ಸಾಯುವ ಮುನ್ನ ಉಪನ್ಯಾಸಕನಿಗೆ ಸಂದೇಶ!


Team Udayavani, Mar 2, 2019, 6:10 AM IST

prana.jpg

ಬೆಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಆತ್ಮಹತ್ಯೆಗೆ ಶರಣಾಗುವುದಕ್ಕೂ ಮೊದಲು ವಿದ್ಯಾರ್ಥಿನಿಯು, “ನನಗೆ ಬದುಕಲು ಇಷ್ಟವಿಲ್ಲ. ಸಾಯುತ್ತಿದ್ದೇನೆ’ ಎಂದು ಉಪನ್ಯಾಸಕನಿಗೆ ಮೆಸೇಜ್‌ ಕಳುಹಿಸಿರುವುದು ಪೊಲೀಸರ ವೇಳೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿ ಕಳುಹಿಸಿದ ಮೆಸೇಜ್‌ಗೆ ಪ್ರತಿಕ್ರಿಯಿಸಿರುವ ಉಪನ್ಯಾಸಕ “ದುಡುಕಿ ನಿರ್ಧಾರ ತೆಗೆದುಕೊಳ್ಳಬೇಡ’ ಎಂದು ಬುದ್ಧಿವಾದ ಹೇಳಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಯಿಂದ ಹೆದರಿದ ಉಪನ್ಯಾಸಕ, ಬಂಧನ ಭೀತಿಯಿಂದ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ. 

ತುಮಕೂರು ರಸ್ತೆಯ ಎಂಟನೇ ಮೈಲಿಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುಷ್ಮಾ (ಹೆಸರು ಬದಲಾಯಿಸಲಾಗಿದೆ), ಫೆ.26ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆಗೆ ಶರಣಾದ ಸುಷ್ಮಾ ತಂದೆ, ಉಪನ್ಯಾಸಕ ಉದಯ್‌ ಮಗಳಿಗೆ ಆಗಾಗ ಮೆಸೇಜ್‌ ಮಾಡುತ್ತಿದ್ದ. ಆಕೆ ಆತ್ಮಹತ್ಯೆ ಮಾಡಿಕೊಂಡ ದಿನವೂ ಮೆಸೇಜ್‌ ಮಾಡಿದ್ದಾನೆ. ಹೀಗಾಗಿ ಆತನ ಪ್ರೇರಣೆಯಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಆರೋಪಿಸಿ ಬಾಗಲಕುಂಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಉಪನ್ಯಾಸಕ ಉದಯ್‌ ವಿರುದ್ಧ “ಆತ್ಮಹತ್ಯೆಗೆ ಪ್ರಚೋದನೆ’ ನೀಡಿದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನ ಬಂಧನಕ್ಕೆ ಬಲೆಬೀಸಿದ್ದಾರೆ. ಮೃತ ಸುಷ್ಮಾಳ ಮೊಬೈಲ್‌ ಫೋನ್‌ ಪರಿಶೀಲಿಸಲಾಗಿದ್ದು, ಸುಷ್ಮಾ ಹಾಗೂ ಉದಯ್‌ ನಡುವೆ ಹಲವು ಮೆಸೇಜ್‌ಗಳು ರವಾನೆಯಾಗಿವೆ.

ಕೆಲವು ಮೆಸೇಜ್‌ಗಳು ಡಿಲೀಟ್‌ ಆಗಿವೆ. ಘಟನೆ ನಡೆದ ದಿನದಂದೇ ಉದಯ್‌ ತನ್ನ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಮೃತ ವಿದ್ಯಾರ್ಥಿನಿ ಸುಷ್ಮಾ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನಲ್ಲಿಯೇ ಉದಯ್‌ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರಿಗೂ ಆತ್ಮೀಯತೆಯಿತ್ತು.

ಇಬ್ಬರು ಪರಸ್ಪರ ಮೆಸೇಜ್‌ ಮಾಡುತ್ತಿದ್ದರು. ಈ ವಿಚಾರ ಪೋಷಕರಿಗೂ ತಿಳಿದಿತ್ತು. ಆದರೆ, ಸಹಪಾಠಿ ವಿದ್ಯಾರ್ಥಿ ಇರಬಹುದು ಎಂದು ಸುಮ್ಮನಾಗಿದ್ದರು. ಜತೆಗೆ, ಸುಷ್ಮಾ ಕೂಡ ವಿಧ್ಯಾಭ್ಯಾಸದಲ್ಲಿ ಮುಂದಿದ್ದರು. ಹೀಗಾಗಿ, ಹೆತ್ತವರು ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ.

ಪರೀಕ್ಷೆ ಹಿನ್ನೆಲೆಯಲ್ಲಿ ಓದುವ ಸಂಬಂಧ ಸುಷ್ಮಾ, ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಫೆ.26ರಂದು ತಂದೆ ಕೆಲಸಕ್ಕೆ ಹೋಗಿದ್ದರು. ಆಕೆಯ ಸಹೋದರಿ ಕಾಲೇಜಿಗೆ ತೆರಳಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ತಾಯಿ ಅಂಗಡಿಗೆ ತೆರಳಿದಾಗ, ಒಳಗಿನಿಂದ ಡೋರ್‌ ಲಾಕ್‌ ಮಾಡಿಕೊಂಡಿದ್ದ ಸುಷ್ಮಾ, ಫ್ಯಾನಿಗೆ ನೇಣುಬಿಗಿದುಕೊಂಡು ಮೃತಪಟ್ಟಿದ್ದಳು.

ಅಂಗಡಿಯಿಂದ ಮರಳಿದ ತಾಯಿ ಎಷ್ಟೇ ಬಾಗಿಲು ಬಡಿದರೂ ಒಳಗಡೆಯಿಂದ ಯಾವುದೇ  ಪ್ರತಿಕ್ರಿಯೆ ಬಂದಿರಲಿಲ್ಲ. ಬಳಿಕ ಮತ್ತೂಂದು ಕೀಲಿ ಬಳಸಿ ಬಾಗಿಲು ತೆಗೆದು ನೋಡಿದಾಗ ಸುಷ್ಮಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.