ಅತಿ ಹೆಚ್ಚು ಸಭೆ ನಡೆಸಿದ ಮೇಯರ್‌


Team Udayavani, Jul 29, 2018, 12:02 PM IST

ati-hechchu.jpg

ಬೆಂಗಳೂರು: ಅತಿ ಹೆಚ್ಚು ಪಾಲಿಕೆ ಸಭೆಗಳನ್ನು ನಡೆಸಿದ ಮೇಯರ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಉದ್ದೇಶದೊಂದಿಗೆ ಮೇಯರ್‌ ಆರ್‌.ಸಂಪತ್‌ರಾಜ್‌, ಈವರೆಗೆ 31ಸಭೆಗಳನ್ನು ನಡೆಸಿದ್ದಾರೆ. ಆ ಮೂಲಕ ಪಾಲಿಕೆಯ ಇತಿಹಾಸದಲ್ಲಿ ಅತಿಹೆಚ್ಚು ಸಭೆಗಳನ್ನು ನಡೆಸಿದ ಮೇಯರ್‌ ಎಂಬ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ. ಆದರೆ, ಕೌನ್ಸಿಲ್‌ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಪೈಕಿ ಶೇ.10ರಷ್ಟು ಕೂಡ ಪಾಲನೆಯಾಗಿಲ್ಲ.  

ಸಾಮಾನ್ಯವಾಗಿ ಮೇಯರ್‌ ಅವರು ಮಾಸಿಕ ಸಭೆ ಹಾಗೂ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು ಒಂದು ವಿಶೇಷ ಸಭೆ ಕರೆಯುವುದು ವಾಡಿಕೆ. ಆದರೆ, ಮೇಯರ್‌ ಸಂಪತ್‌ರಾಜ್‌ ಅವರ ಆಡಳಿತವಾಧಿ ಮುಗಿಯಲು ಎರಡು ತಿಂಗಳಿರುವ ಮೊದಲೇ ಅವರು 31 ಸಭೆಗಳನ್ನು ನಡೆಸಿದ್ದು, ಮುಂದಿನ ಎರಡು ತಿಂಗಳಲ್ಲಿ ಸಭೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಆಡಳಿತದಲ್ಲಿ ಸುಧಾರಣೆ ತರಬೇಕೆಂಬ ಸದುದ್ದೇಶದಿಂದ ಸಂಪತ್‌ರಾಜ್‌ ಮೇಯರ್‌ ಆದ ನಂತರ ತಿಂಗಳಿಗೆ ಎರಡರಿಂದ ಮೂರು ಬಾರಿ ಕೌನ್ಸಿಲ್‌ ಸಭೆ ನಡೆಸಿದರೂ ಅಲ್ಲಿ ಆಗುವ ಆದೇಶಗಳಲ್ಲಿ ಶೇ.10ರಷ್ಟೂ ಪಾಲನೆಯಾಗಿಲ್ಲ.

ಪಾಲಿಕೆಯ ಈ ಅವಧಿಯಲ್ಲಿ ಮೊದಲು ಮೇಯರ್‌ ಆಗಿದ್ದ ಮಂಜುನಾಥರೆಡ್ಡಿ 29, ನಂತರ ಜಿ.ಪದ್ಮಾವತಿ ಅವರು 21 ಸಭೆಗಳನ್ನು ನಡೆಸಿದ್ದಾರೆ. ಆದರೆ, ಕೇವಲ ಹತ್ತು ತಿಂಗಳಲ್ಲಿ ಮೇಯರ್‌ ಸಂಪತ್‌ರಾಜ್‌ 31  ಕೌನ್ಸಿಲ್‌ ಸಭೆ ನಡೆಸಿದ್ದು, ಜುಲೈ ಅಂತ್ಯಕ್ಕೆ ಸಭೆಗಳ ಸಂಖ್ಯೆ 32ಕ್ಕೇರಲಿದೆ. ಆದರೆ, ಫ‌ಲಿತಾಂಶ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಇಲ್ಲದಂತಾಗಿದೆ. ಈಮಧ್ಯೆ, ಸಂಪತ್‌ರಾಜ್‌  ನೇತೃತ್ವದಲ್ಲಿ ಕರೆಯಲಾಗುತ್ತಿರುವ ಕೌನ್ಸಿಲ್‌ ಸಭೆಗಳನ್ನು 10.30 ನಿಗದಿಪಡಿಸಿದರೂ, ಸಭೆಗಳು ಆರಂಭವಾಗುತ್ತಿರುವುದು ಮಾತ್ರ 12 ಗಂಟೆ ನಂತರವೇ.

ಭತ್ಯೆ, ಊಟಕ್ಕೆ ಲಕ್ಷ ಲಕ್ಷ ಖರ್ಚು: ಬಿಬಿಎಂಪಿ ಕೌನ್ಸಿಲ್‌ ಸಭೆಗೆ ಹಾಜರಾಗುವ ಪ್ರತಿಯೊಬ್ಬರ ಸದಸ್ಯರಿಗೂ ಒಂದು ದಿನಕ್ಕೆ 400 ರೂ. ಭತ್ಯೆ ನೀಡಲಾಗುತ್ತದೆ. 198 ಚುನಾಯಿತ ಸದಸ್ಯರು ಹಾಗೂ 20 ನಾಮನಿರ್ದೇಶಿತ ಸದಸ್ಯರಿಗೆ ಭತ್ಯೆ ನೀಡಲಾಗುತ್ತಿದೆ. ಇದರೊಂದಿಗೆ ಊಟ, ಉಪಹಾರ ಸೇರಿ ಇನ್ನಿತರ ವೆಚ್ಚ ಸೇರಿ ಒಂದು ದಿನದ ಸಭೆಗೆ ಅಂದಾಜು 8 ಲಕ್ಷ ರೂ. ವ್ಯಯಿಸಲಾಗುತ್ತಿದೆ. ಆದರೂ, ಸಭೆಗಳು ಸಮರ್ಪಕವಾಗಿ ನಡೆಯದಿರುವುದು ಹಿರಿಯ ಸದಸ್ಯರ ಕೋಪಕ್ಕೆ ಕಾರಣವಾಗಿದೆ. 

“ಪಿಂಕ್‌ ಅವರ್‌’ ಜಾರಿಯಾಗಿಲ್ಲ: ಸಂಪತ್‌ರಾಜ್‌ ಅವರು ಸಭೆಯಲ್ಲಿ ಮಹಿಳೆಯರು ಮಾತನಾಡಲು ಒಂದು ಗಂಟೆ ಪಿಂಕ್‌ ಅವರ್‌ ನಿಗದಿಪಡಿಸುವುದಾಗಿ ಘೋಷಿಸಿದ್ದರು. ಆದರೆ, ಈವರೆಗೆ ಒಮ್ಮೆಯೂ ನಿರಂತರವಾಗಿ ಒಂದು ಗಂಟೆ ಮಹಿಳೆಯರಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದು ಮಹಿಳಾ ಸದಸ್ಯರೇ ಸಭೆಯಲ್ಲಿ ನೇರವಾಗಿ ಮೇಯರ್‌ ಅವರನ್ನು ಕೇಳಿದ ಘಟನೆಗಳು ನಡೆದಿವೆ. 

ಜಾರಿಯಾಗದ ಪ್ರಮುಖ ಆದೇಶಗಳು 
-ತ್ಯಾಜ್ಯಕ್ಕೆ ಬೆಂಕಿ ಹಾಕುವವರಿಗೆ ದುಬಾರಿ ದಂಡ 
-ಕಲ್ಯಾಣ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ
-ಫ್ಲೆಕ್ಸ್‌ ಮುದ್ರಣ ಮಳಿಗೆಗಳಿಗೆ ಬೀಗ
-ಖಾಸಗಿ ತ್ಯಾಜ್ಯ ನಿರ್ವಹಣಾ ಘಟಕ ಮೇಲೆ ನಿಗಾವಹಿಸಲು ಪ್ರತ್ಯೇಕ ಸಮಿತಿ
-ಪೊಲೀಸ್‌ ಇಲಾಖೆಯಿಂದ ಜಪ್ತಿಯಾದ ವಾಹನಗಳ ವಿಲೇವಾರಿ ಮಾಡದಿದ್ದರೆ ವಾಹನಗಳು ಪಾಲಿಕೆ ವಶಕ್ಕೆ 
-ಶಿಷ್ಟಾಚಾರ ಉಲ್ಲಂ ಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
-ನೀರಿನ ಸಮಸ್ಯೆ ನಿವಾರಣೆಗೆ ವಲಯವಾರು ಪ್ರತ್ಯೇಕ ಅಧಿಕಾರಿ ನೇಮಕ
-ದುಬೈ ಮಾದರಿ ವಾಹನ ನಿಲುಗಡೆ, ಜಾಹೀರಾತು ಹಾಗೂ ಒಎಫ್ಸಿ ಶುಲ್ಕ ಸಂಗ್ರಹ
-3 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಒಂದೇ ಜಾಗದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವರ್ಗಾವಣೆ
-ಭಿತ್ತಿಪತ್ರ ಅಂಟಿಸುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.