ಖಾಸಗಿ ಮೆಡಿಕಲ್ ಕಾಲೇಜುಗಳಿಂದ 75% ರಷ್ಟು ಹಾಸಿಗೆ ಪಡೆಯಲಾಗುತ್ತಿದೆ : ಸಚಿವ ಡಾ.ಕೆ.ಸುಧಾಕರ್
Team Udayavani, May 6, 2021, 6:14 PM IST
ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ನಿಯಂತ್ರಣ ಸಂಬಂಧ ಗುರುವಾರ ನಡೆದ ಬೆಂಗಳೂರು ನಗರದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆಯ ನಂತರ ಮಾತನಾಡಿದ ಸಚಿವರು, ತಾಯಿ ಮತ್ತು ಮಗುವಿನ ಆಸ್ಪತ್ರೆ, ನಾನ್ ಕೋವಿಡ್ ತುರ್ತು ಆಸ್ಪತ್ರೆ ಹೊರತುಪಡಿಸಿ ಉಳಿದೆಡೆ ಶೇ.75 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಪಡೆಯಲಾಗಿದೆ. ಶೇ.50 ರಷ್ಟು ಹಾಸಿಗೆಗಳನ್ನು ಹಿಂದೆಯೇ ಪಡೆಯಲಾಗಿದೆ. ಎಲ್ಲ ಸೇರಿ ಒಟ್ಟು 6,034 ಹಾಸಿಗೆಗಳು ಸರ್ಕಾರಕ್ಕೆ ಸಿಕ್ಕಿದೆ. ಇನ್ನು 1,135 ಹಾಸಿಗೆಗಳು ದೊರೆಯಲಿವೆ ಎಂದರು.
ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಲಸಿಕೆ ಪಡೆಯುತ್ತಿದೆ. ಈಗ ಸುಮಾರು 5 ಲಕ್ಷ ಡೋಸ್ ಲಸಿಕೆ ದಾಸ್ತಾನು ಇದೆ. 1 ಕೋಟಿ ಡೋಸ್ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. 18-44 ವರ್ಷದವರಿಗೆ ನೀಡಲು ಎರಡು ಕೋಟಿಯಷ್ಟು ಲಸಿಕೆ ಆರ್ಡರ್ ಮಾಡಲಾಗಿದೆ. ಮೇ 15 ರ ವೇಳೆಗೆ ಕಂಪನಿಗಳಿಂದ ನೇರವಾಗಿ ಲಸಿಕೆ ರವಾನೆಯಾಗಲಿದೆ. ಲಸಿಕೆ ನೀಡಲು ಸರ್ಕಾರ ಬದ್ಧ ಎಂದರು.
ಅಂತಿಮ ವರ್ಷದ ಎಂಬಿಬಿಎಸ್, ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಭತ್ಯೆ ನೀಡುವುದು, ಇಂಟರ್ನಲ್ ನಲ್ಲಿ ಅಂಕ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಕೊರೊನಾ ಸೇನಾನಿಗಳೆಂದು ಪರಿಗಣಿಸಿ ಆದ್ಯತೆ ಮೇಲೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಇಡೀ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ರಿಸ್ಕ್ ಭತ್ಯೆ ನೀಡಲು ನಿರ್ಧರಿಸಲಾಗಿದೆ. ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಕಡಿಮೆ ಮಾಡಲು ಉತ್ತಮ ಚಿಕಿತ್ಸೆ ನೀಡಬೇಕು, ಡೆತ್ ಆಡಿಟ್ ಮಾಡಬೇಕು, ಟೆಲಿ ಐಸಿಯು ಸೇವೆಯೂ ನೀಡಬೇಕು ಎಂದು ಸೂಚಿಸಲಾಗಿದೆ.
ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ