ಹೊರಮಾವು ಕೆರೆ ಉಳಿಸಲು ಹಲವು ಕಾರ್ಯಕ್ರಮ


Team Udayavani, Aug 4, 2019, 3:06 AM IST

horamavu

ಬೆಂಗಳೂರು: ಗಿಡ ನೆಟ್ಟು ಪೋಷಿಸುವುದು ಸರ್ಕಾರದ ಕೆಲಸ ಮಾತ್ರವಲ್ಲ, ಅದರಲ್ಲಿ ಸಾರ್ವಜನಿಕರ ಪಾತ್ರವೂ ಹೆಚ್ಚಿದೆ ಎಂದು ತಿಳಿಸಲು ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರ ಅಸೋಸಿಯೇಷನ್‌ ವೆಲ್‌ಫೇರ್‌ ಫೆಡರೇಶನ್‌ ಮುಂದಾಗಿದೆ.

ಹೊರಮಾವು ಕೆರೆ 30 ಎಕರೆ ಪ್ರದೇಶದಲ್ಲಿದ್ದು, ಫೆಡರೇಶನ್‌ನ ಸದಸ್ಯರು ಕಳೆದ 2 ವರ್ಷದಿಂದ ಕೆರೆ ಆವರಣದಲ್ಲಿ 2500ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದಾರೆ. ಅಲ್ಲದೇ ಸ್ಥಳೀಯ ಜನರನ್ನು ಒಂದೆಡೆ ಸೇರಿಸಿ ಜಾಗೃತಿ ಮೂಡಿಸುವ ಮೂಲಕ ನೆಟ್ಟ ಒಂದೊಂದು ಗಿಡದ ನಿರ್ವಹಣೆ ಜವಾಬ್ದಾರಿ ನೀಡುತ್ತಿದ್ದು, ಪ್ರಸ್ತುತ ಕೆರೆ ಸುತ್ತಲಿನ ಪರಿಸರ ಹಸಿರುಮಯವಾಗುತ್ತಿದೆ.

ವಾಟ್ಸ್‌ಆ್ಯಪ್‌ ಗ್ರೂಪ್‌: ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರ ಅಸೋಸಿಯೇಷನ್‌ ವೆಲ್‌ಫೇರ್‌ ಫೆಡರೇಶನ್‌ ಸದಸ್ಯರೆಲ್ಲರೂ ಹೊರಮಾವು ಕೆರೆ ಉಳಿಸಿ ಎಂಬ ಶೀರ್ಷಿಕೆಯಡಿ ವಾಟ್ಸ್‌ಆ್ಯಪ್‌ ಗ್ರೂಪ್‌ ರಚಿಸಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಹೊಂಗೆ, ಮಹಾಗನಿ, ಕಾಡುಬಾದಾಮಿ, ನೆಲ್ಲಿ, ನೇರಳೆ, ಚೆರ್ರಿ, ಬೇವು ಸೇರಿ ವಿವಿಧ ತಳಿಗಳ ಗಿಡಗಳನ್ನು ನೆಟ್ಟಿದ್ದಾರೆ.

ಗಿಡ ನೆಡುವ ಕಾರ್ಯಕ್ರಮ: ಜೂನ್‌, ಜುಲೈ, ಆಗಸ್ಟ್‌, ಸೆಪ್ಟೆಂಬರ್‌ ತಿಂಗಳಲ್ಲಿ ಮಳೆ ಅಧಿಕ ಮಳೆ ಬರುವುದರಿಂದ ವರ್ಷದ 4 ತಿಂಗಳು ಮಾತ್ರ ಗಿಡಗಳನ್ನು ನೆಡಲಾಗುತ್ತಿದೆ. ವರ್ಷಪೂರ್ತಿ ನೆಟ್ಟ ಗಿಡಗಳನ್ನು ಪೋಷಿಸಲಾಗುವುದು. ಮುಖ್ಯವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಿದರೆ, ಪೋಷಕರಿಗೂ ಜಾಗೃತಿ ಮೂಡುತ್ತದೆ ಎಂಬ ಸದುದ್ದೇಶದಿಂದ ಹೊರಮಾವು ಸುತ್ತಲಿನ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಫೆಡರೇಶನ್‌ನ ಅರುಣ್‌ ಮೆನನ್‌.

ಅಂತರ್ಜಲ ಮಟ್ಟ ಹೆಚ್ಚಲಿದೆ: ತಿಂಗಳಿಗೆ ಎರಡು ಬಾರಿ ಹೊರಮಾವು ಕೆರೆ ಬಳಿ ಗಿಡಗಳನ್ನು ನೆಡಲಾಗುತ್ತಿದೆ. ಈ ಕಾರ್ಯಕ್ಕೆ ಪಾಲಿಕೆ ಅಧಿಕಾರಿಗಳು ಕೈ ಜೋಡಿಸಿದ್ದು, ಅರಣ್ಯ ಇಲಾಖೆ ಉಚಿತವಾಗಿ ಗಿಡಗಳನ್ನು ನೀಡಿದೆ. ಸ್ಥಳೀಯರಲ್ಲಿ ಗಿಡ ನೆಡುವ ಬಗ್ಗೆ ಜಾಗೃತಿ ಮೂಡಿಸಲಾಗಿದ್ದು, ಜನರು ಗಿಡಗಳನ್ನು ದತ್ತು ಪಡೆಯುತ್ತಿದ್ದಾರೆ. ಕೆರೆ ಸುತ್ತಲೂ ಓಡಾಡುವವರು ಗಿಡಗಳಿಗೆ ನೀರು ಹಾಕುತ್ತಿದ್ದು, ಇನ್ನು ಎರಡೂ¾ರು ವರ್ಷಗಳಲ್ಲಿ ಗಿಡಗಳು ಎತ್ತರಕ್ಕೆ ಬೆಳೆಯುತ್ತವೆ. ಕೆರೆ ಸುತ್ತಲಿನ ಪ್ರದೇಶ ಹಸಿರುಮಯವಾಗಲಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುವ ನಿರೀಕ್ಷೆ ಹೊಂದಿದ್ದೇವೆ ಎಂದು ಸ್ವಯಂಸೇವಕ ನಾಗೇಶ್ವರ ರಾವ್‌ ತಿಳಿಸಿದರು.

ಕೆರೆ ಸೇರುತ್ತಿದೆ ಒಳಚರಂಡಿ ನೀರು!: ಸುತ್ತಲಿನ ಬಡಾವಣೆಗಳ ಒಳಚರಂಡಿ ನೀರು ಹೊರಮಾವು ಕೆರೆಗೆ ಸೇರುತ್ತಿದ್ದು, ಕೆರೆ ಸೌಂದರ್ಯ ಹಾಳಾಗುತ್ತಿದೆ. ಹಾಗೇ ಕೆರೆಯಲ್ಲಿ ಹೂಳು ತುಂಬಿದ್ದು, ಬೇಲಿಗಳು ಬೆಳೆದಿವೆ. ಪಾಲಿಕೆ ಅಧಿಕಾರಿಗಳು ಆದ್ಯತೆ ಮೇರೆಗೆ ಕೆರೆಯನ್ನು ಪುನಶ್ಚೇತನಗೊಳಿಸಬೇಕೆಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.