“ನೀಟ್’ನಲ್ಲೂ ಶ್ರೀಧರ್ ಟಾಪರ್!
Team Udayavani, Jun 5, 2018, 6:10 AM IST
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶದಲ್ಲೂ ರಾಜ್ಯಕ್ಕೆ ಶ್ರೀಧರ್ ದೊಡಮನಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಪ್ರಮುಖ ನಾಲ್ಕು ಕೋರ್ಸ್ಗಳಲ್ಲಿ ಮೊದಲ ಸ್ಥಾನ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಎಂಜಿನಿಯರಿಂಗ್ ಮತ್ತು ಬಿಎಸ್ಸಿ (ಕೃಷಿ) ಪ್ರವೇಶಕ್ಕೆ ನಡೆದ ರಾಜ್ಯದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ವಿಜಯಪುರದ ಎಕ್ಸ್ಲಂಟ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಶ್ರೀಧರ್ ದೊಡಮನಿ ಮೊದಲ ರ್ಯಾಂಕ್ ಗಳಿಸಿದ್ದರು. ಈಗ ನೀಟ್ನಲ್ಲಿ 105ನೇ ರ್ಯಾಂಕ್ ಗಳಿಸುವ ಮೂಲಕ ರಾಜ್ಯದ ಎಲ್ಲ ಅಭ್ಯರ್ಥಿಗಳನ್ನು ಹಿಂದಿಕ್ಕಿದ್ದಾರೆ. 107ನೇ ರ್ಯಾಂಕ್ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ಕಾಮತ್ ಎರಡನೇ ಸ್ಥಾನ ಪಡೆದಿದ್ದಾರೆ.
ನೀಟ್ನಲ್ಲಿ ಶ್ರೀಧರ್ ದೊಡಮನಿ ರಾಜ್ಯಕ್ಕೇ ಮೊದಲ ಸ್ಥಾನ ಗಳಿಸಿದ್ದರೂ, ವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆಯುತ್ತಿಲ್ಲ. ಬದಲಿಗೆ ಎಂಜಿನಿಯರ್ ಕಡೆಗೆ ಮುಖ ಮಾಡಲು ನಿರ್ಧರಿಸಿದ್ದಾರೆ. ಆದರೆ, ರಾಜ್ಯಕ್ಕೆ 3ನೇ ರ್ಯಾಂಕ್ ಗಳಿಸಿರುವ ವಿವಿಎಸ್ ಸರ್ದಾರ್ ಪಟೇಲ್ ಕಾಲೇಜು ವಿದ್ಯಾರ್ಥಿನಿ ಮಹಿಮಾ ಕೃಷ್ಣ ಅವರ ಕನಸು ವೈದ್ಯಕೀಯ ವೃತ್ತಿ.
ಪರೀಕ್ಷೆ ಬರೆದಿದ್ದು 85 ಸಾವಿರ; ಅರ್ಹರು 54 ಸಾವಿರ
ಮೇ 6ರಂದು ನಡೆದ ನೀಟ್ ಪರೀಕ್ಷೆಯಲ್ಲಿ ರಾಜ್ಯದಿಂದ ಒಟ್ಟಾರೆ 94,808 ಅಭ್ಯರ್ಥಿಗಳು ನೀಟ್ಗೆ ಅರ್ಜಿ ಹಾಕಿದ್ದು, ಈ ಪೈಕಿ 85,288 ಮಂದಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 54,163 ಮಂದಿ ಅಂದರೆ ಶೇ. 67.02 ವಿದ್ಯಾರ್ಥಿಗಳು ಅರ್ಹತೆ ಪಡೆದಿ¨ªಾರೆ. 818 ಮಂದಿ ಕನ್ನಡದಲ್ಲಿ ಪರೀಕ್ಷೆ ಬರೆದಿದ್ದು, ಇದರಲ್ಲಿ ಶೇ 2.06ರಷ್ಟು ಮಂದಿ ಅರ್ಹತೆ ಪಡೆದಿ¨ªಾರೆ. ಒಟ್ಟು 11 ಭಾಷೆಗಳಲ್ಲಿ ಪರೀಕ್ಷೆ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಅಭ್ಯರ್ಥಿಗಳ ಸಂಖ್ಯೆ ಶೇ. 16.49ರಷ್ಟು ಏರಿಕೆಯಾಗಿದ್ದು ಕಂಡುಬಂದಿದೆ.
ಕಟ್ಆಫ್ ಇಳಿಕೆ
ಕಳೆದ ಬಾರಿಗೆ ಹೋಲಿಸಿದರೆ, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಕಟ್ಆಫ್ ಅಂಕ ಇಳಿಕೆಯಾಗಿದೆ. ಸಾಮಾನ್ಯ ವಿಭಾಗದಲ್ಲಿ 119ರಿಂದ 691 ಅಂಕಗಳಿಗೆ ನಿಂತಿದೆ. ಒಬಿಸಿ 118ರಿಂದ 96, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದಲ್ಲಿ 118ರಿಂದ 96ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್