ಪ್ರಣಾಳಿಕೆ ದೊಡ್ಡ ಶಕ್ತಿ ನೀಡಿದೆ: ದಿನೇಶ್
Team Udayavani, Apr 4, 2019, 3:00 AM IST
ಬೆಂಗಳೂರು: ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಿಂದ ಚುನಾವಣೆ ಎದುರಿಸಲು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ನ್ಯಾಯ್ ಯೋಜನೆ ಮುಖಾಂತರ ಬಡವರನ್ನು ಮೇಲೆ ತರುವ ಪ್ರಯತ್ನ ಮಾಡಿದ್ದೇವೆ.
ಮಹಿಳೆಯರಿಗೆ ಮೀಸಲಾತಿ, ರೈತರ ಸಂಪುರ್ಣ ಸಾಲ ಮನ್ನಾ ಮಾಡಲು ನಿರ್ಧರಿಸಿರುವುದು ಕಾಂಗ್ರೆಸ್ಗೆ ಅನುಕೂಲವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ್ಯಾಯ ಯೋಜನೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರು ಮಾಡದಿರುವ ಕೆಲಸವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. ಅವರು ಇದುವರೆಗೂ ಪ್ರಧಾನಿ ಮೋದಿ ರೀತಿ ಸುಳ್ಳು ಹೇಳಿಲ್ಲ.
ನಾವು ಆಹಾರ ಭದ್ರತೆ, ನರೇಗಾ, ಆರ್ಟಿಇ ಕಾಯ್ದೆಗಳನ್ನು ಜಾರಿಗೆ ತಂದಿದ್ದೆವು. ಮೋದಿಯವರು ಈ ರೀತಿಯ ಒಂದು ಯೋಜನೆಯನ್ನೂ ಜಾರಿಗೆ ತರಲಿಲ್ಲ. ಬರೀ ದೇಶ ಒಡೆಯುವ, ಸಂವಿಧಾನ ಬದಲಾಯಿಸುವ ಮಾತನಾಡುತ್ತಾರೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಯುಪಿಎ ಅಧಿಕಾರಕ್ಕೆ ಬಂದರೆ, ಜಿಎಸ್ಟಿಯನ್ನೂ ಸರಳೀಕರಣಗೊಳಿಸುತ್ತೇವೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ಟಿ ವ್ಯಾಪ್ತಿಗೆ ತರುತ್ತೇವೆ. ಇದರಿಂದ ಸಾಮಾನ್ಯ ಜನರಿಗೆ ದೊಡ್ಡ ಅನುಕೂಲವಾಗುತ್ತದೆ.
ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಜಿಡಿಪಿ 6% ಆರೋಗ್ಯಕ್ಕೆ 3% ಮೀಸಲಿಟ್ಟು ಸುಧಾರಣೆಗೆ ಆದ್ಯತೆ ನೀಡಿದ್ದಾರೆ. ಈ ಪ್ರಣಾಳಿಕೆಯ ಹಿಂದೆ ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಹಾಗೂ ಪಿ. ಚಿದಂಬರಂ ಅವರ ಶ್ರಮ ಇದೆ ಎಂದರು.
ಎಲೆಕ್ಟ್ರೋಲ್ ಬಾಂಡ್ ದೊಡ್ಡ ಹಗರಣ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಲೆಕ್ಟ್ರೋಲ್ ಬಾಂಡ್ ದೊಡ್ಡ ಹಗರಣವಾಗಿದ್ದು, ಕಾನೂನಾತ್ಮಕ ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ. ಬಿಜೆಪಿಗೆ ದಾವೂದ್ ಇಬ್ರಾಹಿಂ, ನೀರವ್ ಮೋದಿ, ವಿಜಯ್ ಮಲ್ಯರಂಥವರೂ ದೇಣಿಗೆ ನೀಡಬಹುದು. ಯಾರು ಯಾವ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂದು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿದರು.
ಸುಳ್ಳು ಹೇಳುವುದೇ ಆರ್ಎಸ್ಎಸ್ ಡಿಎನ್ಎಯಲ್ಲಿ ಬಂದಿದೆ. ಬಿಜೆಪಿಯವರಲ್ಲೂ ಅದೇ ಡಿಎನ್ಎ ಇದೆ. ಅವರು ನೂರು ಸಾರಿ ಸುಳ್ಳು ಹೇಳಿ ಸತ್ಯ ಮಾಡಲು ಹೋರಟಿದ್ದಾರೆ. ನಾವು ಅವರಂತೆ ಸುಳ್ಳು ಹೇಳಿ ಮತ ಪಡೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ