ಮೆಟ್ರೋ ಸೇವೆ ವ್ಯತ್ಯಯ; ಇಂದು ನಿರ್ಧಾರ
Team Udayavani, Dec 21, 2018, 11:16 AM IST
ಬೆಂಗಳೂರು: ಮೆಟ್ರೋ ಮಾರ್ಗದ ದುರಸ್ತಿ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಸೇವೆ ಸ್ಥಗಿತಗೊಳಿಸುವ ಬಗ್ಗೆ ಬೆಂಗಳೂರು
ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಶುಕ್ರವಾರ ಬೆಳಗ್ಗೆ ನಿರ್ಧಾರ ಕೈಗೊಳ್ಳಲಿದೆ.
ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬರುವ ಶನಿವಾರ ಮತ್ತು ಭಾನುವಾರ ಟ್ರಿನಿಟಿ ವೃತ್ತ ನಿಲ್ದಾಣದಿಂದ ಇಂದಿರಾನಗರ
ನಿಲ್ದಾಣದ ನಡುವೆ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲು ಈ ಮೊದಲು ಚಿಂತನೆ ನಡೆದಿತ್ತು. ಈ ಬಗ್ಗೆ ಇನ್ನೂ ಪರಿಶೀಲನೆ ನಡೆಯುತ್ತಿದ್ದು, ಶುಕ್ರವಾರ ಬೆಳಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ನಿಗಮದ ವ್ಯವಸ್ಥಾಪಕ
ನಿರ್ದೇಶಕ ಅಜಯ್ ಸೇಠ… ಸ್ಪಷ್ಟಪಡಿಸಿದ್ದಾರೆ.
ದುರಸ್ತಿ ಕಾರ್ಯ ಈಗಾಗಲೇ ನಡೆಯುತ್ತಿದೆ. ಆದರೆ ಇದರಲ್ಲಿ ವಿವಿಧ ಹಂತಗಳಿದ್ದು, ಕಾಮಗಾರಿ ಮಾಡುವಾಗ
ಉದ್ದೇಶಿತ ಮಾರ್ಗದಲ್ಲಿ ಮಾತ್ರ ಸಂಚಾರ ಸೇವೆ ಸ್ಥಗಿತಗೊಳಿಸಬೇಕಾಗುತ್ತದೆ. ವಾರಾಂತ್ಯದಲ್ಲಿ ಕಡಿಮೆ ಜನ
ಸಂಚರಿಸುವುದರಿಂದ ಬರುವ ಶನಿವಾರ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿತ್ತು. ಈ ಸಂಬಂಧ ತಜ್ಞರ ಅಭಿಪ್ರಾಯ ಪಡೆದು, ಅಂತಿಮಗೊಳಿಸುವುದಾಗಿಯೂ ಬಿಎಂಆರ್ಸಿ ಸ್ಪಷ್ಟಪಡಿಸಿತ್ತು.
ಈ ಮಧ್ಯೆ “ಹನಿ ಕಾಂಬ್’ನಲ್ಲಿ ರಂಧ್ರಗಳ ಮೂಲಕ ಸಿಮೆಂಟ್ ತುಂಬುವ ಕಾರ್ಯ ನಡೆದಿದೆ. ಸಚಿವ ಡಾ.ಜಿ. ಪರಮೇಶ್ವರ ಅವರ ಸೂಚನೆ ಮೇರೆಗೆ ಬೇರಿಂಗ್ ಕೂಡ ಬದಲಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ವಯಾಡಕ್ಟ್ಗಳನ್ನು ಕೊಂಚ ಮೇಲಕ್ಕೆತ್ತಿ ಜೋಡಿಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ