

Team Udayavani, Apr 8, 2017, 11:59 AM IST
ಬೆಂಗಳೂರು: ಸಿರಿಧಾನ್ಯಗಳ ಮಾರಾಟದಲ್ಲಿ ಬೆಂಗಳೂರು ದೇಶದಲ್ಲೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಮಲ್ಲೇಶ್ವರದ ಗ್ರೀನ್ಪಾಥ್ದಲ್ಲಿ ಶುಕ್ರವಾರ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಸಾವಯವ ಮತ್ತು ಸಿರಿಧಾನ್ಯಗಳ ಮೂಲಕ ಉತ್ತಮ ಆರೋಗ್ಯ’ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶಾದ್ಯಂತ 1,900 ಕೋಟಿ ರೂ. ಸಿರಿಧಾನ್ಯಗಳ ವಹಿವಾಟು ನಡೆಯುತ್ತದೆ. ಈ ಪೈಕಿ ಬೆಂಗಳೂರಿನಲ್ಲೇ 200 ಕೋಟಿ ರೂ. ಮಾರಾಟ ನಡೆಯುತ್ತದೆ ಎಂದು ಹೇಳಿದರು. ಸಿರಿಧಾನ್ಯಗಳ ಬಗ್ಗೆ ಇಂದು ಎಲ್ಲೆಡೆ ಜಾಗೃತಿ ಮೂಡುತ್ತಿದೆ. ಎರಡು ಸಾವಿರ ಕೋಟಿ ರೂ.ಗಳಷ್ಟು ಸಿರಿಧಾನ್ಯ ರಫ್ತಾಗುತ್ತಿದೆ ಎಂದು ತಿಳಿಸಿದರು.
ಸಿರಿಧಾನ್ಯ ಬೆಳೆಯಲು ರೈತರ ಹಿಂದೇಟು: ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಇದೆ ಎಂದು ಮಾರಾಟಗಾರರು ಹೇಳುತ್ತಾರೆ. ಆದರೆ, ರೈತರು ಸಿರಿಧಾನ್ಯಗಳಿಗೆ ಬೇಡಿಕೆ ಕಡಿಮೆ ಎಂದು ಉತ್ಪಾದನೆಗೆ ಹಿಂದೇಟು ಹಾಕುತ್ತಿದ್ದಾರೆ. ಈ ಇಬ್ಬರ ನಡುವಿನ ಅಂತರವನ್ನು ಹೋಗಲಾಡಿಸಿ, ರೈತರ ಸಾವಯವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ಕಲ್ಪಿಸಲು ಗ್ರಾಮೀಣ ಮಟ್ಟದಲ್ಲಿ ಕ್ಲಸ್ಟರ್ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಸಾವಯವ ರೈತರಾದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.
ಏಪ್ರಿಲ್ ಕೊನೆಯ ವಾರದಲ್ಲಿ ನಡೆಯುವ ಬೃಹತ್ ರಾಷ್ಟ್ರೀಯ ಮಟ್ಟದ ಸಿರಿಧಾನ್ಯಗಳ ಮಾರಾಟ ಮೇಳವು ರಾಜ್ಯದಲ್ಲಿ ಸಿರಿಧಾನ್ಯ ಉತ್ಪಾದನೆ ಮತ್ತು ಮಾರಾಟಕ್ಕೆ ಉತ್ತಮ ವೇದಿಕೆ ಆಗಲಿದೆ. 65 ಕಂಪೆನಿಗಳು, 8-10 ರಾಜ್ಯಗಳು, 14 ಒಕ್ಕೂಟಗಳು, ನಗರದ ಸಿರಿಧಾನ್ಯ ಆಹಾರ ಪೂರೈಸುವ ರೆಸ್ಟೋರೆಂಟ್ಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ ಎಂದು ತಿಳಿಸಿದರು.
ಪರಿಸರ ಹಿತದೃಷ್ಟಿಯಿಂದಲೂ ಸಿರಿಧಾನ್ಯ ಅವಶ್ಯ: ರೈತರು ಮತ್ತು ಪರಿಸರ ಹಿತದೃಷ್ಟಿಯಿಂದಲೂ ಸಿರಿಧಾನ್ಯ ಹೆಚ್ಚು ಉಪಯುಕ್ತ. ಒಂದು ಕೆಜಿ ಅಕ್ಕಿ ಬೆಳೆಯಲು 4ರಿಂದ 5 ಸಾವಿರ ಲೀ. ನೀರು ಬೇಕಾಗುತ್ತದೆ. ಆದರೆ, ಸಿರಿಧಾನ್ಯ ಬೆಳೆಯಲು ಇದರ ಶೇ. 20ರಷ್ಟು ನೀರು ಸಾಕು. ಬರ ನಿರೋಧಕ ಶಕ್ತಿಯನ್ನೂ ಇವು ಒಳಗೊಂಡಿವೆ ಎಂದು ಹೇಳಿದರು. ಗ್ರೀನ್ ಪಾಥ್ ಸಂಸ್ಥಾಪಕ ಎಚ್.ಆರ್. ಜಯರಾಂ ಮಾತನಾಡಿ, ಸಿರಿಧಾನ್ಯ ಭವಿಷ್ಯದ ಆಹಾರ ಆಗಿದೆ. ಆದ್ದರಿಂದ ಈಗಿನಿಂದಲೇ ಜನಜಾಗೃತಿಗಾಗಿ ಆಂದೋಲನ ನಡೆಯಬೇಕಿದೆ ಎಂದರು. ಡಾ.ಸುಂದರವಳ್ಳಿ ಉಪಸ್ಥಿತರಿದ್ದರು.
ಸಿರಿಧಾನ್ಯ ಓಟ
ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಏಪ್ರಿಲ್ 16 ರಂದು ಬೆಳಗ್ಗೆ 6.30ಕ್ಕೆ ನಗರದ ಕಬ್ಬನ್ ಉದ್ಯಾನದಿಂದ “ಸಿರಿಧಾನ್ಯ ಓಟ’ ನಡೆಯಲಿದೆ. ಹೆಸರು ನೋಂದಾಯಿಸಲು www.organics/millets.in ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ.
Ad
AUS vs WI : ಕೇವಲ 27 ರನ್ಗೆ ಆಲೌಟ್ ಆದ ವೆಸ್ಟ್ ಇಂಡೀಸ್ – ತವರಿನಲ್ಲೇ ವೈಟ್ ವಾಶ್
Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
You seem to have an Ad Blocker on.
To continue reading, please turn it off or whitelist Udayavani.