ಮಧ್ಯರಾತ್ರಿವರೆಗೂ ಮೆಟ್ರೋ ಸಂಚಾರ
Team Udayavani, Apr 12, 2018, 12:53 PM IST
ಬೆಂಗಳೂರು: ನಗರದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಗೆ ಬರುವ ಪ್ರೇಕ್ಷಕರ ಅನುಕೂಲಕ್ಕಾಗಿ ನಿಗದಿತ ದಿನಗಳಂದು ಮೆಟ್ರೋ ಸೇವೆಯನ್ನು ತಡರಾತ್ರಿ 12.30ರವರೆಗೂ ವಿಸ್ತರಿಸಿದ್ದು, ಪಂದ್ಯ ಮುಗಿದ ನಂತರ ಏಕರೂಪ ಪ್ರಯಾಣ ದರ ನಿಗದಿಪಡಿಸಲಾಗಿದೆ.
ಏಪ್ರಿಲ್ 13, 21, 25, 29 ಹಾಗೂ ಮೇ 1 ಮತ್ತು 17ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಈ ದಿನಗಳಂದು ತಡ ರಾತ್ರಿ 12.30ರವರೆಗೂ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ಸೇವೆ ಇರಲಿದೆ. ಕೊನೆ ವಾಣಿಜ್ಯ ರೈಲು ಸಂಚಾರವು ಕಬ್ಬನ್ ಉದ್ಯಾನ ಮೆಟ್ರೋ ರೈಲು ನಿಲ್ದಾಣದಿಂದ ಮೈಸೂರು ರಸ್ತೆಗೆ ತೆರಳಲಿದೆ. ಪಂದ್ಯಾವಳಿ ಮುಗಿದ ನಂತರ ಕಬ್ಬನ್ ಉದ್ಯಾನ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳಿಂದ “ರಿಟರ್ನ್ ಜರ್ನಿ ಪೇಪರ್ ಟಿಕೆಟ್’ ಪರಿಚಯಿಸಲಾಗಿದೆ.
ಇದರ ಬೆಲೆ 50 ರೂ. ಆಗಿದ್ದು, ಇದರಿಂದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ಯಾವುದೇ ನಿಲ್ದಾಣಗಳಿಗೆ ಜನ ಪ್ರಯಾಣಿಸಬಹುದು. ಏಕರೂಪದ ಟಿಕೆಟ್ ದರ ನಿಗದಿ ಉದ್ದೇಶ ಪಂದ್ಯಾವಳಿ ನಂತರ ಬರುವ ಜನದಟ್ಟಣೆ ತಗ್ಗಿಸಲು
ಹಾಗೂ ಚಿಲ್ಲರೆ ಕೊರತೆ ನೀಗಿಸುವುದಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿ) ಸ್ಪಷ್ಟಪಡಿಸಿದೆ.
ಇನ್ನು ಏಪ್ರಿಲ್ 15ರಂದು ಸಂಜೆ 4ಗಂಟೆಗೆ ಪಂದ್ಯಾವಳಿ ಪ್ರಾರಂಭಗೊಳ್ಳಲಿದೆ. ಆದಾಗ್ಯೂ ಪ್ರಯಾಣಿಕರು ಪಂದ್ಯ ಮುಗಿದ ನಂತರ ರಿಟರ್ನ್ ಜರ್ನಿಗಾಗಿ ಎಂ.ಜಿ. ರಸ್ತೆ ಮತ್ತು ಕಬ್ಬನ್ ಉದ್ಯಾನ ನಿಲ್ದಾಣಗಳಿಂದ 50 ರೂ. “ಪೇಪರ್ ಟಿಕೆಟ್’ ಖರೀದಿಸಬಹುದು. ಟೋಕನ್ ಸೌಲಭ್ಯವೂ ಇರಲಿದೆ.
ಇವರಿಗೆ ಪೇಪರ್ ಟಿಕೆಟ್ ಬೇಕಾಗಿಲ್ಲ ಸ್ಮಾರ್ಟ್ ಕಾಡ್ ಹೊಂದಿರುವವರಿಗೆ ಈ ಪೇಪರ್ ಟಿಕೆಟ್ ಅವಶ್ಯಕತೆ ಇರುವುದಿಲ್ಲ. ಎಂದಿನಂತೆ ರಿಯಾಯ್ತಿ ದರದಲ್ಲಿ ವಿಸ್ತರಿಸಿದ ಅವಧಿಯಲ್ಲೂ ಬಳಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ