ಶೀಘ್ರವೇ ಮನ್ಸೂರ್‌ ಜಾಗತಿಕ ಅಪರಾಧಿ ಎಂದು ಘೋಷಣೆ?


Team Udayavani, Jun 16, 2019, 3:10 AM IST

shi-mansoor

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ಶೀಘ್ರವೇ ಜಾಗತಿಕ ಆರ್ಥಿಕ ಅಪರಾಧಿ ಪಟ್ಟ ಪಡೆದುಕೊಳ್ಳಲಿದ್ದಾನೆ. ಐಎಂಎ ಕಂಪನಿ ಮೂಲಕ ಸಾವಿರಾರು ಕೋಟಿ ರೂ.ಗಳನ್ನು ಹೂಡಿಕೆದಾರರಿಗೆ ವಂಚಿಸಿ ತಲೆಮರೆಸಿಕೊಂಡಿರುವ ಮನ್ಸೂರ್‌ ಖಾನ್‌ ವಿರುದ್ಧ ಸದ್ಯದಲ್ಲಿಯೇ ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ ಕೇಂದ್ರ ಕಚೇರಿಯಿಂದ ರೆಡ್‌ಕಾರ್ನರ್‌ ನೋಟಿಸ್‌ ಹೊರಬೀಳುವ ಸಾಧ್ಯತೆಯಿದೆ.

ಈಗಾಗಲೇ ರಾಜ್ಯದಲ್ಲಿರುವ ಸಿಐಡಿ (ಇಂಟರ್‌ಪೋಲ್‌ ವಿಭಾಗ) ಮನ್ಸೂರ್‌ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌ ಜಾರಿಗೊಳಿಸಿದೆ. ಜತೆಗೆ, ಈ ಕುರಿತ ನೋಟಿಸ್‌ನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯ ಕಳುಹಿಸಿರುವ ರೆಡ್‌ಕಾರ್ನರ್‌ ನೋಟಿಸ್‌ ಹಾಗೂ ಪತ್ರವನ್ನು ಕೇಂದ್ರ ಗೃಹ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಜತೆಗೆ, ಅಲ್ಲಿಂದ ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ ಕಚೇರಿಗೆ ಕಳುಹಿಸಿಕೊಡಲಾಗುತ್ತದೆ. ಅಧಿಕೃತವಾಗಿ ಅಲ್ಲಿ ಮನ್ಸೂರ್‌ ಜಾಗತಿಕ ಅಪರಾಧಿ ಎಂದು ಘೋಷಿಸಿ, ರೆಡ್‌ಕಾರ್ನರ್‌ ನೋಟಿಸ್‌ ಹೊರಬೀಳಲಿದೆ. ಈ ಪ್ರಕ್ರಿಯೆಗೆ ಕೆಲ ಸಮಯ ಹಿಡಿಯಲಿದೆ ಎಂದು ಮೂಲಗಳು ತಿಳಿಸಿವೆ.

ಐಎಂಎ ನಿರ್ದೇಶಕರ ಮನೆಗಳ ಮೇಲೆ ದಾಳಿ: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಆರೋಪಿತ 7 ನಿರ್ದೇಶಕರ ನಿವಾಸಗಳ ಮೇಲೆ ಶನಿವಾರ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಹಲವು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದೆ.

ಆರೋಪಿಗಳಾದ ನಿಜಾಮುದ್ದೀನ್‌, ನಾಸೀರ್‌ ಹುಸೇನ್‌, ನವೀದ್‌ ಅಹ್ಮದ್‌, ಹರ್ಷದ್‌ ಖಾನ್‌, ವಾಸಿಂ, ಅಪ್ಸರ್‌ ಪಾಷ ಅವರಿಗೆ ಸೇರಿದ ಗೋವಿಂದಪುರ, ಶಿವಾಜಿನಗರ, ಟಾಸ್ಕರ್‌ ಟೌನ್‌, ಎಚ್‌ಬಿರ್‌ ಲೇಔಟ್‌ಗಳಲ್ಲಿನ ಮನೆಗಳಲ್ಲಿ ಏಕಕಾಲದಲ್ಲಿ ಒಟ್ಟು ಆರು ತಂಡಗಳು ಶೋಧ ಕಾರ್ಯಾಚರಣೆ ನಡೆಸಿವೆ.

ದಾಳಿ ವೇಳೆ ಆಸ್ತಿ ಪತ್ರಗಳು, ಬ್ಯಾಂಕ್‌ ಅಕೌಂಟ್‌ ದಾಖಲೆಗಳು, ಹಾರ್ಡ್‌ ಡಿಸ್ಕ್ಗಳು ಸೇರಿದಂತೆ ಹಲವು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಅವುಗಳ ಪರಿಶೀಲನೆ ನಡೆಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಲಭ್ಯವಾಗುವ ಸಾಧ್ಯತೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆ್ಯಂಬಿಡೆಂಟ್‌ ತಂದ ಸಂಕಷ್ಟ: ಕಳೆದ ವರ್ಷ ಭಾರೀ ಸದ್ದು ಮಾಡಿದ್ದ ಬಹುಕೋಟಿ ವಂಚನೆಯ ಆ್ಯಂಬಿಡೆಂಟ್‌ ಕೇಸ್‌ ಬಳಿಕ ಐಎಂಎಗೆ ಸಂಕಷ್ಟ ಎದುರಾಗಿತ್ತು. ಆ್ಯಂಬಿಡೆಂಟ್‌ ವಂಚನೆ ಬಳಿಕ ಹೂಡಿಕೆದಾರರು ತಮ್ಮ ಹಣವನ್ನು ವಾಪಸ್‌ ಪಡೆದುಕೊಳ್ಳಲು ಅರ್ಜಿಗಳನ್ನು ಸಲ್ಲಿಸಲು ಆರಂಭಿಸಿದರು.ದಿನೇ ದಿನೆ ಇದರ ಪ್ರಮಾಣ ಹೆಚ್ಚಾಯಿತು. ಆಗಿನಿಂದ ಅಧಿಕ ಲಾಭಾಂಶವನ್ನು ಹೂಡಿಕೆದಾರರಿಗೆ ನೀಡಲು ತೊಂದರೆ ಎದುರಾಯಿತು ಎಂದು ನಿರ್ದೇಶಕರು ಎಸ್‌ಐಟಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.

“ನಮ್ಮನ್ನು ಕಂಪನಿಯ ನಿರ್ದೇಶಕರನ್ನಾಗಿ ನಾಮಕಾವಸ್ಥೆಗೆ ನೇಮಕ ಮಾಡಿಕೊಂಡಿದ್ದ ಮನ್ಸೂರ್‌, ತಿಂಗಳ ವೇತನ ನೀಡುತ್ತಿದ್ದ. ಕಂಪನಿಯ ಹಣಕಾಸು ವಹಿವಾಟು ಅಥವಾ ಕಂಪನಿಯ ಅಕೌಂಟ್‌ನಿಂದ ಹಣ ತೆಗೆಯುವ ಅಧಿಕಾರವನ್ನು ಯಾರೊಬ್ಬರಿಗೂ ನೀಡಿರಲಿಲ್ಲ” ಎಂದು ಆರೋಪಿತರು ತಿಳಿಸಿದ್ದಾರೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಸಾರ್ವಜನಿಕರು ಮಾಹಿತಿ ನೀಡಿ: ಐಎಂಎ ವಂಚನೆ ಪ್ರಕರಣದ ತನಿಖೆ ಸಲುವಾಗಿ ಎಸ್‌ಐಟಿ ಇನ್ಸ್‌ಪೆಕ್ಟರ್‌ ಮೊಹಮದ್‌ ಎಂ.ಎ ಅವರನ್ನು ಸಾರ್ವಜನಿಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಆರೋಪಿಗಳು ಹಾಗೂ ಕೇಸ್‌ಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ಕಚೇರಿ ಅವಧಿಯಲ್ಲಿ ಹಂಚಿಕೊಳ್ಳಬಹುದು ಎಂದು ಎಸ್‌ಐಟಿ ತಿಳಿಸಿದೆ.

ದೂರವಾಣಿ : 8431275375.
ವ್ಯಾಟ್ಸಾಪ್‌: 8431275375
ಇ-ಮೇಲ್‌: [email protected]

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.