ಬೆಂಗಳೂರಲ್ಲೇ ದೇಶದ ದೊಡ್ಡ ಸಿರಿಧಾನ್ಯ ಮಾರುಕಟ್ಟೆ 


Team Udayavani, Apr 8, 2017, 11:59 AM IST

byregowda.jpg

ಬೆಂಗಳೂರು: ಸಿರಿಧಾನ್ಯಗಳ ಮಾರಾಟದಲ್ಲಿ ಬೆಂಗಳೂರು ದೇಶದಲ್ಲೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.  ಮಲ್ಲೇಶ್ವರದ ಗ್ರೀನ್‌ಪಾಥ್‌ದಲ್ಲಿ ಶುಕ್ರವಾರ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಸಾವಯವ ಮತ್ತು ಸಿರಿಧಾನ್ಯಗಳ ಮೂಲಕ ಉತ್ತಮ ಆರೋಗ್ಯ’ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶಾದ್ಯಂತ 1,900 ಕೋಟಿ ರೂ. ಸಿರಿಧಾನ್ಯಗಳ ವಹಿವಾಟು ನಡೆಯುತ್ತದೆ. ಈ ಪೈಕಿ ಬೆಂಗಳೂರಿನಲ್ಲೇ 200 ಕೋಟಿ ರೂ. ಮಾರಾಟ ನಡೆಯುತ್ತದೆ ಎಂದು ಹೇಳಿದರು. ಸಿರಿಧಾನ್ಯಗಳ ಬಗ್ಗೆ ಇಂದು ಎಲ್ಲೆಡೆ ಜಾಗೃತಿ ಮೂಡುತ್ತಿದೆ. ಎರಡು ಸಾವಿರ ಕೋಟಿ ರೂ.ಗಳಷ್ಟು ಸಿರಿಧಾನ್ಯ ರಫ್ತಾಗುತ್ತಿದೆ ಎಂದು ತಿಳಿಸಿದರು. 

ಸಿರಿಧಾನ್ಯ ಬೆಳೆಯಲು ರೈತರ ಹಿಂದೇಟು: ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಇದೆ ಎಂದು ಮಾರಾಟಗಾರರು ಹೇಳುತ್ತಾರೆ. ಆದರೆ, ರೈತರು ಸಿರಿಧಾನ್ಯಗಳಿಗೆ ಬೇಡಿಕೆ ಕಡಿಮೆ ಎಂದು ಉತ್ಪಾದನೆಗೆ ಹಿಂದೇಟು ಹಾಕುತ್ತಿದ್ದಾರೆ. ಈ ಇಬ್ಬರ ನಡುವಿನ ಅಂತರವನ್ನು ಹೋಗಲಾಡಿಸಿ, ರೈತರ ಸಾವಯವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಕಲ್ಪಿಸಲು ಗ್ರಾಮೀಣ ಮಟ್ಟದಲ್ಲಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಸಾವಯವ ರೈತರಾದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.  

ಏಪ್ರಿಲ್‌ ಕೊನೆಯ ವಾರದಲ್ಲಿ ನಡೆಯುವ ಬೃಹತ್‌ ರಾಷ್ಟ್ರೀಯ ಮಟ್ಟದ ಸಿರಿಧಾನ್ಯಗಳ ಮಾರಾಟ ಮೇಳವು ರಾಜ್ಯದಲ್ಲಿ ಸಿರಿಧಾನ್ಯ ಉತ್ಪಾದನೆ ಮತ್ತು ಮಾರಾಟಕ್ಕೆ ಉತ್ತಮ ವೇದಿಕೆ ಆಗಲಿದೆ. 65 ಕಂಪೆನಿಗಳು, 8-10 ರಾಜ್ಯಗಳು, 14 ಒಕ್ಕೂಟಗಳು, ನಗರದ ಸಿರಿಧಾನ್ಯ ಆಹಾರ ಪೂರೈಸುವ ರೆಸ್ಟೋರೆಂಟ್‌ಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ ಎಂದು ತಿಳಿಸಿದರು. 

ಪರಿಸರ ಹಿತದೃಷ್ಟಿಯಿಂದಲೂ ಸಿರಿಧಾನ್ಯ ಅವಶ್ಯ: ರೈತರು ಮತ್ತು ಪರಿಸರ ಹಿತದೃಷ್ಟಿಯಿಂದಲೂ ಸಿರಿಧಾನ್ಯ ಹೆಚ್ಚು ಉಪಯುಕ್ತ. ಒಂದು ಕೆಜಿ ಅಕ್ಕಿ ಬೆಳೆಯಲು 4ರಿಂದ 5 ಸಾವಿರ ಲೀ. ನೀರು ಬೇಕಾಗುತ್ತದೆ. ಆದರೆ, ಸಿರಿಧಾನ್ಯ ಬೆಳೆಯಲು ಇದರ ಶೇ. 20ರಷ್ಟು ನೀರು ಸಾಕು. ಬರ ನಿರೋಧಕ ಶಕ್ತಿಯನ್ನೂ ಇವು ಒಳಗೊಂಡಿವೆ ಎಂದು ಹೇಳಿದರು. ಗ್ರೀನ್‌ ಪಾಥ್‌ ಸಂಸ್ಥಾಪಕ ಎಚ್‌.ಆರ್‌. ಜಯರಾಂ ಮಾತನಾಡಿ, ಸಿರಿಧಾನ್ಯ ಭವಿಷ್ಯದ ಆಹಾರ ಆಗಿದೆ. ಆದ್ದರಿಂದ ಈಗಿನಿಂದಲೇ ಜನಜಾಗೃತಿಗಾಗಿ ಆಂದೋಲನ ನಡೆಯಬೇಕಿದೆ ಎಂದರು. ಡಾ.ಸುಂದರವಳ್ಳಿ ಉಪಸ್ಥಿತರಿದ್ದರು. 

ಸಿರಿಧಾನ್ಯ ಓಟ    
ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಏಪ್ರಿಲ್‌ 16 ರಂದು ಬೆಳಗ್ಗೆ 6.30ಕ್ಕೆ ನಗರದ ಕಬ್ಬನ್‌ ಉದ್ಯಾನದಿಂದ “ಸಿರಿಧಾನ್ಯ ಓಟ’ ನಡೆಯಲಿದೆ. ಹೆಸರು ನೋಂದಾಯಿಸಲು www.organics/millets.in ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.