ಕೆರೆ ಸಂರಕ್ಷಣೆ ಕುರಿತು ಮೇಯರ್ ಸಭೆ
Team Udayavani, Feb 26, 2019, 6:28 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘಟನೆಗಳು, ಸ್ವಯಂ ಸೇವಕರೊಂದಿಗೆ ಮೇಯರ್ ಗಂಗಾಂಬಿಕೆ ಸೋಮವಾರ ಸಭೆ ನಡೆಸಿ ಸಲಹೆ ಪಡೆದುಕೊಂಡರು.
ಫ್ರೆಂಡ್ಸ್ ಆಫ್ ಲೇಕ್ಸ್ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ನಗರದ ಕೆರೆಗಳ ಸ್ಥಿತಿಗತಿಗಳ ಕುರಿತು ಮೇಯರ್ ಮಾಹಿತಿ ನೀಡಿದರು. ಜತೆಗೆ ಕೆರೆಗಳ ಸಂರಕ್ಷಣೆಗೆ ಪಾಲಿಕೆಯಿಂದ ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ನಗರದಲ್ಲಿರುವ ಎಲ್ಲ ಕೆರೆಗಳು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, 224ಕ್ಕೂ ಹೆಚ್ಚು ಕೆರೆಗಳ ಪೈಕಿ ಬಹುಪಾಲು ಕೆರೆಗಳಿಗೆ ತ್ಯಾಜ್ಯ ನೀರು ಹರಿಯುತ್ತಿದೆ. ಇದರೊಂದಿಗೆ ಕೆರೆ ಅಂಗಳದಲ್ಲಿ ಘನತ್ಯಾಜ್ಯ ಸುರಿಯುವುದು ಮುಂದುವರಿದಿದ್ದು, ಕಟ್ಟಡ ತ್ಯಾಜ್ಯ ಭಾರೀ ಪ್ರಮಾಣದಲ್ಲಿ ವಿಲೇವಾರಿ ಮಾಡಲಾಗುತ್ತಿದೆ.
ಇವೆಲ್ಲವುಗಳಿಂದ ಹಂತ ಹಂತವಾಗಿ ಕೆರೆ ಒತ್ತುವರಿಯಾಗುತ್ತಿವೆ. ಆ ನಿಟ್ಟಿನಲ್ಲಿ ಪಾಲಿಕೆಯಿಂದ ಕೆರೆಗಳ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ನಂತರ ಮಾತನಾಡಿದ ಮೇಯರ್ ಗಂಗಾಂಬಿಕೆ, ನಗರದ ಎಲ್ಲ ಕೆರೆಗಳನ್ನು ಸಂರಕ್ಷಿಸಲು ಪಾಲಿಕೆ ಬದ್ಧವಾಗಿದೆ.
ಕೆರೆ ಸಮಿತಿಗಳೊಂದಿಗೆ ಆಗಾಗ ಸಭೆಗಳನ್ನು ನಡೆಸಿ ಮಾಹಿತಿ ಪಡೆಯಲಾಗುವುದು. ಜತೆಗೆ ಸ್ವಯಂ ಸೇವಕರು ಸಲಹೆ ನೀಡಿರುವಂತೆ ವಾರ್ಡ್ ಕಮಿಟಿ ಸಭೆಗಳಲ್ಲಿಯೂ ಆಯಾ ವ್ಯಾಪ್ತಿಯ ಕೆರೆಗಳ ಸ್ಥಿತಿಗತಿಗಳನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ