ಮೆಟ್ರೋ ಹಾದಿಯ ದುರ್ಗಮ ಪಯಣ


Team Udayavani, Jul 14, 2018, 12:15 PM IST

mero-haadiya.jpg

ಬೆಂಗಳೂರು: ಮಳೆಗಾಲದ ಜತೆಗೆ “ನಮ್ಮ ಮೆಟ್ರೋ’ ಕಾಮಗಾರಿ ನಡೆಯುವ ಮಾರ್ಗಗಳು ಅಕ್ಷರಶಃ ಹೊಂಡಗಳಾಗಿವೆ.  ಕನಕಪುರ ರಸ್ತೆಯ ಜೆ.ಪಿ.ನಗರ, ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ ಹಾಗೂ ಕನಕಪುರ ರಸ್ತೆ ಮತ್ತು ನಾಯಂಡಹಳ್ಳಿ ಜಂಕ್ಷನ್‌ನಿಂದ ರಾಜರಾಜೇಶ್ವರಿನಗರದ ದ್ವಾರದ ಸಮೀಪ ನಿರ್ಮಾಣಗೊಳ್ಳುತ್ತಿರುವ ಮೆಟ್ರೋ ನಿಲ್ದಾಣಗಳ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಈ ಮಾರ್ಗದಲ್ಲಿ ವಾಹನಗಳ ಚಾಲನೆ ತಂತಿ ಮೇಲಿನ ನಡಿಗೆ ಆಗಿದೆ. 

ಕಳೆದ ಅಕ್ಟೋಬರ್‌ನಲ್ಲಿ ಇದೇ ಮೈಸೂರು ರಸ್ತೆಯಲ್ಲಿ ರಾಮನಗರದ ರಾಧಾ ಎಂಬುವರು ಬಲಿ ಆಗಿದ್ದರು. ಈಗ ಮತ್ತದೆ ಸ್ಥಿತಿ ಉದ್ಭವಿಸಿದೆ. ಆದರೆ, ಬಿಎಂಆರ್‌ಸಿ ಮಾತ್ರ ಈ ವಿಚಾರದಲ್ಲಿ ನಿರಮ್ಮಳವಾಗಿದೆ. ಬಿಬಿಎಂಪಿ ತನಗೆ ಸಂಬಂಧಿಸಿದ್ದಲ್ಲ ಎಂದು ಹೇಳಿದರೆ, ನಿಲ್ದಾಣ ನಿರ್ಮಾಣ ಮಾತ್ರ ತನ್ನ ಕೆಲಸ ಎಂಬ ಧೋರಣೆ ಅನುಸರಿಸುತ್ತಿದೆ. ಗುತ್ತಿಗೆದಾರರು ಮೆಟ್ರೋ ಕಾಮಗಾರಿಯಲ್ಲಿ “ಬ್ಯುಸಿ’ ಆಗಿದ್ದಾರೆ. ಇದೆಲ್ಲದರ ನಡುವೆ ಮೈಸೂರು ರಸ್ತೆ “ಡೇಂಜರ್‌ ಝೋನ್‌’ ಆಗಿ ಮಾರ್ಪಟ್ಟಿದೆ. 

ತಗ್ಗಿದ ವಾಹನಗಳ ವೇಗ: ಅಷ್ಟೇ ಅಲ್ಲ, ಅತಿ ಹೆಚ್ಚು ವಾಹನದಟ್ಟಣೆ ಇರುವ ಮಾರ್ಗಗಳಲ್ಲಿ ನಾಯಂಡಹಳ್ಳಿ ಜಂಕ್ಷನ್‌ ಮತ್ತು ಕನಕಪುರ ರಸ್ತೆ ಕೂಡ ಸೇರಿವೆ. ಹದಗೆಟ್ಟ ರಸ್ತೆಗಳು ಮತ್ತು ಕಾಮಗಾರಿ ಪ್ರಗತಿಯಲ್ಲಿರುವುದರಿಂದ ವಾಹನಗಳ ವೇಗ ಕೂಡ ಕುಸಿದಿದೆ. ನಗರದ ವಾಹನಗಳ ವೇಗ ಗಂಟೆಗೆ 17 ಕಿ.ಮೀ. ಇದ್ದರೆ, ಈ ಮಾರ್ಗಗಳಲ್ಲಿ 15ರಿಂದ 16 ಕಿ.ಮೀ. ಇದೆ. 

ಅದರಲ್ಲೂ ನಾಯಂಡಹಳ್ಳಿ, ರಾಜರಾಜೇಶ್ವರಿನಗರ ಗೇಟ್‌ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಮುಂಭಾಗದ ನಿಲ್ದಾಣಗಳ ನಡುವಿನ ಮಾರ್ಗವಂತೂ ಸಾಕಷ್ಟು ಹಾಳಾಗಿದೆ. ನಿರ್ಮಾಣಕ್ಕೆ ಅಗತ್ಯವಿರುವ ಉಪಕರಣಗಳು, ಯಂತ್ರಗಳನ್ನು ಇದೇ ರಸ್ತೆಯಲ್ಲಿ ಕೊಂಡೊಯ್ಯಲಾಗುತ್ತದೆ. ಭಾರಿ ಗಾತ್ರದ ಸಲಕರಣೆಗಳ ಸಾಗಣೆಯಿಂದ ರಸ್ತೆ ಡಾಂಬರು ಕಿತ್ತುಹೋಗಿದೆ. ಈ ಮಧ್ಯೆ ಮಳೆಯಿಂದ ಆ ಗುಂಡಿಗಳಲ್ಲಿ ನೀರು ತುಂಬಿದೆ. ಪರಿಣಾಮ ವಾಹನ ಸವಾರರಿಗೆ ಮೃತ್ಯುಕೂಪಗಳಂತೆ ಕಾದುಕುಳಿತಿವೆ.

ಮೆಟ್ರೋ ಕಾಮಗಾರಿ ಕಳೆದ ಎರಡೂವರೆ ವರ್ಷಗಳಿಂದ ಇಲ್ಲಿ ಪ್ರಗತಿಯಲ್ಲಿದೆ. ಆದರೆ, ಆಮೆಗತಿಯ ಕಾಮಗಾರಿಯ ಎಫೆಕ್ಟ್ ಸ್ಥಳೀಯರು ಮತ್ತು ಆ ಮಾರ್ಗದ ವಾಹನ ಸವಾರರ ಮೇಲೆ ಆಗುತ್ತಿದೆ. ರಸ್ತೆಯಲ್ಲಿ ದೂಳು ಉಂಟುಮಾಡಬಾರದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದ್ದರೂ ಪ್ರಯೋಜನವಾಗಿಲ್ಲ. ನಾಯಂಡಹಳ್ಳಿ ಜಂಕ್ಷನ್‌ ಮಾತ್ರವಲ್ಲ; ಈ ಮಾರ್ಗದ ಉಳಿದೆರಡು ನಿಲ್ದಾಣಗಳ ರಸ್ತೆ ಸ್ಥಿತಿಯೂ ಭಿನ್ನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.  

ಅಲ್ಲದೆ, ಮೈಸೂರು ರಸ್ತೆಯಿಂದ ಕಾರ್ಪೋರೇಷನ್‌ಗೆ ತೆರಳುವ ಮಾರ್ಗದಲ್ಲಿ ಅಲ್ಲಲ್ಲಿ ರಸ್ತೆಗಳು ಗುಂಡಿಮಯವಾಗಿವೆ. ಮೈಸೂರು ರಸ್ತೆಯಿಂದ ಚಾಮರಾಜಪೇಟೆಗೆ ಹೋಗಲು ಕೆ.ಆರ್‌. ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಫ್ಲೈಓವರ್‌ ಕೆಳಗಡೆಯಿಂದ ಬರಬೇಕು. ಈ ರಸ್ತೆಯಲ್ಲಿ ಕೂಡ ಗುಂಡಿಗಳು ರಾರಾಜಿಸುತ್ತಿವೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.