ಬೌರಿಂಗ್‌ ವಿದ್ಯಾಲಯಕ್ಕೆ ಮೆಟ್ರೋ ಸಂಪರ್ಕಕ್ಕೆ ಚಿಂತನೆ


Team Udayavani, Nov 9, 2017, 1:06 PM IST

blore3.jpg

ಬೆಂಗಳೂರು: ಶಿವಾಜಿನಗರದಲ್ಲಿ ಬುಧವಾರವಷ್ಟೇ ಶಂಕುಸ್ಥಾಪನೆ ನೆರವೇರಿಸಲಾದ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. “ನಮ್ಮ ಮೆಟ್ರೋ’ 2ನೇ ಹಂತದಲ್ಲಿ ಶಿವಾಜಿನಗರದ ಮೂಲ ಕವೇ ಸುರಂಗ ಮಾರ್ಗದಲ್ಲಿ ಮೆಟ್ರೋ ಹಾದು ಹೋಗಲಿದ್ದು ಅದನ್ನು ಹತ್ತಿರದಲ್ಲೇ ಇರುವ ಬೌರಿಂಗ್‌ ಆಸ್ಪತ್ರೆಗೆ ತೆಗೆದುಕೊಂಡು ಹೋಗಲು ಚರ್ಚೆ ನಡೆದಿದೆ.

ಇದಕ್ಕಾಗಿ ಮೆಟ್ರೋ ರೈಲು ಮಾರ್ಗ ನಿರ್ಮಿಸುವುದಿಲ್ಲ ವಾದರೂ ಸುರಂಗದಲ್ಲೇ ಶಿವಾಜಿನಗರ- ವೈದ್ಯಕೀಯ ಕಾಲೇಜು ನಡುವೆ ಪ್ರತ್ಯೇಕ ಪಾದಚಾರಿ ಪಥ ರೂಪಿಸಲಾಗುವುದು. ಆಗ, ಕಾಲೇಜು ಬಾಗಿಲಿಗೆ ಮೆಟ್ರೋ ಮಾರ್ಗ ಬರುವುದರಿಂದ ಕಲ್ಪಿಸುವುದರಿಂದ ಅಲ್ಲಿ ಬರುವ ವಿದ್ಯಾರ್ಥಿಗಳು ಮತ್ತು ರೋಗಿಗಳಿಗೆ ಅನುಕೂಲ ಆಗುತ್ತದೆ ಎಂಬುದು ಲೆಕ್ಕಾಚಾರ. ಈ ಸಂಬಂಧ ಸಾಧಕ-ಬಾಧಕಗಳ ಅಧ್ಯಯನಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಮುಂದಾಗಿದೆ.

ಎರಡನೇ ಹಂತದ “ನಮ್ಮ ಮೆಟ್ರೋ’ ಯೋಜನೆಯಲ್ಲಿ ವಿಸ್ತರಿಸಿದ ಮಾರ್ಗಗಳ ಜತೆಗೆ 2 ಪ್ರತ್ಯೇಕ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಆ ಪೈಕಿ ಒಂದು ಮಾರ್ಗ ಗೊಟ್ಟಿಗೆರೆ (ಐಐಎಂಬಿ) -ನಾಗವಾರ ನಡುವೆ ಸಂಪರ್ಕ ಕಲ್ಪಿಸಲಿದೆ. 13.79 ಕಿ.ಮೀ. ಉದ್ದದ ಈ ಸುರಂಗ ಮಾರ್ಗವು ಶಿವಾಜಿನಗರದ ಮೂಲಕವೇ ಹಾದುಹೋಗಲಿದ್ದು, ಅಲ್ಲೊಂದು ನಿಲ್ದಾಣವನ್ನೂ ನಿರ್ಮಿಸುತ್ತಿದೆ. ಹಾಗಾಗಿ, ಪಕ್ಕದಲ್ಲೇ ಇರುವ ಬೌರಿಂಗ್‌ ಆಸ್ಪತ್ರೆಗೆ
ಸಂಪರ್ಕ ಕಲ್ಪಿಸಬಹುದು ಇದರಿಂದ ಅನುಕೂಲ ವಾಗಲಿದೆ ಎಂಬುದು ಸರ್ಕಾರದ ನಿರ್ಧಾರ .ಶಿವಾಜಿನಗರ ಬಸ್‌
ನಿಲ್ದಾಣದ ಹಿಂಭಾಗದಲ್ಲೇ ಮೆಟ್ರೋ ನಿಲ್ದಾಣ ರೂಪಿಸಲಾಗುತ್ತಿದೆ. ಅಲ್ಲಿಂದ ಕೇವಲ ಸುಮಾರು 200 ಮೀಟರ್‌ ಅಂತರದಲ್ಲೇ ಬೌರಿಂಗ್‌ ಆಸ್ಪತ್ರೆ ಇದ್ದು, ಆವರಣದಲ್ಲೇ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬೆನ್ನಲ್ಲೇ ಇವೆರಡರ ನಡುವೆ ಸಂಪರ್ಕ ಕಲ್ಪಿಸುವ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳಿಂದ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಂಆರ್‌ಸಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

ನೋಟಿಸ್‌ ಜಾರಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮೆಟ್ರೋ ನಿಲ್ದಾಣಗಳಲ್ಲಿ ನೀರು ನುಗ್ಗು ತ್ತಿದ್ದು, ಈ ಸಂಬಂಧ
ಲೋಕಾಯುಕ್ತರು ಬಿಎಂಆರ್‌ಸಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿ ಸಿಕೊಂಡಿದ್ದಾರೆ. ಈ ಸಂಬಂಧ ನಿಗಮಕ್ಕೆ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯವಾಗಿ ನಾಯಂಡ ಹಳ್ಳಿಯ ಮೆಟ್ರೋ ನಿಲ್ದಾಣದ ಎದುರು ವೃಷಭಾವತಿ ನದಿ ಹಾದುಹೋಗಿದೆ. ಆ ನೀರು ನಿಲ್ದಾಣದಲ್ಲಿ ನುಗ್ಗುತ್ತಿದೆ. ಇದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಟಿಸಿನಲ್ಲಿ ಪ್ರಶ್ನಿಸಿದೆ ಎಂದು ಮೂಲಗಳು ತಿಳಿಸಿವೆ.

ಶಿವಾಜಿನಗರದ ಮೂಲಕ ಹಾದುಹೋಗುವ ಮೆಟ್ರೋ ಅನ್ನು ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ವೈದ್ಯಕೀಯ ಕಾಲೇಜಿಗೆ
ಸಂಪರ್ಕ ಕಲ್ಪಿಸುವ ಆಲೋಚನೆ ಇದೆ. ಹೇಗೆ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಬಗ್ಗೆ ವ್ಯವಸ್ಥಾಪಕ
ನಿರ್ದೇಶಕರು ನಿರ್ಧರಿಸುವರು.
ಯು.ಎ. ವಸಂತರಾವ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಬಿಎಂಆರ್‌ಸಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.