ಭಾರೀ ವಾಹನ ಸಂಚಾರ ನಿಷೇಧ: ಸಚಿವ ಡಿಕೆಶಿ
Team Udayavani, Aug 20, 2018, 6:15 AM IST
ಬೆಂಗಳೂರು: ರಾಜ್ಯದ ಪ್ರಮುಖ ಜಲಾಶಯಗಳ ಕೆಳಭಾಗದಲ್ಲಿರುವ ಸೇತುವೆಗಳ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಲಾಶಯಗಳು ಭರ್ತಿಯಾಗಿರುವುದರಿಂದ ಅವುಗಳ ಕೆಳಭಾಗದಲ್ಲಿರುವ ಸೇತುವೆಗಳ ಮೇಲೆ ಅಧಿಕ ಭಾರದ ವಸ್ತುಗಳನ್ನು ಹೇರಿಕೊಂಡು ಹೋಗುವ ವಾಹನಗಳಿಂದ ಸೇತುವೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಹೀಗಾಗಿ ಭಾರೀ ವಾಹನಗಳನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದರು.
ಮಳೆ ಮತ್ತು ಭಾರೀ ಪ್ರಮಾಣದ ನೀರಿನಿಂದಾಗಿ ಯಾವುದೇ ಜಲಾಶಯಗಳು ಬಿರುಕು ಬಿಟ್ಟಿಲ್ಲ. ಜನರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು.
ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ನೆರೆ ಸಂತ್ರಸ್ತರಿಗೆ ಸಾರ್ವಜನಿಕರಿಂದಲೂ ಸಹಾಯ ಹಸ್ತ ಪಡೆದು ಸರ್ಕಾರ ನೆರವಿಗೆ ಧಾವಿಸುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!