ವೈದ್ಯಕೀಯ ಕ್ಷೇತ್ರ ವಾಣಿಜ್ಯೀಕರಣಕ್ಕೆ ಬೇಸರ


Team Udayavani, Sep 24, 2018, 12:30 PM IST

vidyakiya.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರ ವಾಣಿಜ್ಯೀಕರಣಗೊಂಡಿರುವ ಹಿನ್ನೆಲೆಯಲ್ಲಿ, ಬಡವರಿಗೆ ಆರೋಗ್ಯ ಸೌಲಭ್ಯಗಳು ಕೈಗೆಟಕುತ್ತಿಲ್ಲ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಬೇಸರ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರ ನಡೆದ ಆರೋಗ್ಯ ಚಿಂತನ ಮಾಲಿಕೆಯ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರೋಗ್ಯಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಓದುವುದರಿಂದ, ಜನರು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂದು ತಿಳಿಸಿದರು.

ತಂತ್ರಜ್ಞಾನ ಕ್ಷೇತ್ರ ಇಂದು ಬಹಳಷ್ಟು ಮುಂದುವರಿದಿದ್ದು, ಅಂತರ್ಜಾಲವನ್ನು ಬಳಕೆ ಮಾಡಿಕೊಂಡು ಔಷಧಿಗಳನ್ನು ಮನೆಗೆ ಬಾಗಿಲಿಗೆ ತರಿಸಿಕೊಳ್ಳುವ ಪ್ರವೃತ್ತಿ ಪ್ರಚಲಿತದಲ್ಲಿದೆ. ಇಂತಹ ದಿನಮಾನಗಳಲ್ಲಿ ನಾವು ನಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದ್ದು, ಈ ದೃಷ್ಟಿಯಿಂದ ಆರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಅನುಪಮ ವಿಷಯಗಳನ್ನು ಈ ಪುಸ್ತಕಗಳು ಕಟ್ಟಿಕೊಡಲಿವೆ. ವೈದ್ಯಕೀಯ ಲೋಕ್ಕಕೆ ಸಂಬಂಧಿಸಿದ ಇಂತಹ ಕೃತಿಗಳು ಹೆಚ್ಚು ಬರಲಿ ಎಂದು ಆಶಿಸಿದರು.

ಆಸ್ಪತ್ರೆಗಳಲ್ಲಿ ಗ್ರಂಥಾಲಯ: ಪ್ರತಿಯೊಂದು ಆಸ್ಪತ್ರೆಗಳಲ್ಲಿ ಗ್ರಂಥಾಲಯಗಳು ಇರಬೇಕು ಎಂದು ಹೇಳಿದ ಅವರು, ಗ್ರಂಥಾಲಯದಲ್ಲಿ ವೈದ್ಯಕೀಯ ಲೋಕಕ್ಕೆ ಸಂಬಂಧಿಸಿದ ಪುಸ್ತಕಗಳು ಇದ್ದರೆ, ಆಸ್ಪತ್ರಗೆ ಭೇಟಿ ನೀಡುವವರಿಗೆ ಆರೋಗ್ಯಕ್ಕೆ ಸಂಬಂಧಿಸಿದ ಪೂರಕ ಮಾಹಿತಿಗಳು ದೊರೆಯಲಿವೆ. ಈ ಹಿಂದೆ ಕನ್ನಡ ವೈದ್ಯಕೀಯ ಸಾಹಿತ್ಯ ಪರಿಷತ್ತು, ಈ ಪ್ರಯತ್ನಕ್ಕೆ ಮುಂದಾಗಿತ್ತು ಎಂದು ವಸುಂಧರಾ ಭೂಪತಿ ತಿಳಿಸಿದರು.

ಕೃತಿಗಳ ಕುರಿತು ಮಾತನಾಡಿದ ಹಿರಿಯ ವಿಮರ್ಶಕಿ ಡಾ.ಎಂ.ಎಸ್‌.ಆಶಾದೇವಿ, ವೈದ್ಯಕೀಯ ಸಾಹಿತ್ಯದ ಬಗ್ಗೆಯೂ ವಿಮರ್ಶಕರು ಗಮನ ಹರಿಸುವ ಅಗತ್ಯ ಇದೆ. ಆರೋಗ್ಯದ‌ ಬಗ್ಗೆ ಅನುಭವ ಮತ್ತು ಅರಿವನ್ನು ಈ ಪುಸ್ತಕಗಳು ಕಟ್ಟಿಕೊಡುತ್ತವೆ. ಸರಳ ಭಾಷೆಯಲ್ಲಿ ಸುಲಲಿತವಾಗಿ ಆರೋಗ್ಯ ಕಾಪಾಡಿಕೊಳ್ಳುವುದರ ಕುರಿತು ಲೇಖಕರು ಸೊಗಸಾಗಿ ಹೇಳಿದ್ದಾರೆ.

ಪ್ರತಿ ಕಾಲೇಜಿನ ಗ್ರಂಥಾಲಯದಲ್ಲೂ ಈ ಪುಸ್ತಕಗಳು ದೊರಕು ವಂತಾಗಬೇಕು ಎಂದು ತಿಳಿಸಿದರು. ಹಿರಿಯ ವಿಮರ್ಶಕ ಡಾ.ನರಹಳ್ಳಿ ಬಾಲುಸುಬ್ರಹ್ಮಣ್ಯ, ಲೇಖಕರಾದ ಡಾ.ಸಿ.ಆರ್‌.ಚಂದ್ರಶೇಖರ್‌, ಡಾ.ಎಚ್‌.ಎಸ್‌.ಪ್ರೇಮಾ, ಡಾ. ವೀಣಾ ಭಟ್‌, ಡಾ.ಕೆ.ಎಸ್‌.ಚೈತ್ರಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.