ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್: ತಿರಂಗಾ ಸಪ್ತಾಹ
Team Udayavani, Aug 8, 2022, 11:02 PM IST
ಬೆಂಗಳೂರು: ಕೇಂದ್ರ ಸರಕಾರದ “ಹರ್ ಘರ್ ತಿರಂಗಾ’ ಸಪ್ತಾಹಕ್ಕೆ ಯಲಹಂಕದಲ್ಲಿರುವ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನಲ್ಲಿ ಶನಿವಾರ ಕುಲಪತಿ ಡಾ| ವೆಂಕಟೇಶ್ ಚಾಲನೆ ನೀಡಿದರು.
ಅನಂತರ ಮಾತನಾಡಿದ ಅವರು, ನಮ್ಮ ವಿದ್ಯಾಸಂಸ್ಥೆಯು ಸಾಮಾಜಿಕ ಕಳಕಳಿಯುಳ್ಳ ಕೆಲಸಗಳಲ್ಲಿ ಸದಾ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ತುಂಬುತ್ತಿರುವ ಈ ಹೊತ್ತಿನಲ್ಲಿ ಸ್ವಾತಂತ್ರ್ಯಕ್ಕಾಗಿ ಮಣಿದ ವೀರರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಅಮೃತ ಮಹೋತ್ಸವದ ಅಂಗವಾಗಿ ಪ್ರತಿಯೊಬ್ಬರ ಮನೆ ಮೇಲೆ ರಾಷ್ಟ್ರ ಧ್ವಜ ಹಾರಾಡಿಸುವುದು ನಮ್ಮ ಹೆಮ್ಮೆ ಎಂದು ಅಭಿಪ್ರಾಯಪಟ್ಟರು.
ನಮ್ಮ ವಿದ್ಯಾರ್ಥಿಗಳು ಮನೆ ಗಳಿಗೆ ಭೇಟಿ ನೀಡಿ ಧ್ವಜಗಳನ್ನು ನೀಡುತ್ತಿದ್ದು, ಕನಿಷ್ಠ ಐದು ಸಾವಿರ ಮನೆಗಳಿಗೆ ಧ್ವಜ ವಿತರಿಸುವ ಗುರಿ ಹೊಂದಲಾಗಿದೆ. ಮಣಿಪಾಲ್ ವಿದ್ಯಾಸಂಸ್ಥೆಯು ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ಅಡಿಯಲ್ಲಿ “ಗಂಟಿಗಾನಹಳ್ಳಿ’ಯನ್ನು ದತ್ತು ಸ್ವೀಕರಿಸಿದೆ ಎಂದು ಡಾ| ಪ್ರಜ್ಞಾ ರಾವ್ ತಿಳಿಸಿದರು.
ಉಪ ಕುಲಸಚಿವೆ ಡಾ| ವಿದ್ಯಾ ಶೆಟ್ಟಿ, ಉಪ ನಿರ್ದೇಶಕ ಗೌರವ್ ಯಾದವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ