ಹಸುಗಳ ಒಡಲು ಸೇರುತ್ತಿವೆ ಮಾಸ್ಕ್


Team Udayavani, Apr 19, 2020, 11:04 AM IST

ಹಸುಗಳ ಒಡಲು ಸೇರುತ್ತಿವೆ ಮಾಸ್ಕ್

ಬೆಂಗಳೂರು: ವೈದ್ಯರು, ವೈದ್ಯಕೀಯ ಸಿಬ್ಬಂದಿ, ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರು ಬಳಸಬೇಕಿರುವ ಮಾಸ್ಕ್ಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಧರಿಸಿ, ಎಲ್ಲೆಂದರಲ್ಲಿ ಎಸೆಯುತ್ತಿರುವುದು ಬಿಡಾಡಿ ಹಸು, ಬೀದಿನಾಯಿ ಹಾಗೂ ಕಸದ ರಾಶಿ ಹೆಕ್ಕುವ ಪಕ್ಷಿಗಳಿಗೂ ಕಂಟಕವಾಗುತ್ತಿದೆ.

ಪ್ರಧಾನಿ ಮೋದಿಯವರು ಇತ್ತೀಚೆಗೆ ಕರೆ ನೀಡಿ ಎಲ್ಲರೂ ಮಾಸ್ಕ್ ಧರಿಸಲು ಮನವಿ ಮಾಡಿದ್ದರು. ಮನೆಯಲ್ಲೇ ತಯಾರಿಸಿದ ಮಾಸ್ಕ್ ಧರಿಸಲು ಪ್ರಧಾನಿಯವರು ಪ್ರೋತ್ಸಾಹಿಸಿದ್ದರು. ಆದರೆ, ಅನೇಕರು ಇಂದಿಗೂ ಅಂಗಡಿಯಿಂದಲೇ ದುಬಾರಿ ಬೆಲೆ ಕೊಟ್ಟು ಮಾಸ್ಕ್ ಖರೀದಿಸಿ, ಧರಿಸಿ ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಎನ್‌-95 ಸಹಿತವಾಗಿ ವೈರಸ್‌ ತಡೆಯುವ ಕೆಲವು ಬಗೆಯ ಮಾಸ್ಕಗ ಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ, ಜನ ಸಾಮಾನ್ಯರಲ್ಲಿ ಬಹುತೇಕರು ನಿತ್ಯದ ಓಡಾಟಕ್ಕೂ ಇದೇ ಮಾಸ್ಕ್ ಬಳಸುತ್ತಿದ್ದಾರೆ.

ಕೋವಿಡ್ 19 ಹಬ್ಬುವ ಆತಂಕ: ಜನ ಉಪಯೋಗಿಸಿದ ಮಾಸ್ಕ್ಗಳನ್ನು ಕಸದ ಬುಟ್ಟಿ, ರಸ್ತೆ ಬದಿಯ ಗುಂಡಿಗಳಿಗೆ ಎಸೆಯುತ್ತಿದ್ದಾರೆ. ಹೀಗಾಗಿ ಈ ಮಾಸ್ಕ್ಗಳು ನೇರವಾಗಿ ಬಿಡಾಡಿ ಹಸುಗಳ ಹೊಟ್ಟೆ ಸೇರುತ್ತಿವೆ. ಬೀದಿನಾಯಿಗಳು ಹಿಡಿದು ಎಳೆದಾಡುತ್ತಿವೆ, ಪಕ್ಷಿಗಳನ್ನು ಅದನ್ನೇ ಕುಕ್ಕುತ್ತಿವೆ. ಇದರಿಂದ ಪಾಣಿ, ಪಕ್ಷಿಗಳಿಗೆ ಕೋವಿಡ್ 19 ಹಬ್ಬಬಹುದು ಎಂಬ ಆತಂಕವೂ ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಕಸದ ರಾಶಿಗಳಲ್ಲಿ ಮಾಸ್ಕ್ ಪ್ರಮಾಣವೇ ಹೆಚ್ಚಾಗುತ್ತಿದೆ. ವೈದ್ಯಕೀಯ ತಾಜ್ಯವನ್ನು ಯಾವ ರೀತಿ ವಿಂಗಡಿಸಬೇಕು ಎಂಬುದರ ಬಗ್ಗೆ ಸರ್ಕಾರ ಸೂಕ್ತ ನಿರ್ದೇಶನ ನೀಡಿದ್ದರೂ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ.

ಆರೋಗ್ಯದ ಮೇಲೆ ಪರಿಣಾಮ: ಕಸದ ರಾಶಿಯಲ್ಲಿ ಬಿದ್ದಿರುವ ಮಾಸ್ಕ್ಗಳನ್ನು ಹಸುಗಳು ತಿನ್ನುತ್ತಿರುವ ಮತ್ತು ಬೀದಿ ನಾಯಿಗಳು ಎಳೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿವೆ. ಮಾಸ್ಕ್ಗಳು ಸಮರ್ಪಕ ರೀತಿಯಲ್ಲಿ ವಿಲೇವಾರಿಯಾಗದೇ ರಸ್ತೆ ಬದಿಯ ಕಸದ ರಾಶಿ ಸೇರಿದರೆ ಪಶುಗಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಪಶು ವೈದ್ಯರೊಬ್ಬರು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವೈದ್ಯಕೀಯ ತಾಜ್ಯ ವಿಲೇವಾರಿಯನ್ನು ಖಾಸಗಿ ಸಂಸ್ಥೆಗಳಿಗವಹಿಸಲಾಗಿದೆ. ಕ್ವಾರಂಟೈನ್‌ ಆದ ಮನೆಗಳಿಂದ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕು. ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ಪತ್ರೆ, ಕ್ಲಿನಿಕ್‌ಗಳಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತಾಜ್ಯವನ್ನು ಸಂಗ್ರಹಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರುವ ಏಜೆನ್ಸಿಗಳಿಗೆ ವಲಯ ವಾರು ನೀಡಲಾಗಿದೆ. ಈ ತ್ಯಾಜ್ಯವಿಲೇವಾರಿ ಸಂದರ್ಭದಲ್ಲಿ ಅನುಸರಿಸಬೇಕಾದ ಕಡ್ಡಾಯ ಕ್ರಮದ ಬಗ್ಗೆಯೂ ನಿರ್ದೇಶನ ನೀಡಿದೆ.

ಇಷ್ಟೆಲ್ಲದರ ನಡುವೆಯೂ ನಗರದ ಕಸದ ರಾಶಿಯಲ್ಲಿ ಮಾಸ್ಕ್ಗಳು ರಾರಾಜಿಸುತ್ತಿವೆ. ನಿತ್ಯವು ಬಿಡಾಡಿ ಹಸುಗಳು ಕಸದ ರಾಶಿಯಲ್ಲಿರುವ ಮಾಸ್ಕ್ಗಳನ್ನು ತಿನ್ನುತ್ತಿವೆ. ಈ ವಾತಾವರಣವು ಹಸುಗಳ ಆರೋಗ್ಯದ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಪ್ರತಿಕೂಲ ಪರಿಣಾಮ ಬೀರಲಾಗುತ್ತಿದೆ ಎಂದು ಹೇಳಾಗುತ್ತಿದೆ.

ಸಾರ್ವಜನಿಕರಿಗೆ ಜಾಗೃತಿ ಅಗತ್ಯ :  ವೈದ್ಯರು, ವೈದ್ಯಕೀಯ ಸಿಬ್ಬಂದಿ, ದಾದಿಯರು ಅಥವಾ ಆಶಾ ಕಾರ್ಯಕರ್ತೆಯರು ಬಳಸುವ ಮಾಸ್ಕ್ಗಳು ವ್ಯವಸ್ಥಿತ ವಿಲೇವಾರಿ ಯಾಗುತ್ತಿದೆ. ಆದರೆ, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಬಳಸಬೇಕಿರುವ ಮಾಸ್ಕ್ಗಳನ್ನು ಜನ ಸಾಮಾನ್ಯರು ಉಪ ಯೋಗಿಸಿ ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಇದು ನಿಲ್ಲಬೇಕು. ಕೋವಿಡ್ 19  ಸೋಂಕಿತರನ್ನು ಉಪಚರಿಸುವ, ಚಿಕಿತ್ಸೆ ನೀಡು ವ ವರ್ಯಾರು ಕೂಡ ಮಾಸ್ಕ್ ಅಥವಾ ಪಿಪಿಇ ಕಿಟ್‌ಗಳನ್ನು ಎಲ್ಲಿ ಯಂದರಲ್ಲಿ ಎಸೆಯುವುದಿಲ್ಲ. ಅದಕ್ಕಿರುವ ನಿಯಮಗಳನ್ನು ಸಮರ್ಪ ಕವಾಗಿ ಪಾಲನೆ ಮಾಡುತ್ತಿದ್ದಾರೆ. ಈ ವಿಷಯದಲ್ಲಿ ಸಾರ್ವ ಜನಿಕರೇ ಇನ್ನಷ್ಟು ಜಾಗೃತರಾಗುವ ಅಗತ್ಯವಿದೆ ಎಂದು ವಿವರಿಸಿದರು.

ಬಿಡಾಡಿ ಪಶುಗಳ ರಕ್ಷಣೆ : ರಾಜ್ಯದಲ್ಲಿ ಹಸು ಸಹಿತವಾಗಿ ಯಾವುದೇ ಪ್ರಾಣಿಗೆ ಕೊರೊನಾ ಬಂದಿರುವ ಬಗ್ಗೆ ವರದಿಯಾಗಿಲ್ಲ. ಮಾಸ್ಕ್ಗಳನ್ನು ಬಿಡಾಡಿ ಹಸುಗಳು ತಿನ್ನುತ್ತಿರುವ ಬಗ್ಗೆ ಮಾಹಿತಿಯಿದೆ.ಆದರೆ, ಸಾರ್ವಜನಿಕರು ಕೂಡ ಉಪಯೋಗಿಸಿದ ಮಾಸ್ಕ್ಗಳನ್ನು ಎಲ್ಲಿಯಂದರಲ್ಲಿ ಎಸೆಯದೇ ಸಮರ್ಪಕ ವಿಲೇವಾರಿ ಮಾಡಬೇಕು. ಪ್ರಾಣಿಗಳ ಆರೋಗ್ಯದ ಹಿತ ರಕ್ಷಣೆಗಾಗಿ ಹೊರಡಿಸಿರುವ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಿಡಾಡಿ ಹಸುಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುತ್ತಿದ್ದೇವೆ ಎಂದು ಪಶುಸಂಗೋಪಾನ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.