ಜುಲೈಗೆ ಕೆಂಗೇರಿವರೆಗೆ ಮೆಟ್ರೋ ರೈಲು


Team Udayavani, May 26, 2021, 12:50 PM IST

Metro train to  Kengeri

ಬೆಂಗಳೂರು: ಮೈಸೂರು ರಸ್ತೆಯ ನಾಯಂಡಹಳ್ಳಿ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ಸೇವೆ ಜುಲೈ ವೇಳೆಗೆಮುಕ್ತವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.ಅಧಿಕಾರಿಗಳ ಜತೆಮೆಟ್ರೋ ರೈಲಿನಲ್ಲೇ ಸಂಚರಿಸಿದಅವರು, ನಮ್ಮ ಮೆಟ್ರೋ ರೈಲು ಹಂತ-2ರ ರೀಚ್‌-2ವಿಸ್ತರಿಸಿದ ಮಾರ್ಗ (ಮೈಸೂರು ರಸ್ತೆಯನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ) ನೂತನ ಸಂಚಾರಮಾರ್ಗದ ಪರಿವೀಕ್ಷಣೆ ನಡೆಸಿದರು.

ನಂತರ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು,ನಮ್ಮ ಮೆಟ್ರೋ ಯೋಜನೆಯ ಹಂತ-2 ರಡಿನಾಯಂಡಹಳ್ಳಿಯಿಂದ ಕೆಂಗೇರಿ ವರೆಗಿನ ರೀಚ್‌-2ರವಿಸ್ತರಣಾ ಮಾರ್ಗದ ಕಾಮಗಾರಿ ಬಹುತೇಕಪೂರ್ಣಗೊಂಡಿದ್ದು, ಜುಲೈನಲ್ಲಿ ಪ್ರಯಾಣಿಕರಿಗೆಮುಕ್ತವಾಗಲಿದೆ. ಒಟ್ಟು 7.53 ಕಿ.ಮೀ. ಉದ್ದದ ಈವಿಸ್ತರಣೆ ಕಾಮಗಾರಿಗೆ 1,560 ಕೋಟಿ ರೂ. ವೆಚ್ಚತಗುಲಿದ್ದು, ಭೂ-ಸ್ವಾಧೀನಕ್ಕೆ 360 ಕೋಟಿ ರೂ.ವೆಚ್ಚವಾಗಿದೆ.

ಅದರಿಂದಾಗಿ ಪೂರ್ವ-ಪಶ್ಚಿಮಕಾರಿಡಾರ್‌ ಮಾರ್ಗದ ಉದ್ದ 18.1 ಕಿ.ಮೀ. ಗೆಹೆಚ್ಚಳವಾಗಿದೆ. ಅದರಲ್ಲಿ ನಾಯಂಡಹಳ್ಳಿ,ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ,ಕೆಂಗೇರಿ ಬಸ್‌-ಟರ್ಮಿನಲ್‌ ಹಾಗೂ ಕೆಂಗೇರಿ -ಒಟ್ಟು6 ನಿಲ್ದಾಣಗಳಿವೆ. ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ ನಿಲ್ದಾಣಗಳಲ್ಲಿ ಪಾರ್ಕಿಂಗ್‌ಸೌಲಭ್ಯಕಲ್ಪಿಸಲಾಗಿದೆ ಎಂದು ಹೇಳಿದರು.ಕೆಂಗೇರಿ ಬಸ್‌-ಟರ್ಮಿನಲ್‌ ನಿಲ್ದಾಣದಲ್ಲಿ ಎರಡು ಅಂತಸ್ತಿನ ಪಾರ್ಕಿಂಗ್‌ ಸೌಲಭ್ಯ ಲ್ಪಿಸಲಾಗಿದೆ.

ಕೆಂಗೇರಿಬಸ್‌-ಟರ್ಮಿನಲ್‌ ನಿಲ್ದಾಣಹೊರತು ಪಡಿಸಿ ಉಳಿದಎಲ್ಲ ನಿಲ್ದಾಣಗಳನ್ನು ರಸ್ತೆ ದಾಟಲು ಪಾದಚಾರಿಗಳು ಬಳಸಬಹುದಾಗಿದೆ. ಬೈಯಪ್ಪನಹಳ್ಳಿಯಿಂದಕೆಂಗೇರಿಗೆ ಪ್ರಯಾಣಿಸಲು 56 ರೂ. ದರನಿಗದಿಪಡಿಸಲಾಗಿದೆ. ಮೆಟ್ರೋ ಜಾಲದ ಅತಿ ಉದ್ದದಮಾರ್ಗ, ಕೆಂಗೇರಿಯಿಂದ ಸಿಲ್ಕ್  ಇನ್ಸಿ rಟ್ಯೂಟ್‌ ವರೆಗೆ60 ರೂ. ದರ ನಿಗದಿಪಡಿಸಲಾಗಿದೆ. ಈ ವಿಸ್ತರಣೆಯಕಾರ್ಯಾಚರಣೆಯಿಂದ ಪ್ರತಿ ದಿನ ಸರಾಸರಿ 75,000ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈಮಾರ್ಗದಲ್ಲಿ ಒನ್‌-ನೇಷನ್‌-ಒನ್‌-ಕಾರ್ಡ್‌ಯೋಜನೆಯ ಅನುಷ್ಠಾನಕ್ಕೆ ಪೂರಕವಾಗಿಆಟೊಮ್ಯಾಟಿಕ್‌ ಫೇರ್‌ ಕಲೆಕ್ಷನ್‌ ವ್ಯವಸ್ಥೆಅಳವಡಿಸಲಾಗಿದೆ. ರೈಲಿನ ಪರೀಕ್ಷಾರ್ಥ ಓಡಾಟವೂ ಪೂರ್ಣವಾಗಿದೆ ಎಂದರು.ಪ್ರತಿ ನಿಲ್ದಾಣದ ಛಾವಣಿಯಲ್ಲಿ 250 ಕಿಲೋವ್ಯಾಟ್‌ ಸೌರವಿದ್ಯುತ್‌ ಪ್ಯಾನೆಲ್‌ ಅಳವಡಿಸಲುಅವಕಾಶ ಕಲ್ಪಿಸಲಾಗಿದೆ.

ಕೆಂಗೇರಿಯಿಂದ ಚಲ್ಲಘಟ್ಟವರೆಗಿನ ವಿಸ್ತರಣೆ ಕಾಮಗಾರಿಯೂ ಪ್ರಗತಿಯಲ್ಲಿದ್ದು,ಮಾರ್ಚ್‌ 2022ರ ಅಂತ್ಯದಲ್ಲಿ ಈ ಕಾಮಗಾರಿಪೂರ್ಣಗೊಳ್ಳುವ ನಿರೀಕ್ಷೆಯಿದೆ.ಬೆಂಗಳೂರು ನಗರದಸಂಚಾರ ವ್ಯವಸ್ಥೆ ಸುಗಮಗೊಳ್ಳಲು ಹಾಗೂ ಒಂದುಭಾಗದಿಂದ ಇನ್ನೊಂದು ಭಾಗಕ್ಕೆ ಸುಲಭವಾಗಿಸಂಚರಿಸಲು ನಮ್ಮ ಮೆಟ್ರೋ ರೈಲುವರದಾನವಾಗಲಿದೆ. ಈ ಯೋಜನೆ ನಿಗದಿತಕಾಲಮಿತಿಯೊಳಗೆ ಪೂರ್ಣಗೊಳಿಸಲು ನಮ್ಮಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದುವಿವರಿಸಿದರು.ಪರಿಶೀಲನೆ ವೇಳೆ ನಮ್ಮ ಮೆಟ್ರೋ ವ್ಯವಸ್ಥಾಪಕನಿರ್ದೇಶಕ ರಾಕೇಶ್‌ ಸಿಂಗ್‌ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.