ಸಿನಿಮಾ, ರಾಜಕೀಯದಲ್ಲಿ ಜನಪ್ರಿಯರಾಗಿದ್ದ ಎಂಜಿಆರ್
Team Udayavani, Jul 9, 2018, 12:12 PM IST
ಬೆಂಗಳೂರು: ಸಿನಿಮಾ ಮಾತ್ರವಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಜನಪ್ರಿಯರಾಗಿದ್ದ ಎಂಜಿಆರ್ ಅವರು ಭಾರತ ರತ್ನ ಪ್ರಶಸ್ತಿಗೆ ಭಾಜನರಾದ ದಕ್ಷಿಣ ಭಾರತದ ಮೇರು ಪ್ರತಿಭೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬಣ್ಣಿಸಿದರು.
ಎಂಜಿಆರ್ ಜನ್ಮದಿನದ ಪ್ರಯುಕ್ತ ನಗರದ ಪುರಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಅಣ್ಣಾ ಡಿಎಂಕೆ ಕರ್ನಾಟಕ ಕಾರ್ಯದರ್ಶಿ ಕೆ.ಆರ್.ಕೃಷ್ಣರಾಜು ಅವರ “ಭಾರತರತ್ನ ಡಾ.ಎಂ.ಜಿ.ಆರ್’ ಹಾಗೂ “ಅಮ್ಮನ ಸಾಧನೆಯ ಕ್ರಾಂತಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅದ್ಭುತ ನಟರಾಗಿದ್ದ ಎಂ.ಜಿ.ಆರ್ ಅವರು ರಾಜಕೀಯ ಕ್ಷೇತ್ರದಲ್ಲೂ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಜನ ಮೆಚ್ಚುಗೆಯ ಕೆಲಸ ಮಾಡಿ ಇಂದಿಗೂ ಜನ ಮಾನಸದಲ್ಲಿ ನೆಲೆಸಿದ್ದಾರೆ. ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ರಾಮಕೃಷ್ಣ ಹೆಗಡೆ ಅವರ ಸರ್ಕಾರದಲ್ಲಿ ನೀರಾವರಿ ಸಚಿವನಾಗಿದ್ದಾಗ ಕಾವೇರಿ ವಿಚಾರ ಕುರಿತಂತೆ ಎರಡು ಬಾರಿ ಎಂ.ಜಿ.ಆರ್ ಅವರನ್ನು ನಾನು ಭೇಟಿಯಾಗಿದ್ದೆ ಎಂದು ಹೇಳಿದರು.
ಅಣ್ಣಾಡಿಎಂಕೆ ಪಕ್ಷದ ಕರ್ನಾಟಕ ಘಟಕದ ಕಾರ್ಯದರ್ಶಿ ಕೆ.ಆರ್.ಕೃಷ್ಣರಾಜು, ಎಂಜಿಆರ್ ಅವರು 1980ರ ದಶಕದಲ್ಲಿ ಮೂರು ಬಾರಿ ಕಲಾಸಿಪಾಳ್ಯಕ್ಕೆ ಭೇಟಿ ನೀಡಿದ್ದರು. ಪುರಭವನ ಮುಂಭಾಗ ಭಾಷಣ ಕೂಡ ಮಾಡಿದ್ದರು. ಅದರ ಸ್ಮರಣಾರ್ಥ ಕಲಾಸಿಪಾಳ್ಯಕ್ಕೆ ಎಂಜಿಆರ್ ನಗರ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದರು. ಹಿರಿಯ ನಟಿ ಸಾಹುಕಾರ್ ಜಾನಕಿ, ನಿರ್ಮಾಪಕ ಎಚ್.ಡಿ.ಗಂಗರಾಜು, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ