ಹಾಲಿನ ಪ್ಯಾಕೆಟ್ ಮೇಲೂ ಸಂದೇಶ
Team Udayavani, May 12, 2018, 1:41 PM IST
ಬೆಂಗಳೂರು: ಹಾಲು ಮತ್ತು ಮೊಸರಿನ ಪ್ಯಾಕೆಟ್ಗಳು ಹಾಗೂ ಸರ್ಕಾರಿ ಬಸ್ಗಳ ಟಿಕೆಟ್ಗಳು ಈಗ ರಾಜ್ಯದಲ್ಲಿ ಮತದಾನ ಜಾಗೃತಿ ಮೂಡಿಸುವ ಪ್ರಮುಖ ಮಾಧ್ಯಮಗಳಾಗಿವೆ.
ನಂದಿನಿ ಹಾಲಿನ ಪ್ಯಾಕೆಟ್ ಮತ್ತು ಬಸ್ ಟಿಕೆಟ್ಗಳು ಅತ್ಯಲ್ಪ ಅವಧಿಯಲ್ಲಿ ನಿತ್ಯ ಲಕ್ಷಾಂತರ ಮತದಾರರನ್ನು ತಲುಪುತ್ತಿವೆ. ಚುನಾವಣಾ ಆಯೋಗದ ಸೂಚನೆ ಮೇರೆಗೆ ನಂದಿನಿ ಹಾಲು ಹಾಗೂ ಮೊಸರಿನ ಪ್ಯಾಕೆಟ್ಗಳ ಮುಂಭಾಗದಲ್ಲಿ ಗ್ರಾಹಕರಿಗೆ ಎದ್ದುಕಾಣುವಂತೆ “ಮೇ-12 ತಪ್ಪದೆ ಮತ ಹಾಕಿ’ ಎಂದು ಮುದ್ರಿಸಲಾಗಿದೆ.
ಪ್ರತಿ ದಿನ ರಾಜ್ಯದಲ್ಲಿ 36 ಲಕ್ಷ ಲೀ. ವಿವಿಧ ಪ್ರಕಾರಗಳ ಹಾಲು ಮತ್ತು 12 ಲಕ್ಷ ಲೀ. ಮೊಸರು ಮಾರಾಟ ಆಗುತ್ತಿದೆ. ಇವುಗಳು ದಿನಬಳಕೆಯ ಅಗತ್ಯ ವಸ್ತುಗಳಲ್ಲಿ ಬರುವುದರಿಂದ ಲಕ್ಷಾಂತರ ಜನ ಖರೀದಿಸುತ್ತಾರೆ. ಇದರೊಂದಿಗೆ ಮತ ದಾನದ ಬಗ್ಗೆ ಜಾಗೃತಿಯೂ ಮೂಡಿಸಿದಂತಾಗುತ್ತಿದೆ.
ಬಸ್ ಟಿಕೆಟ್ನಲ್ಲೂ ಜಾಗೃತಿ: ಅದೇ ರೀತಿ, ಕೆಎಸ್ ಆರ್ಟಿಸಿ 8,800 ಬಸ್ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ 28 ಲಕ್ಷ ಜನ ಪ್ರಯಾಣಿಸುತ್ತಾರೆ. ಈ ಪೈಕಿ ಶೇ. 20ರಷ್ಟು ಇ-ಬುಕಿಂಗ್ ಮೂಲಕ ಟಿಕೆಟ್ ಕಾಯ್ದಿರಿಸಲಾಗುತ್ತದೆ. ಉಳಿದ 22 ಲಕ್ಷ ಪ್ರಯಾಣಿಕರು ನೇರವಾಗಿ ನಿರ್ವಾಹಕರಿಂದ ಟಿಕೆಟ್ ಪಡೆದು ಪ್ರಯಾಣಿಸುತ್ತಾರೆ. ಅವರೆಲ್ಲರಿಗೂ ಈ ಜಾಗೃತಿ ಸಂದೇಶ ಮುದ್ರಿತ ರೂಪದಲ್ಲಿ ತಲುಪಲಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಂಟಿಸಿ ಬಸ್ಗಳಲ್ಲಿ ಕೂಡ ಮತದಾನದ ಅರಿವು ಮೂಡಿಸಲಾಗುತ್ತಿದೆ. ಬಸ್ಗಳಲ್ಲಿರುವ ಡಿಜಿಟಲ್ ಫಲಕಗಳ ಮೇಲೆ ಮತದಾನ ಮಾಡುವ ಬಗ್ಗೆ ಸಂದೇಶ ಬಿತ್ತರಿಸುವ ಮೂಲಕ ಪ್ರಯಾಣಿಕರಿಗೆ ಮತದಾನ ಮಾಡುವಂತೆ ಮನವಿ ಮಾಡಲಾಗುತ್ತಿದೆ. ಬಸ್ಗಳಲ್ಲಿ ಮತದಾನದ ಮಹತ್ವ, ಚುನಾವಣೆ ದಿನ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವಂತೆ ಮನವಿ ಮಾಡುವ ಸಂದೇಶಗಳನ್ನು ನಿರಂತರವಾಗಿ ಬಿತ್ತರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು