಾರಾಟ ಮಾಡಲಾಗುತ್ತದೆ. ಗ್ರಾಹಕರು ಹಾಪ್‌ಕಾಮ್ಸ್‌ಗೆ ಭೇಟಿ ನೀಡಿ ನೈಸರ್ಗಿಕ ಹಾಗೂ ಗುಣಮಟ್ಟದ ಮಾವನ್ನು ಖರೀದಿಸಿಬಹುದು.
-ಪ್ರಸಾದ್‌, ಹಾಪ್‌ಕಾಮ್ಸ್‌ ಎಂ.ಡಿ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.