ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಕೋವಿಡ್ ನಿಂದ ರಕ್ಷಣೆಗೆ: ದೇವಾಲಯಗಳಲ್ಲಿ ವಿಶೇಷ ಪೂಜೆಗಳಿಗೆ ಚಾಲನೆ| ಸವದತ್ತಿ ಯಲ್ಲಮ್ಮನ ದೇವಾಲಯದಲ್ಲಿ ಮುಜರಾಯಿ ಸಚಿವರ ವಿಶೇಷ ಪೂಜೆ

Team Udayavani, Oct 15, 2021, 3:13 PM IST

jyutyuty

ಬೆಂಗಳೂರು: ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸುಸಂದರ್ಭದಲ್ಲಿ, ಕೋವಿಡ್ ಸೋಂಕಿನಿಂದ ನಮ್ಮ ನಾಡಿನ ಜನತೆಗೆ ಯಾವುದೇ ತೊಂದರೆಯಾಗದಂತೆ ಪ್ರಾರ್ಥಿಸಲು ರಾಜ್ಯದ ದೇವಾಲಯಗಳಲ್ಲಿ ವಿಜಯದಶಮಿಯ ಶುಭ ದಿನಂದು ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ರಾಜ್ಯದ ಪ್ರಮುಖ ಶ್ರದ್ಧಾಕೇಂದ್ರವಾದ ಬೆಳಗಾವಿ ಜಿಲ್ಲೆಯ ಶ್ರೀಕ್ಷೇತ್ರ ಸವದತ್ತಿ ಶ್ರೀ ಯಲ್ಲಮ್ಮದೇವಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಅ. ಜೊಲ್ಲೆಯವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನಾದ್ಯಂತ ನಡೆಯುವ ವಿಶೇಷ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿದರು.

ಪ್ರಾತಃಕಾಲ ಆರು ಗಂಟೆಗೆ ಯಲ್ಲಮ್ಮನ ದೇವಾಲಯಕ್ಕೆ ಆಗಮಿಸಿದ ಸಚಿವರು ದೇವಾಲಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ನಮ್ಮ ನಾಡಿನ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅನುಗ್ರಹಿಸಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೊಳಗಾಗಿದ್ದು, ನಮ್ಮ ಮಕ್ಕಳು ಶಾಲೆಯತ್ತ ಮುಖ ಮಾಡದೇ ಮನೆಯಲ್ಲೇ ಇರುವಂತಾಗಿದೆ. ಈಗ ಮಕ್ಕಳು ಶಾಲೆಯತ್ತ ಮುಖ ಮಾಡಿರುವ ಈ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆಯಾಗದಂತೆ ದೇವಿ ಆರ್ಶೀವದಿಸಬೇಕೆಂದು ಕೋರಿದರು. ಕೋವಿಡ್ ಸೋಂಕಿನಿಂದ ತೊಂದರೆಯಾಗಿರುವ ನಾಡಿನ ಜನರು ಸುಭಿಕ್ಷ ವಾತಾವರಣದಲ್ಲಿ ಜೀವಿಸುವಂತೆ ಅನುಗ್ರಹಿಸಬೇಕೆಂದು ಪ್ರಾರ್ಥನೆ ಸಲ್ಲಿಸಿದರು.

ನಂತರ ದೇವಾಲಯದ ಅಧಿಕಾರಿಗಳು ಹಾಗೂ ಅರ್ಚಕರೊಂದಿಗೆ ಚರ್ಚಿಸಿದ ಅವರು, ದೇವಾಲಯದ ಅಗತ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಸವದತ್ತಿ ಶ್ರೀಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿ ವಿಸ್ತೃತ ಪ್ರಸ್ತಾವನೆ ಮತ್ತು ಕ್ರಿಯಾ ಯೋಜನೆ ರೂಪಿಸಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಶುಕ್ರವಾರ ವಿಜಯ ದಶಮಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ , ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಗಳನ್ನು ನೆರವೇರಿಸಲಾಗಿದೆ ಎಂದು ಸಚಿವರು ಹೇಳಿದರು.

ರಾಜ್ಯದ ಎಲ್ಲ ದೇವಾಲಯಗಳಲ್ಲಿ ಶ್ರದ್ಧಾಳು ಭಕ್ತ ಸಮೂಹಕ್ಕೆ ಅತ್ಯುತ್ತಮ ಸೌಕರ್ಯ ಒದಗಿಸುವುದು ಹಾಗೂ ಉತ್ತಮ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತಾವು ಸಚಿವರಾದ ನಂತರ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು, ಮತ್ತು ತ್ವರಿತಗತಿಯಲ್ಲಿ ದೇವಾಲಯಗಳ ಸೇವೆ ದೊರೆಯುವಂತೆ ಮಾಡಲು  ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ  ಎಂದು ಶಶಿಕಲಾ ಜೊಲ್ಲೆಯವರು ಹೇಳಿದರು.

ವಿಶೇಷ ಪೂಜೆಗೆ ಸಚಿವರನ್ನು ದೇವಾಲಯದ ಅಧಿಕಾರಿಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಸ್ಥಳೀಯ ಶಾಸಕರಾದ ಆನಂದ ಮಾಮನಿ, ದೇವಾಲಯದ ಪ್ರಮುಖರಾದ ಕೋಟರಗಸ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.