ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ


Team Udayavani, Dec 28, 2018, 11:34 AM IST

hosa-metrio.jpg

ಬೆಂಗಳೂರು: ಎಂ.ಜಿ.ರಸ್ತೆ-ಇಂದಿರಾನಗರ ನಡುವಿನ “ನಮ್ಮ ಮೆಟ್ರೋ’ ಸೇವೆ ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ತಬ್ದಗೊಳ್ಳಲಿದ್ದು, ಹೊಸ ವರ್ಷಾಚರಣೆಗೆ ಮತ್ತೆ ಎಂದಿನಂತೆ ಪ್ರಯಾಣಿಕರ ಅನುಕೂಲಕ್ಕಾಗಿ ಸಂಚಾರಕ್ಕೆ ಸಜ್ಜುಗೊಳ್ಳಲಿದೆ.

ಹೊಸ ವರ್ಷಾಚರಣೆಯಂದು ಅಂದರೆ, ಡಿ.31ರ ರಾತ್ರಿ 11ರಿಂದ 2019ರ ಜ.1ರ ಬೆಳಗಿನಜಾವ 1.30ರವರೆಗೆ ಮೆಟ್ರೋ ಸೇವೆ ಇರಲಿದೆ. ಈ ಹೆಚ್ಚುವರಿ ಸೇವೆಯ ಅವಧಿಯಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಕಾರ್ಯಾಚರಣೆ ಮಾಡಲಿದ್ದು, ಕೊನೆಯ ರೈಲುಗಳು ಮೆಜೆಸ್ಟಿಕ್‌ನ ಕೆಂಪೇಗೌಡ ನಿಲ್ದಾಣದಿಂದ ಬೆಳಗಿನಜಾವ 2 ಗಂಟೆಗೆ ಏಕಕಾಲಕ್ಕೆ ನಾಲ್ಕು ದಿಕ್ಕುಗಳಿಗೂ ಹೊರಡಲಿವೆ.

ಅಂದು ಎಂ.ಜಿ. ರಸ್ತೆ, ಟ್ರಿನಿಟಿ ನಿಲ್ದಾಣ, ಕಬ್ಬನ್‌ ಉದ್ಯಾನ ನಿಲ್ದಾಣಗಳಿಂದ ಇತರೆ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ಪ್ರಯಾಣಿಸಿದರೂ ದರ 50 ರೂ. ನಿಗದಿಪಡಿಸಲಾಗಿದೆ. ಈ ಸಂಬಂಧ ಪ್ರಯಾಣಿಕರಿಗೆ ಕಾಗದದ ಟಿಕೆಟ್‌ಗಳನ್ನು ವಿತರಿಸಲಿದ್ದು, ಟೋಕನ್‌ ನೀಡುವುದಿಲ್ಲ. ಸ್ಮಾರ್ಟ್‌ ಕಾರ್ಡ್‌ ಹೊಂದಿದವರಿಗೆ ಎಂದಿನಂತೆ ರಿಯಾಯ್ತಿಯ ಪ್ರಯಾಣ ದರ ಅನ್ವಯ ಆಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸ್ಪಷ್ಟಪಡಿಸಿದೆ.

ವಿಸ್ತರಿಸಿದ ಅವಧಿಯಲ್ಲಿ ಟ್ರಿನಿಟಿ, ಎಂ.ಜಿ.ರಸ್ತೆ ಮತ್ತು ಕಬ್ಬನ್‌ ಉದ್ಯಾನವನ ನಿಲ್ದಾಣಗಳಿಂದ ಪ್ರಯಾಣಿಸಲು ಅನುಕೂಲ ಆಗುವಂತೆ ರಾತ್ರಿ 8 ಗಂಟೆಯಿಂದಲೇ ಎಲ್ಲ ನಿಲ್ದಾಣಗಳಲ್ಲಿ ಮುಂಚಿತವಾಗಿ ಕಾಗದದ ಟಿಕೆಟ್‌ಗಳ ಖರೀದಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮವು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. 

ಇಂದಿನಿಂದ 3 ದಿನ ಸೇವೆ ಇರಲ್ಲ: ಈ ಮಧ್ಯೆ ಟ್ರಿನಿಟಿ ನಿಲ್ದಾಣದ ಬಳಿ ಶಿಥಿಲಗೊಂಡ ಕಾಂಕ್ರೀಟ್‌ ದುರಸ್ತಿ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ 8ರಿಂದ ಮೂರು ದಿನಗಳ ಕಾಲ ಎಂ.ಜಿ.ರಸ್ತೆ-ಇಂದಿರಾನಗರ ನಿಲ್ದಾಣದ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. 31ರ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ಸೇವೆ ಪುನರಾರಂಭಗೊಳ್ಳಲಿದೆ. ಈ ಮಧ್ಯೆ ಉಳಿದ ಮಾರ್ಗಗಳಲ್ಲಿ ಮೆಟ್ರೋ ಕಾರ್ಯಾಚರಣೆ ಎಂದಿನಂತೆ ಇರಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಕಬ್ಬನ್‌ ಉದ್ಯಾನದಿಂದ ಬೈಯಪ್ಪನಹಳ್ಳಿವರೆಗೆ ಬರುವ ಮತ್ತು ಹೋಗುವ ಸೇರಿದಂತೆ ಎರಡೂ ಮಾರ್ಗಗಳಲ್ಲಿ ಬಿಎಂಆರ್‌ಸಿಎಲ್‌ ವತಿಯಿಂದ ಉಚಿತ ಬಸ್‌ ಸೇವೆ ಕಲ್ಪಿಸಲಾಗಿದೆ. ಶುಕ್ರವಾರ ರಾತ್ರಿ 8ರಿಂದ 11ರವರೆಗೆ ಬಸ್‌ ಸೇವೆ ಇರಲಿದೆ.

ಇನ್ನು ಉತ್ತರ-ದಕ್ಷಿಣದ ಮೆಟ್ರೋ ಪ್ರಯಾಣಿಕರಿಗೆ ಎಂ.ಜಿ.ರಸ್ತೆ ದಾಟಿ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಶುಕ್ರವಾರ ಸಂಜೆ 6.45ಕ್ಕೆ ಕೊನೆಯ ರೈಲು. ಎಂ.ಜಿ.ರಸ್ತೆ-ಇಂದಿರಾನಗರ ನಡುವೆ ಸೇವೆ ಸ್ಥಗಿತಗೊಂಡ ಸಂದರ್ಭದಲ್ಲಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ಎರಡೂ ಬದಿಯಿಂದ ಕನಿಷ್ಠ 6ರಿಂದ ಗರಿಷ್ಠ 15 ನಿಮಿಷಗಳ ಅಂತರದಲ್ಲಿ ರೈಲು ಕಾರ್ಯಾಚರಣೆ ಮಾಡಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.