28, 29ರಂದು ಮಾವು, ಹಲಸು ಮೇಳ

550 ಮಾವು, 80 ಹಲಸಿನ ತಳಿಗಳ ಪ್ರದರ್ಶನ | ಜೂ.1ರಂದು ಸಿಕೆಪಿಯಲ್ಲಿ ಮೇಳ

Team Udayavani, May 23, 2019, 2:07 PM IST

bngre-tdy-2..

ಬೆಂಗಳೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಎಷ್ಟು ಪ್ರಕಾರಗಳು ನಿಮಗೆ ಗೊತ್ತು? ಐದು ಅಬ್ಬಬ್ಟಾ ಎಂದರೆ ಹತ್ತು. ಆದರೆ, ನಗರದಲ್ಲಿ 550 ಮಾವಿನ ತಳಿಗಳ ದರ್ಶನ ನಿಮಗೆ ಸಿಗಲಿದೆ. ಅಷ್ಟೇ ಅಲ್ಲ, ಅದನ್ನು ಸವಿಯುವ ಅವಕಾಶವೂ ನಿಮ್ಮದಾಗಲಿದೆ. ಪ್ರತಿಷ್ಠಿತ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಎಚ್ಆರ್‌) ಈ ಅವಕಾಶ ಕಲ್ಪಿಸುತ್ತಿದೆ.

ಹಾಗೇ, ಸುಮಾರು 80 ಪ್ರಕಾರದ ಹಲಸಿನ ಹಣ್ಣುಗಳನ್ನೂ ಬೆಂಗಳೂರಿಗರು ನೋಡಿ, ಸವಿಯಬಹುದು. ನಗರದ ಹೊರವಲಯ ಮತ್ತು ಹೃದಯಭಾಗ ಎರಡೂ ಕಡೆಗಳಲ್ಲಿ ಪ್ರತ್ಯೇಕವಾಗಿ ಎರಡೆರಡು ದಿನಗಳ ಕಾಲ ಐಐಎಚ್ಆರ್‌ ಈ ಬಾರಿ ಮಾವು ಮತ್ತು ಹಲಸಿನ ವೈವಿಧ್ಯತಾ ಮೇಳ ಹಮ್ಮಿಕೊಂಡಿದೆ. ಮೇ 28 ಮತ್ತು 29ರಂದು ಹೆಸರಘಟ್ಟದಲ್ಲಿರುವ ಐಐಎಚ್ಆರ್‌ ಆವರಣದಲ್ಲಿ ಹಾಗೂ ಜೂನ್‌ 1 ಮತ್ತು 2ರಂದು ಚಿತ್ರಕಲಾ ಪರಿಷತ್‌ನಲ್ಲಿ ಮೇಳ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಎಂ.ಆರ್‌. ದಿನೇಶ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಮೊದಲು ಐಐಎಚ್ಆರ್‌ ಆವರಣದಲ್ಲಿ ಮಾತ್ರ ಮೇಳ ನಡೆಯುತ್ತಿತ್ತು. ಆದರೆ, ನಗರವಾಸಿಗಳಿಗೆ ಮಾವು ಮತ್ತು ಹಲಸಿನ ವೈವಿಧ್ಯತೆಯನ್ನು ಪರಿಚಯಿಸಲು ಇದೇ ಮೊದಲ ಬಾರಿಗೆ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ. ಐಐಎಚ್ಆರ್‌ನಲ್ಲಿ ಸುಮಾರು 728 ಪ್ರಕಾರದ ಮಾವಿನ ತಳಿಗಳು ಮತ್ತು 170 ಹಲಸಿನ ತಳಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳ ಡಿಎನ್‌ಎ, ಎಲ್ಲಿಂದ ತೆಗೆದುಕೊಂಡು ಬರಲಾಗಿದೆ ಎಂಬುದನ್ನು ತಿಳಿಸುವ ಪಾಸ್‌ಪೋರ್ಟ್‌ ಡಾಟಾ ಸೇರಿದಂತೆ ಪ್ರತಿ ತಳಿಯ ವೈಜ್ಞಾನಿಕ ವಿವರ ಸಹಿತ ಪ್ರದರ್ಶನಕ್ಕಿಡಲಾಗುವುದು. ಆಯ್ದ ರೈತರು ಕೂಡ ಮಾವು ಮತ್ತು ಹಲಸಿನ ಪ್ರದರ್ಶನದಲ್ಲಿ ಮಳಿಗೆಗಳನ್ನು ಹಾಕಲಿದ್ದು, ಮಾರಾಟಕ್ಕೂ ಲಭ್ಯ ಇರಲಿದೆ ಎಂದು ವಿವರಿಸಿದರು.

10 ಸಾವಿರ ಜನರ ನಿರೀಕ್ಷೆ: ಈಗಾಗಲೇ ನಗರದಲ್ಲಿ ನಡೆಯುತ್ತಿರುವ ಮೇಳಗಳಿಗೂ ಐಐಎಚ್ಆರ್‌ ಹಮ್ಮಿಕೊಂಡ ಮೇಳಕ್ಕೂ ಸಾಕಷ್ಟು ವ್ಯತ್ಯಾಸ ಇದ್ದು, ಇದು ಸಂಶೋಧನಾ ಆಧಾರಿತ ಮೇಳವಾಗಿದೆ. ಇಲ್ಲಿ ಈ ಎರಡೂ ಹಣ್ಣುಗಳ ವೈವಿಧ್ಯತೆಯ ಪರಿಚಯ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಾ.ದಿನೇಶ್‌, ಮೇಳದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ರಾಜೇಂದ್ರ ಪ್ರಸಾದ್‌, ಕೃಷಿ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸುಮಾರು 10 ಸಾವಿರ ಜನ ಭೇಟಿ ನೀಡುವ ನಿರೀಕ್ಷೆ ಇದೆ. ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ, 27 ಮತ್ತು 28ರಂದು ‘ಮಾವು ಮತ್ತು ಹಲಸಿನ ಬೆಳೆಗಳಲ್ಲಿ ಉದ್ದಿಮೆ ಅವಕಾಶಗಳು’ ಕುರಿತು ತರಬೇತಿ ಕಾರ್ಯಾಗಾರ ಕೂಡ ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಕಾರ್ಯಾಗಾರಕ್ಕೆ ಆಸಕ್ತರು ಮುಂಚಿತವಾಗಿ ಹೆಸರು ನೋಂದಂಣಿ ಮಾಡಬೇಕು. ಮಾಹಿತಿಗೆ ಮೊ: 77608 35475 ಸಂಪರ್ಕಿಸಬಹುದು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.