ಮೇಯರ್ ಸಂಪತ್ರಾಜ್ ಚೀನಾ ಪ್ರವಾಸ ಆರಂಭ
Team Udayavani, Jan 11, 2018, 11:33 AM IST
ಬೆಂಗಳೂರು: ಬಿಬಿಎಂಪಿ ಮೇಯರ್ ಆಗಿ ಆಯ್ಕೆಯಾದ ಬಳಿಕ ಎರಡನೇ ಬಾರಿಗೆ ಆರ್.ಸಂಪತ್ರಾಜ್ ವಿದೇಶಿ ಪ್ರವಾಸ ಕೈಗೊಂಡಿದ್ದು, ಬುಧವಾರ ನಗರದ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಚೀನಾಗೆ ತೆರಳಿದ್ದಾರೆ.
ಚೀನಾದಲ್ಲಿ ನಡೆಯಲಿರುವ “ವಿಶ್ವ ವ್ಯಾಪಾರ ಸಮ್ಮೇಳನ’ದಲ್ಲಿ ಭಾಗವಹಿಸಲು ನಗರಾಭಿವೃದ್ಧಿ ಇಲಾಖೆಯ ಆಹ್ವಾನದ
ಮೇರೆಗೆ ಮೇಯರ್ ಸಂಪತ್ರಾಜ್ ಹಾಗೂ ಆಡಳಿತ ಪಕ್ಷ ನಾಯಕ ಮಹಮದ್ ರಿಜ್ವಾನ್ ನವಾಬ್ ಬುಧವಾರ ಚೀನಾ ಪ್ರವಾಸ ಕೈಗೊಂಡಿದ್ದು, ಜ.14ರಂದು ಚೀನಾದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಈ ಮೊದಲು ತಮ್ಮ ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಯಾರಿಗೂ ಮಾಹಿತಿ ನೀಡಿದೆ ದುಬೈ ಪ್ರವಾಸ ಕೈಗೊಂಡಿದ್ದ ಸಂಪತ್ರಾಜ್ ಅವರು, ಇದೀಗ ಅಧಿಕೃತ ಆಹ್ವಾನದ ಮೇರೆಗೆ ನಾಲ್ಕು ದಿನಗಳ ಚೀನಾ ಪ್ರವಾಸಕ್ಕೆ ಮುಂದಾಗಿದ್ದಾರೆ.
ಮೇಯರ್ ಸಂಪತ್ರಾಜ್ ಈ ಕುರಿತು ಪ್ರತಿಕ್ರಿಯಿಸಿ, ಚೀನಾದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿಶ್ವದ ಹಲವಾರು ನಗರಗಳ ಮೇಯರ್ಗಳು ಭಾಗವಹಿಸಲಿದ್ದು, ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ಆಹ್ವಾನ ಬಂದ ಹಿನ್ನೆಲೆಯಲ್ಲಿ ಚೀನಾ ಪ್ರವಾಸಕ್ಕೆ ತೆರಳಿದ್ದೇವೆ. ಸಮ್ಮೇಳನ ಮುಗಿಸಿಕೊಂಡು ಸಂಕ್ರಾಂತಿ ವೇಳೆಗೆ ನಗರಕ್ಕೆ ವಾಪಸ್ಸಾಗುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ