ಮಾರ್ಕೆಟ್‌ ಕಟ್ಟಡ ಅಡಮಾನ ಮುಕ್ತ?


Team Udayavani, Mar 2, 2020, 3:09 AM IST

palike

ಬೆಂಗಳೂರು: ರಾಜಧಾನಿಯ ಐತಿಹಾಸಿಕ ಕಟ್ಟಡಗಳನ್ನು ಅಡಮಾನವಿರಿಸಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಪಾಲಿಕೆ ಆಸ್ತಿ ಅಡವಿಟ್ಟ “ಕಳಂಕ’ದಿಂದ ಮುಕ್ತಗೊಳ್ಳಲು ಮುಂದಾಗಿದೆ.

ಪಾಲಿಕೆಯ ಆರ್ಥಿಕ ಸ್ಥಿತಿ ಸುಧಾರಿಸುವ ಉದ್ದೇಶದಿಂದ 2015-16ನೇ ಸಾಲಿನಲ್ಲಿ ಪಾಲಿಕೆಯ ಅಧೀನದಲ್ಲಿರುವ 11 ಪ್ರಮುಖ ಕಟ್ಟಡಗಳನ್ನು 1,796.41ಕೋಟಿ ರೂ.ಗೆ ಹುಡ್ಕೊà ಸಂಸ್ಥೆಗೆ ಪಾಲಿಕೆ ಅಡಮಾನವಿರಿಸಲಾಗಿತ್ತು. ಇದರಲ್ಲಿ 10 ಸ್ವತ್ತುಗಳನ್ನು ಬಿಡಿಸಿಕೊಳ್ಳುವಲ್ಲಿ ಪಾಲಿಕೆ ಯಶಸ್ವಿಯಾಗಿದ್ದು, ಸದ್ಯ ಕೃಷ್ಣರಾಜೇಂದ್ರ ಮಾರುಕಟ್ಟೆ (ಕೆ.ಆರ್‌.ಮಾರುಕಟ್ಟೆ)ವನ್ನು ಅಡಮಾನ ಮುಕ್ತವಾಗಬೇಕಿದೆ.

ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಮೇಯರ್‌ ಎಂ.ಗೌತಮ್‌ ಕುಮಾರ್‌, ಪಾಲಿಕೆಯ ಆರ್ಥಿಕ ಸ್ಥಿತಿಗತಿಯನ್ನು ನೋಡಿಕೊಂಡು ಏಪ್ರಿಲ್‌ ಅಥವಾ ಮೇ ವೇಳೆಗೆ ಬಾಕಿ ಇರುವ ಕೆ.ಆರ್‌. ಮಾರುಕಟ್ಟೆ ಅಡಮಾನ ಮುಕ್ತವಾಗಬೇಕಿದೆ ಎಂದು ಹೇಳಿದರು.

2015-16ನೇ ಸಾಲಿನಲ್ಲಿ ಪಾಲಿಕೆಯ ಕೆಂಪೇಗೌಡ ಮ್ಯೂಸಿಯಂ, ಮೆಯೋಹಾಲ್‌, ಜಾನ್ಸನ್‌ ಮಾರುಕಟ್ಟೆ, ಸ್ಲಾಟರ್‌ಹೌಸ್‌, ರಾಜಾಜಿನಗರ ಕಾಂಪ್ಲೆಕ್ಸ್‌, ಮಲ್ಲೇಶ್ವರ ಮಾರುಕಟ್ಟೆ, ಕೃಷ್ಣರಾಜೇಂದ್ರ ಮಾರುಕಟ್ಟೆ (ಕೆ.ಆರ್‌.ಮಾರುಕಟ್ಟೆ), ದಾಸಪ್ಪ ಕಟ್ಟಡ, ಪಬ್ಲಿಕ್‌ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಪೂರ್ವ ಕಚೇರಿ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳನ್ನು ಅಡಮಾನವಿರಿಸಲಾಗಿತ್ತು.

2016-17ನೇ ಸಾಲಿನಲ್ಲಿ ಕೆಂಪೇಗೌಡ ಮ್ಯೂಸಿಯಂ, ಮೆಯೋಹಾಲ್‌ ಮತ್ತು ಜಾನ್ಸ್‌ನ್‌ ಮಾರುಕಟ್ಟೆಯನ್ನು ಅಸಲು ಮೊತ್ತ ರೂ. 362.03 ಕೋಟಿ ರೂ. ಮತ್ತು ಬಡ್ಡಿ ಮೊತ್ತ 163.61 ಕೋಟಿ ರೂ. ಮರುಪಾವತಿಸಿ ಹುಡ್ಕೊ ಸಂಸ್ಥೆಯಿಂದ ಕಟ್ಟಡಗಳನ್ನು ಪಾಲಿಕೆ ಮರಳಿ ಪಡೆದಿತ್ತು.

ಅದೇ ರೀತಿ 2017-18ನೇ ಸಾಲಿನಲ್ಲಿ ಮಲ್ಲೇಶ್ವರದ ಮಾರುಕಟ್ಟೆಯನ್ನು 351.03 ಕೋಟಿ ಅಸಲು ಮತ್ತು 145.50 ಕೋಟಿ ರೂ. ಬಡ್ಡಿ ಪಾವತಿ ಮಾಡುವ ಮೂಲಕ ಹಿಂಪಡೆಯಲಾಗಿತ್ತು. 2018-19ನೇ ಸಾಲಿನಲ್ಲಿ ಹುಡ್ಕೊ ಸಂಸ್ಥೆಗೆ ರೂ. 211.68 ಕೋಟಿ ರೂ. ಸಾಲ ಮತ್ತು 2.79 ಕೋಟಿ ರೂ. ಬಡ್ಡಿ ಮೊತ್ತವನ್ನು ಅವಧಿ ಪೂರ್ವದಲ್ಲೇ ಪಾವತಿಸುವ ಮೂಲಕ ಸ್ಲಾಟರ್‌ ಹೌಸ್‌ ಮತ್ತು ರಾಜಾಜಿನಗರ ಕಾಂಪ್ಲೆಕ್ಸ್‌ಗಳನ್ನು ಪಾಲಿಕೆ ಹಿಂಪಡೆದಿತ್ತು.

ಈ ಮಧ್ಯೆ 2018-19ನೇ ಸಾಲಿನಲ್ಲಿ ಅಸಲು 203.58 ಕೋಟಿ ರೂ. ಮತ್ತು ಬಡ್ಡಿ ಮೊತ್ತ ರೂ. 57.33 ಕೋಟಿ ರೂ.ಗಳನ್ನು ಪಾಲಿಕೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾಗೆ ಪಾವತಿ ಮಾಡಿತ್ತು. 2019-20ನೇ ಸಾಲಿನ ಪೂರ್ಣ ವರ್ಷದ ಕಂತಿನ ಮೊತ್ತ ರೂ. 188.78 ಕೋಟಿ ರೂ. 2019ರ ಮೇ ಅವಧಿ ಪೂರ್ವವೇ ಪಾವತಿ ಮಾಡಲಾಗಿದೆ.

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಒಟ್ಟು ಸಾಲದ ಮೊತ್ತ ರೂ. 871.61 ಕೋಟಿ ರೂ.ಗಳಲ್ಲಿ ಇದುವರೆಗೆ ಒಟ್ಟು 408.02 ಕೋಟಿ ರೂ. ಪಾವತಿ ಮಾಡಲಾಗಿದ್ದು, 463.65 ಕೋಟಿ ರೂ. ಬಾಕಿ ಉಳಿದಿದೆ. ಈ ಮೊತ್ತಕ್ಕೆ ಕೆ.ಆರ್‌. ಮಾರುಕಟ್ಟೆ ಮಾತ್ರ ಅಡಮಾನವಿರಲಿದೆ. ಈ ಮಧ್ಯೆ ದಾಸಪ್ಪ ಕಟ್ಟಡ, ಪಬ್ಲಿಕ್‌ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಪೂರ್ವ ಕಚೇರಿ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಗಳು ಅಡಮಾನ ಮುಕ್ತವಾಗಿವೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.

ಬಡ್ಡಿ ತಗ್ಗಿಸಲು ಬ್ಯಾಂಕ್‌ ಬದಲು: ಹುಡ್ಕೊ ಸಂಸ್ಥೆ ಪಾಲಿಕೆ ಅಡಮಾನವಿರಿಸಿದ್ದ ಆಸ್ತಿಗೆ ವಿಧಿಸುತ್ತಿದ್ದ ದಂಡ ಮೊತ್ತವನ್ನು ತಗ್ಗಿಸುವ ಉದ್ದೇಶದಿಂದ 2017-18ನೇ ಸಾಲಿನಲಿ ಅಂದಿನ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಎಂ.ಶಿವರಾಜು ಅವರು, ಕೆ.ಆರ್‌.ಮಾರುಕಟ್ಟೆ, ದಾಸಪ್ಪ ಕಟ್ಟಡ, ಪಬ್ಲಿಕ್‌ ಯುಟಿಲಿಟಿ ಕಟ್ಟಡ, ಬಿಬಿಎಂಪಿ ಪೂರ್ವ ಕಚೇರಿ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಗಳ ಅಡಮಾನ ಮೊತ್ತ 871.67 ಕೋಟಿ ರೂ.ಗಳನ್ನು ಯಥಾವತ್ತು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಶೇ.8.05 ಬಡ್ಡಿ ದರಕ್ಕೆ ಮುಂದುವರಿಸಲಾಯಿತು.

ಕ್ರೆಡಿಟ್‌ ಯಾರಿಗೆ ಸಲ್ಲಬೇಕು?: ಪಾಲಿಕೆಯ ಆಸ್ತಿಗಳನ್ನು ಅಡಮಾನ ಸಂಬಂಧ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಎಲ್ಲ ಆಸ್ತಿಗಳನ್ನು ಕಾಂಗ್ರೆಸ್‌ ಅವಧಿಯಲ್ಲಿ ಬಿಡಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಸದಸ್ಯರು ಪ್ರತಿಪಾದಿಸಿದರೆ, ಸಾರ್ವಜನಿಕರ ಹಣದಿಂದ ಇದನ್ನು ಬಿಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಟಾಂಗ್‌ ನೀಡಿದೆ.

ಆಸ್ತಿ ಮೌಲ್ಯ ಮಂಜೂರಾದ ಸಾಲ (ಕೋಟಿ ರೂ.)
-ಕೆ.ಆರ್‌.ಮಾರುಕಟ್ಟೆ 837 500
-ಮಲ್ಲೇಶ್ವರ ಮಾರುಕಟ್ಟೆ, ದಾಸಪ್ಪ ಆಸ್ಪತ್ರೆ, ಜಾನ್ಸ್‌ನ್‌ ಮಾರುಕಟ್ಟೆ 322 256
-ಪಿಯುಬಿ ಕಟ್ಟಡ, ಮೆಯೋಹಾಲ್‌ ಕೋರ್ಟ್‌, ಕೆಂಪೇಗೌಡ ಮ್ಯೂಸಿಯಂ, ಪಶ್ಚಿಮ ವಲಯ ಕಚೇರಿ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ. 973 750
-ರಾಜಾಜಿನಗರ ಮಾರುಕಟ್ಟೆ, ಸ್ಲಾಟರ್‌ ಹೌಸ್‌, ಟ್ಯಾನರಿ ರಸ್ತೆ 257 169

ಬಿಜೆಪಿ ಅಡಮಾನವಿರಿಸಿದ್ದ 11 ಆಸ್ತಿಗಳಲ್ಲಿ 10 ಆಸ್ತಿಗಳನ್ನು ನಮ್ಮ ಅವಧಿಯಲ್ಲೇ ಬಿಡಿಸಿಕೊಳ್ಳಲಾಗಿದೆ. ಸದ್ಯ ಕೆ.ಆರ್‌.ಮಾರುಕಟ್ಟೆ ಮಾತ್ರ ಬಿಡಿಸಿಕೊಳ್ಳಬೇಕಾಗಿದ್ದು, ಸಾರ್ವಜನಿಕರ ಆಸ್ತಿಯನ್ನು ಅಡಮಾನ ಮುಕ್ತ ಮಾಡಬೇಕು.
-ಎಂ.ಶಿವರಾಜು, ಆಡಳಿತ ಪಕ್ಷದ ಮಾಜಿ ನಾಯಕ

* ಹಿತೇಶ್‌ ವೈ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.