ಮೂರು ತಿಂಗಳು ಮೊದಲೇ ಮೇಯರ್‌ ಚುನಾವಣೆ


Team Udayavani, Jun 4, 2019, 3:06 AM IST

bbmp2

ಬೆಂಗಳೂರು: ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಂತೆಯೇ ಈ ಬಾರಿ ಪಾಲಿಕೆ ಅಧಿಕಾರ ಚುಕ್ಕಣಿ ಹಿಡಿಯುವ ಕುರಿತು ಕಾಂಗ್ರೆಸ್‌ ಮತ್ತು ಬಿಜೆಪಿ ಪಾಳಯದಲ್ಲಿ ಲೆಕ್ಕಾಚಾರ ಆರಂಭವಾಗಿದೆ.

ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ಹಾಗೂ ವಾರ್ಡ್‌ನ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಹಿನ್ನಡೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೀರಪ್ಪಮೊಯ್ಲಿ ಸೋತು ಬಿಜೆಪಿಯ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ. ಇನ್ನು ಬಿಬಿಎಂಪಿ ವಾರ್ಡ್‌ ಉಪಚುನಾವಣೆಯಲ್ಲಿ ಕಾವೇರಿಪುರ ವಾರ್ಡ್‌ ಬಿಜೆಪಿ ಪಾಲಾಗಿದೆ.

ಹೀಗಾಗಿ, ಬಿಬಿಎಂಪಿ ವಿರೋಧ ಪಕ್ಷ ಬಿಜೆಪಿಯ ಸಂಖ್ಯಾಬಲ ಒಂದಂಕಿ ಹೆಚ್ಚಾಗಿದ್ದು, ಕಾಂಗ್ರೆಸ್‌ ಬಲ ಒಂದಂಕಿ ಕುಗ್ಗಿದೆ. ಪ್ರಸ್ತುತ ಮೇಯರ್‌ ಮತ್ತು ಉಪಮೇಯರ್‌ ಮತದಾರರ ಪಟ್ಟಿಯಲ್ಲಿ 262 ಮಂದಿ ಮತದಾರರಿದ್ದು, 132 ಮ್ಯಾಜಿಕ್‌ ಸಂಖ್ಯೆಯಾಗಿದೆ. ಸದ್ಯ ಬಿಜೆಪಿಯಲ್ಲಿ ಬಿಬಿಎಂಪಿ ಸದಸ್ಯರು, ಶಾಸಕರು, ಸಂಸದರು, ವಿಧಾನಪರಿಷತ್‌ ಸದಸ್ಯರು ಸೇರಿ 125 ಮತದಾರರಿದ್ದಾರೆ.

ಇನ್ನು ಉಳಿದ 7 ಮತಗಳು ಹೊಂದಿಸಲು ಬಿಜೆಪಿ ಪಾಳಯದಲ್ಲಿ ತಂತ್ರಗಾರಿಕೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯಲ್ಲಿ ಆಪರೇಷನ್‌ ಕಮಲ ನಡೆಸಲು ಹಾಗೂ ಚುನಾವಣೆ ದಿನ ಸದಸ್ಯ ಮತದಾರರನ್ನು ಗೈರಾಗುವಂತೆ ಮಾಡಲು ಎಲ್ಲ ತಂತ್ರವನ್ನು ಹೆಣೆಯುತ್ತಿದೆ.

ಈಗಾಗಲೇ ಜೆಡಿಎಸ್‌ ಮಂಜುಳಾ ನಾರಾಯಣಸ್ವಾಮಿ ಮತ್ತು ದೇವದಾಸ್‌ ನೇರವಾಗಿ ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದು, ಮುಂದಿನ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಬಹುದು. ಅದೇ ರೀತಿ ಉಳಿದ ಅತೃಪ್ತ ಮೈತ್ರಿ ಸದಸ್ಯರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ.

ಈ ಬಾರಿಯು ಮೇಯರ್‌, ಉಪಮೇಯರ್‌ ಚುನಾವಣೆಯಲ್ಲಿ ಪಕ್ಷೇತರ ಸದಸ್ಯರು ಪ್ರಮುಖ ಪಾತ್ರವಹಿಸಲಿದ್ದು, ಸದ್ಯ ಇರುವ ಏಳು ಮಂದಿ ಪಕ್ಷೇತರರಲ್ಲಿ ಐದು ಸದಸ್ಯರು ಮೈತ್ರಿ ಅಭ್ಯರ್ಥಿಗಳಿಗೆ ಉಳಿದ ಇಬ್ಬರು ಬಿಜೆಪಿಗೆ ಬೆಂಬಲ ಸೂಚಿಸಬಹುದು. ಇನ್ನು ಮೈತ್ರಿ ಜತೆಗಿರುವ ಐದು ಮಂದಿ ಪಕ್ಷೇತರರನ್ನು ಸೆಳೆಯಲು ಬಿಜೆಪಿ ತಂತ್ರಗಾರಿಕೆ ರೂಪಿಸುತ್ತಿದೆ.

ಬಿಜೆಪಿ ಕುತಂತ್ರದಿಂದ ಅಧಿಕಾರ ಹಿಡಿಯಲು ಎಷ್ಟೇ ಪ್ರಯತ್ನ ಪಟ್ಟರೂ ಕೂಡಾ ಕಳೆದ ನಾಲ್ಕು ಬಾರಿಯಂತೆ ಈ ಬಾರಿಯೂ ಬಿಬಿಎಂಪಿಯಲ್ಲಿ ಮೈತ್ರಿ ಅಭ್ಯರ್ಥಿಗಳೇ ಮತ್ತೂಮ್ಮೆ ಮೇಯರ್‌ ಮತ್ತು ಉಪಮೇಯರ್‌ ಆಗಲಿದ್ದಾರೆ.
-ಎಂ.ಶಿವರಾಜು, ಆಡಳಿತ ಪಕ್ಷದ ಮಾಜಿ ನಾಯಕ

ಒಟ್ಟು ಮತದಾರರು: 262
ಮ್ಯಾಜಿಕ್‌ ಸಂಖ್ಯೆ: 132

ಮತದಾರರ ಲೆಕ್ಕಾಚಾರ
ಕಾಂಗ್ರೆಸ್‌
ಬಿಬಿಎಂಪಿ ಸದಸ್ಯರು: 76
ಲೋಕಸಭಾ ಸದಸ್ಯ: 01
ರಾಜ್ಯಸಭಾ ಸದಸ್ಯರು: 06
ಶಾಸಕರು: 15
ವಿಧಾನಪರಿಷತ್‌ ಸದಸ್ಯರು: 10
ಒಟ್ಟು: 108

ಜೆಡಿಎಸ್‌
ಬಿಬಿಎಂಪಿ ಸದಸ್ಯರು: 14
ಲೋಕಸಭಾ ಸದಸ್ಯ: 00
ರಾಜ್ಯಸಭಾ ಸದಸ್ಯರು: 01
ಶಾಸಕರು: 02
ವಿಧಾನಪರಿಷತ್‌ ಸದಸ್ಯರು: 05
ಒಟ್ಟು: 22

ಬಿಜೆಪಿ
ಬಿಬಿಎಂಪಿ ಸದಸ್ಯರು: 101
ಲೋಕಸಭಾ ಸದಸ್ಯ: 04
ರಾಜ್ಯಸಭಾ ಸದಸ್ಯರು: 02
ಶಾಸಕರು: 11
ವಿಧಾನಪರಿಷತ್‌ ಸದಸ್ಯರು: 07
ಒಟ್ಟು: 125

ಪಕ್ಷೇತರರು
ಬಿಬಿಎಂಪಿ ಸದಸ್ಯರು: 07
ಒಟ್ಟು: 07

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.