3 ಪಟ್ಟು ಅಧಿಕ ದರಕ್ಕೆ ಕಸ ಗುಡಿಸುವ ಯಂತ್ರ ಖರೀದಿ!


Team Udayavani, Mar 10, 2023, 1:10 PM IST

tdy-11

ಬೆಂಗಳೂರು: ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ತಲಾ 2 ಕೋಟಿ ರೂ. ಮೊತ್ತದ 30 ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿಗೆ ಮುಂದಾಗಿದೆ. ಆದರೆ, ಯಂತ್ರಗಳಿಗೆ ನಿಗದಿ ಮಾಡಿರುವ ಮೊತ್ತದ ಬಗ್ಗೆ ಇದೀಗ ಅಪಸ್ವರ ಎದ್ದಿದೆ.

ನಗರದಲ್ಲಿ 587.58 ಕಿ.ಮೀ. ಉದ್ದದ 156 ಮುಖ್ಯ ರಸ್ತೆಗಳು ಹಾಗೂ 735.50 ಕಿ.ಮೀ. ಉದ್ದದ 316 ಉಪಮುಖ್ಯ ರಸ್ತೆಗಳಿವೆ. ಅವುಗಳಲ್ಲಿ ಶೇಖರಣೆಯಾಗುವ ದೂಳನ್ನು ಗುಡಿಸಿ ಸ್ವತ್ಛಗೊಳಿಸುವ ಸಲುವಾಗಿ ಮೆಕ್ಯಾನಿಕಲ್‌ ಸ್ವೀಪಿಂಗ್‌ ಯಂತ್ರಗಳನ್ನು ಖರೀದಿಸಲಾಗುತ್ತಿದೆ. ಕಳೆದ 8 ತಿಂಗಳ ಹಿಂದಷ್ಟೇ 5 ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿಸಲಾಗಿತ್ತು. ಇದೀಗ ಮತ್ತೆ 30 ಮೆಕ್ಯಾನಿಕಲ್‌ ಸ್ವೀಪಿಂಗ್‌ ಯಂತ್ರಗಳ ಖರೀದಿಗೆ ಯೋಜನೆ ರೂಪಿಸಲಾಗಿದೆ. ಹೀಗೆ ಖರೀದಿಸಲಾಗುತ್ತಿರುವ ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನದ ಮೊತ್ತ 8 ತಿಂಗಳಲ್ಲೇ 3 ಪಟ್ಟು ಹೆಚ್ಚಿಸುವ ಮೂಲಕ ಬಿಬಿಎಂಪಿ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

67 ಲಕ್ಷ ರೂ.ನಿಂದ 2 ಕೋಟಿ ರೂ.: ಪ್ರಮುಖ ರಸ್ತೆಗಳಲ್ಲಿ ಕಸ ಗುಡಿಸುವ ಸಲುವಾಗಿ ಕಳೆದ 8 ತಿಂಗಳ ಹಿಂದೆ ಬಿಬಿಎಂಪಿ 5 ಮೆಕ್ಯಾನಿಕಲ್‌ ಸ್ವೀಪಿಂಗ್‌ ಯಂತ್ರಗಳನ್ನು ಖರೀದಿಸಿತ್ತು. ಅದರಲ್ಲಿ ತಲಾ ಒಂದು ವಾಹನಕ್ಕೆ 65 ಲಕ್ಷ ರೂ. ನೀಡಲಾಗಿತ್ತು. ಆದರೀಗ 30 ವಾಹನಗಳನ್ನು ಖರೀದಿಸಲಾಗುತ್ತಿದ್ದು, ಪ್ರತಿ ಸ್ವೀಪಿಂಗ್‌ ವಾಹನಕ್ಕೆ ಬರೋಬ್ಬರಿ 2 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ಅಲ್ಲದೆ, ಮಾಸಿಕ ನಿರ್ವಹಣೆಗಾಗಿ ಪ್ರತಿ ವಾಹನಕ್ಕೆ 1.48 ಲಕ್ಷ ರೂ. ನಿಗದಿ ಮಾಡಲಾಗಿದೆ.

40 ಕಿ.ಮೀ. ಕಾರ್ಯಾಚರಣೆ, 84 ಲೀ. ಡೀಸೆಲ್‌: ಫೆ.16ರಂದು ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿ ಸಂಬಂಧ ಸಭೆ ನಡೆಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಪ್ರತಿ ವಾಹನ ದಿನದಲ್ಲಿ 8 ಗಂಟೆ ಕಾರ್ಯಾಚರಣೆ ಮಾಡಬೇಕು. ಪ್ರತಿ ಗಂಟೆಗೆ ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನಕ್ಕೆ 8 ಲೀಟರ್‌ ಡೀಸೆಲ್‌ ಬೇಕಾಗಲಿದ್ದು, ಕಾರ್ಯಾಚರಣೆಗೆ 40 ಲೀಟರ್‌ ಬೇಕಾಗಲಿದೆ. ಅದಾದ ನಂತರ ವಾಹನದಲ್ಲಿ ಶೇಖರಣೆಯಾಗುವ ದೂಳು ಇನ್ನಿತರ ವಸ್ತುಗಳನ್ನು ನಿಗದಿತ ಡಂಪಿಂಗ್‌ ಯಾರ್ಡ್‌ಗೆ ಸಾಗಿಸಬೇಕಿದ್ದು, ಅದಕ್ಕೆ ಹೆಚ್ಚುವರಿಯಾಗಿ 20 ಕಿ. ಮೀ. ಸಂಚರಿಸಬೇಕು. ಒಟ್ಟಾರೆ ಒಂದು ದಿನದಲ್ಲಿ ವಾಹನವು 40 ಕಿ.ಮೀ. ಸಂಚರಿಸಲಿದ್ದು, ಅದಕ್ಕಾಗಿ 84 ಲೀ. ಡೀಸೆಲ್‌ ಬೇಕಾಗಲಿದೆ. ಹೀಗಾಗಿ ಡೀಸೆಲ್‌ ಗಾಗಿ ಒಂದು ವಾಹನಕ್ಕೆ ಮಾಸಿಕ 2,26,800 ರೂ. ನೀಡಬೇಕು ಎಂದೂ ತಿಳಿಸಲಾಗಿದೆ.

ದರ ಪುನರ್‌ ಪರಿಶೀಲನೆಗೆ ಆಗ್ರಹ: ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿ ಕುರಿತಂತೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌. ರಮೇಶ್‌ ಪ್ರತಿಕ್ರಿಯಿಸಿದ್ದು, 8 ತಿಂಗಳಲ್ಲಿ ಸ್ವೀಪಿಂಗ್‌ ವಾಹನದ ಬೆಲೆಯನ್ನು ಏಕಾಏಕಿ ಮೂರು ಪಟ್ಟು ಹೆಚ್ಚಿಸಿರುವುದು ಅನುಮಾನಕ್ಕೆ ಕಾರಣವಾಗುತ್ತಿದೆ. ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿಗೆ ನಿಗದಿ ಮಾಡಲಾಗಿರುವ ದರದ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಮತ್ತೆ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.