ಮಾ.26ಕ್ಕೆ ಮೌಲ್ಯಮಾಪನ ಬಹಿಷ್ಕಾರ ತೀರ್ಮಾನ?


Team Udayavani, Mar 19, 2017, 11:36 AM IST

paper-19.jpg

ಬೆಂಗಳೂರು: ಮೌಲ್ಯಮಾಪನಕ್ಕೆ ಗೈರು ಹಾಜರಾದರೆ 6 ತಿಂಗಳು ಜೈಲುಶಿಕ್ಷೆ ಅಥವಾ 1 ಲಕ್ಷ ರೂ. ದಂಡ ವಿಧಿಸುವ ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ ಸಾಧಕ-ಬಾಧಕ ಹಾಗೂ ಪಿಯುಸಿ ಮೌಲ್ಯಮಾಪನ ಬಹಿಷ್ಕಾರ ಕುರಿತು ಚರ್ಚಿಸಲು ಮಾರ್ಚ್‌ 26 ರಂದು ಸಭೆ ನಿಗದಿಯಾಗಿದೆ.

ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲು ಮಾರ್ಚ್‌ 26 ರಂದು ಸಭೆ ನಿಗದಿಪಡಿಸಲಾಗಿದ್ದು, ಅಲ್ಲಿ ಮೌಲ್ಯಮಾಪನ ಬಹಿಷ್ಕಾರ ಹಾಗೂ ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರೆಲ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ವೇತನದ ವ್ಯತ್ಯಾಸ ಸರಿಪಡಿಸಿಕೊಳ್ಳಲು 2 ಹೆಚ್ಚುವರಿ ಬಡ್ತಿ ನೀಡುವಂತೆ 2010ರಿಂದ ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿದ್ದೇವೆ. ಕಳೆದ ವರ್ಷ ಹೆಚ್ಚುವರಿ ಬಡ್ತಿ ನೀಡುತ್ತೇವೆ ಎಂದು ಮುಖ್ಯಮಂತ್ರಿ ಆಶ್ವಾಸನೆ ನೀಡಿದ ನಂತರ ಮುಷ್ಕರ ಕೈಬಿಟ್ಟಿದ್ದೆವು. ಆದರೆ, ಕೇವಲ 1 ಬಡ್ತಿ ಮಾತ್ರ ನೀಡಿದ್ದು, ಸರ್ಕಾರ ಮಾತಿಗೆ ತಪ್ಪಿದೆ ಎಂದು ದೂರಿದರು.

ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರನ್ನು ಜೈಲಿಗೆ ಕಳುಹಿಸುವ ವಿಧೇಯಕ ಮೂಲಕ ಹೋರಾಟ ಹತ್ತಿಕ್ಕಲು ಸರ್ಕಾರ
ಮುಂದಾಗಿದೆ. ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ . ಈಗಾಗಲೇ ಕಳೆದ ಡಿಸೆಂಬರ್‌ನಲ್ಲಿಯೇ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 5 ಹಂತದಲ್ಲಿ ಹೋರಾಟ ಹಮ್ಮಿಕೊಂಡಿದ್ದೆವು.

ಮೊದಲ ಹಂತದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೆವು. ನಂತರ ಪ್ರಥಮ ಪಿಯುಸಿ ಪರೀಕ್ಷೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಉಪನ್ಯಾಸಕರು ಪರೀಕ್ಷೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿದ್ದರು. ಮೂರನೇ ಹಂತವಾಗಿ ಮಾ.4ರಂದು ಆನಂದರಾವ್‌ ವೃತ್ತ ಸಮೀಪದ ಗಾಂಧಿ ಪ್ರತಿಮೆ ಎದುರು ಒಂದು ದಿನ ಸಾಂಕೇತಿಕ ಧರಣಿ ನಡೆಸಲಾಗಿತ್ತು.

4ನೇ ಹಂತದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬಹಿಷ್ಕರಿಸಬೇಕೆಂಬುದಾಗಿ ಉಪನ್ಯಾಸಕರೆಲ್ಲರೂ ನಿರ್ಧಾರ ಕೈಗೊಂಡಿದ್ದರು. ಆದರೆ, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆನ್ನುವ ಕಾರಣಕ್ಕೆ ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. 

ಮಾ.26ರಂದು ಬೆಳಗ್ಗೆ 11ಕ್ಕೆ ಶಾಸಕರ ಭವನದಲ್ಲಿ ಉಪನ್ಯಾಸಕರ ಸಭೆ ಕರೆಯಲಾಗಿದೆ. ಅಲ್ಲಿ ಮೌಲ್ಯಮಾಪನ ಬಹಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆಯಲ್ಲಿ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಕವಾಗಿರುವ ನಿಯಮದ ಬಗ್ಗೆಯೂ
ಚರ್ಚಿಸಲಿದ್ದು, ಮುಂದೆ ಏನು ಮಾಡಬೇಕು ಎಂಬುದರ ರೂಪುರೇಷೆ ಸಿದ್ಧಪಡಿಸಲಾಗುವುದು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. 

ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಕ್ಷೇಪ
ಈ ಮಧ್ಯೆ, ಉತ್ತರ ಪತ್ರಿಕೆ ಮೌಲ್ಯ ಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಅಖೀಲ ಭಾರತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ನಗರದಲ್ಲಿ ಶನಿವಾರ ನಡೆದ 65ನೇ ರಾಷ್ಟ್ರೀಯ ಶೈಕ್ಷಣಿಕ ಸಮಾವೇಶದಲ್ಲಿ ಮಾತನಾಡಿದ ಒಕ್ಕೂಟದ ವಿಭಾಗೀಯ ಜಂಟಿ ಕಾರ್ಯದರ್ಶಿ ಎಚ್‌.ಕೆ.ಮಂಜುನಾಥ್‌ , ಮೌಲ್ಯಮಾಪನ ಬಹಿಷ್ಕರಿಸುವ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವ ಬದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೇಡಿಕೆ ಆಲಿಸಿ ಸಮಸ್ಯೆ ಪರಿಹರಿಸಬೇಕೇ ಹೊರತು ಕಾನೂನು ಕ್ರಮ ಸರಿಯಲ್ಲ. ಏಕರೂಪ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ವೇತನ ತಾರತಮ್ಯ ನಿವಾರಣೆ ಹಾಗೂ ಪಠ್ಯಪುಸ್ತಕ ರಾಷ್ಟ್ರೀಕರಣಗೊಳಿಸಬೇಕು ಎಂದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.