ಮೇಕೆದಾಟು: ತಮಿಳುನಾಡಿಗೆ ಆತಂಕ ಬೇಡ: ಡಿ.ಕೆ.ಶಿವಕುಮಾರ್
Team Udayavani, Dec 1, 2018, 6:50 AM IST
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಜಗಳ ಮಾಡುವುದು ಬೇಡ ಎಂದು ನಾನು ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ತಮಿಳುನಾಡಿಗೆ ಮೇಲೆದಾಟು ಯೋಜನೆ ಸಂಬಂಧ ನಮ್ಮಲ್ಲಿನ ಕಾರ್ಯಯೋಜನೆ ರೂಪು-ರೇಷೆ ನೀಡಲು ಸಿದ್ಧ. ಇದನ್ನು ನಾನು ಕೇಂದ್ರ ಸಚಿವರ ಗಮನಕ್ಕು ತಂದಿದ್ದೇನೆ ಎಂದು ತಿಳಿಸಿದರು.
ಉಭಯ ರಾಜ್ಯಗಳು ಪರಸ್ಪರ ಸಹಕಾರ ಮತ್ತು ವಿಶ್ವಾಸದಿಂದ ಯೋಜನೆ ಜಾರಿಗೊಳಿಸಬೇಕು ಎಂಬುದು ನಮ್ಮ ಅಭಿಪ್ರಾಯ. ಸಮುದ್ರಕ್ಕೆ ಹರಿದು ಹೋಗುವ ನೀರು ಹಿಡಿದಿಟ್ಟುಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದರಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಸ್ವಂತ ಹಣದಿಂದ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಕೇಂದ್ರ ಸರ್ಕಾರದ ಅನುಮತಿಯೂ ದೊರೆತಿದೆ. ತಮಿಳುನಾಡು ಸರ್ಕಾರ ಸುಪ್ರೀಂಕೊರ್ಟ್ ಮೊರೆ ಹೋಗಿದೆ ಎಂಬ ಮಾಹಿತಿಯಿದೆ. ಹೀಗಾಗಿ,ನಾನು ವಿನಯಪೂರ್ವಕವಾಗಿ ಮನವಿ ಮಾಡುತ್ತಿದ್ದೇನೆ. ತಮಿಳುನಾಡಿಗೆ ಆತಂಕ ಬೇಡ ಎಂದರು.
ಡಿಸೆಂಬರ್ 6 ರಂದು ಎಲ್ಲ ಮಾಜಿ ಮುಖ್ಯಮಂತ್ರಿಗಳು, ನೀರಾವರಿ ಸಚಿವರು ಹಾಗೂ ತಜ್ಞರ ಸಭೆ ಕರೆದಿದ್ದು ಅಲ್ಲಿ ಮೇಕೆದಾಟು ಯೋಜನೆ ಬಗ್ಗೆಯೂ ಸಮಗ್ರವಾಗಿ ಚರ್ಚಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು