86 ರೌಡಿಶೀಟರ್ಗಳ ಮನೆ ಮೇಲೆ ಮಧ್ಯರಾತ್ರಿ ದಾಳಿ
ಸಿಸಿಬಿ ದಾಳಿ ವೇಳೆ ಕುಖ್ಯಾತ ರೌಡಿಗಳು ಪರಾರಿ
Team Udayavani, Nov 24, 2022, 11:38 AM IST
ಬೆಂಗಳೂರು: ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬುಧವಾರ ನಗರದಲ್ಲಿ ಸಕ್ರಿಯವಾಗಿರುವ 86 ಮಂದಿ ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ.
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಮಾರ್ಗದರ್ಶನದಲ್ಲಿ ಸಿಸಿಬಿಯ ಐವರು ಎಸಿಪಿ, 19 ಮಂದಿ ಇನ್ ಸ್ಪೆಕ್ಟರ್ಗಳು ಹಾಗೂ 160 ಪೊಲೀಸ್ ಸಿಬ್ಬಂದಿ ಒಳಗೊಂಡ ತಂಡಗಳು ಬುಧವಾರ ಮುಂಜಾನೆ 2 ಸುಮಾರಿಗೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸುಮಾರು 86ಕ್ಕೂ ಅಧಿಕ ರೌಡಿ ಶೀಟರ್ಗಳ ಮೇಲೆ ಮನೆಗಳ ಮೇಲೆ ದಾಳಿ ನಡೆಸಿ ಪೂರ್ವಪರ ಮಾಹಿತಿ ಸಂಗ್ರಹಿಸಿದೆ.
ಇದೇ ವೇಳೆ ಕುಖ್ಯಾತ ರೌಡಿ ಸ್ಟಾರ್ ನವೀನ್ ಸಿಸಿಬಿ ಪೊಲೀಸರ ದಾಳಿ ವೇಳೆ ಪೊಲೀಸರನ್ನು ಕಂಡು ಓಡಿ ಹೋಗಿದ್ದಾನೆ. ಈ ವೇಳೆ ಈತನ ಮೊಬೈಲ್ ಹಾಗೂ ಚಾಕನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ತಿಳಿಸಿದೆ.
ನಸುಕಿನಲ್ಲಿ ದಿಢೀರ್ ದಾಳಿ ಏಕೆ?
ಈ ಎಲ್ಲ ರೌಡಿಶೀಟರ್ಗಳು ಕೊಲೆ, ಕೊಲೆಗೆ ಯತ್ನ, ದರೋಡೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಅವರ ಮೇಲೆ ನಿಗಾವಹಿಸುವ ಹಾಗೂ ರೌಡಿ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಈ ಮನೆಗಳ ಮೇಲೆ ದಾಳಿ ನಡೆಸಿ ವಿಚಾರಣೆ ಮಾಡಲಾಗಿದೆ. ಹಾಗೆಯೇ ರೌಡಿಶೀಟರ್ಗಳ ಪ್ರಸ್ತುತ ಕೆಲಸ ಕಾರ್ಯಗಳು, ಮೊಬೈಲ್ ನಂಬರ್, ಎಷ್ಟು ಮನೆಗಳು, ಕಚೇರಿಗಳು ಇವೆ. ಯಾರೊಂದಿಗಾದರೂ ಸಂಪರ್ಕ ಇಟ್ಟುಕೊಂಡಿದ್ದಾರಾ? ಪುಡಿ ರೌಡಿಗಳಿಗೆ ಸಹಾಯ ಮಾಡುತ್ತಿದ್ದಾರಾ? ಸೇರಿ ಹಲವಾರು ಮಾಹಿತಿ ಪಡೆದುಕೊಂಡು ದಾಖಲಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ