ವಲಸಿಗ ರೈತರಿಗೆ ಎಟುಕದ ಸೌಲಭ್ಯ


Team Udayavani, May 7, 2021, 2:28 PM IST

migrant farmers

ಬೆಂಗಳೂರು: ಕಳೆದ ವರ್ಷದ ಲಾಕ್‌ಡೌನ್‌ನಲ್ಲಿ ಗ್ರಾಮೀಣ ಪ್ರದೇಶಕ್ಕೆ ತೆರಳಿದ ವಲಸಿಗ ರೈತರಲ್ಲಿ ಶೇ..10ರಷ್ಟು ಮಂದಿ ಅಲ್ಲಿಯೇ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದು, ಬಹುತೇಕ ಮಂದಿಗೆ ಸರ್ಕಾರಿ ಸೌಲಭ್ಯಗಳು ತಲುಪಿಲ್ಲ!ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರಘೋಷಣೆ ಮಾಡಿರುವ ಪರಿಹಾರ ಶೇ..17 ರಷ್ಟುಜನರಿಗೆ ಮಾತ್ರ ದೊರೆತಿದೆ. ಶೇ..23 ರಷ್ಟು ರೈತರಿಗೆ ಮಾತ್ರ ನರೇಗಾ ಯೋಜನೆಯಿಂದ ಅವಕಾಶ ದೊರೆತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಶೇ..53 ರಷ್ಟು ರೈತರು ಹಾಗೂ ಶೇ..20 ರಷ್ಟು ರೈತರಿಗೆ ಮಾತ್ರ ಬೆಳೆ ವಿಮೆ ಸೌಲಭ್ಯ ದೊರೆತಿದೆ.  ಇದು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯ ಹಾಗೂ ಮಹಾರಾಜ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್‌ಆಫ್‌ ಮೈಸೂರು ಸಹಯೋಗದೊಂದಿಗೆ ಪೃಥ್ವಿ ಎಂಬಸ್ವಯಂ ಸೇವಾ ಸಂಸ್ಥೆ ಕೊರೊನಾ ಲಾಕ್‌ಡೌನ್‌ ನಂತರ ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋದ ಕುಟುಂಬಗಳ ಕುರಿತು ನಡೆಸಿದ ಸಮೀಕ್ಷೆಯಲ್ಲಿ ಬೆಳಕಿಗೆ ಬಂದ ಅಂಶ.

ಈಗ ಇನ್ನೊಮ್ಮೆ ಲಾಕ್‌ಡೌನ್‌ನಂಥ ಸ್ಥಿತಿಯೇಎದುರಾಗಿದ್ದು,. ಹಳ್ಳಿ ಸೇರಿರುವ ರೈತರಿಗೆ ಬದುಕು ಕಟ್ಟಿಕೊಡುವ ಅವಕಾಶವನ್ನು ಕಲ್ಪಿಸಿಕೊಡುವ ಸವಾಲು ಸರ್ಕಾರದ ಮುಂದೆ ಇದೆ. ಕಳೆದ ವರ್ಷ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳಿದ ವಲಸಿಗರಲ್ಲಿ ಶೇ.19 ರಷ್ಟು ಜನರು ರೈತ ಕುಟುಂಬಗಳಿಗೆ ಸೇರಿದವರಾಗಿದ್ದರು. ಅಂದರೆ ಸುಮಾರು 8 ರಿಂದ 10 ಲಕ್ಷ ರೈತ ಕುಟುಂಬಕ್ಕೆ ಸೇರಿದವರು ನಗರಗಳಿಂದ ಮರು ವಲಸೆ ತೆರಳಿದ್ದರು.ಅವರಲ್ಲಿ ಶೇ.23 ರಷ್ಟು ಜನರು ಕಲ್ಯಾಣ ಕರ್ನಾಟಕ,ಮಲೆನಾಡು ಹಾಗೂ ಕರಾವಳಿ ಭಾಗಕ್ಕೆಸೇರಿದವರಾಗಿದ್ದಾರೆ.ವಲಸಿಗರಲ್ಲಿ 60 ವರ್ಷ ಮೀರೀದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಳ್ಳಿಗಳಿಗೆ ತೆರಳಿದ ಶೇ.19 ರಷ್ಟುಜನರಲ್ಲಿ ಶೇ.10 ರಷ್ಟು ಜನರು ನಗರ ಪ್ರದೇಶಗಳಿಗೆವಾಪಸ್‌ ಬರದೇ ತಮ್ಮೂರುಗಳಲ್ಲಿಯೇ ಏನಾದರೂ ಉದ್ಯೋಗ ಮಾಡಿಕೊಂಡು ಇರಲು ಬಯಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಹಳ್ಳಿಗಳಿಗೆ ತೆರಳಿದ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾಗಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಲಾಕ್‌ಡೌನ್‌ ಸಮಯ ಹಾಗೂ ನಂತರ ರಾಜ್ಯಸರ್ಕಾರ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ನೆರವು ನೀಡಿರುವ ಬಗ್ಗೆ ಶೇಕಡಾ 45 ರಷ್ಟು ಜನರು ಮಾತ್ರತೃಪ್ತಿ ವ್ಯಕ್ತಪಡಿಸಿದ್ದು, ಶೇ.55 ರಷ್ಟು ಜನರು ರಾಜ್ಯಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನಹೊಂದಿದ್ದಾರೆ.

ಉತ್ಪಾದನೆ ನಷ್ಟ: ಕಳೆದ ವರ್ಷ ಲಾಕ್‌ಡೌನ್‌ಘೋಷಣೆ ಮಾಡಿದ ಸಂದರ್ಭದಲ್ಲಿ ರಾಜ್ಯದ ರೈತರುಹಿಂಗಾರು ಬೆಳೆ ಉತ್ತಮವಾಗಿ ಬಂದಿದ್ದರೂ ಶೇ.30ರಷ್ಟು ರೈತರು ಮಾತ್ರ ತಮ್ಮ ಉತ್ಪನ್ನ ಮಾರಾಟಮಾಡಲು ಸಾಧ್ಯವಾಗಿದೆ. ಶೇ.17 ರಷ್ಟು ಉತ್ಪನ್ನಮಾರಾಟವಾಗದೇ ಸಂಪೂರ್ಣ ಕೊಳೆತು ಹೋಗಿದೆ.ಶೇ. 6 ರಷ್ಟು ರೈತರಿಗೆ ಮಾತ್ರ ಸಾಮಾನ್ಯ ದರದೊರೆತಿದ್ದು, ಶೇ. 94 ರಷ್ಟು ರೈತರಿಗೆ ಸರಿಯಾದ ಬೆಲೆದೊರೆಯದೇ ನಷ್ಟ ಅನುಭವಿಸಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ರೈತರಿಗೆ ಸರ್ಕಾರದಕೃಷಿ, ನೀರಾವರಿ, ತೋಟಗಾರಿಕೆ ಸೇರಿದಂತೆ ಪ್ರಮುಖಇಲಾಖೆಗಳಿಂದ ಸೂಕ್ತ ಮಾಹಿತಿ ದೊರೆತಿರುವ ಬಗ್ಗೆಶೇ.49 ರಷ್ಟು ರೈತರು ಮಾತ್ರ ಸಹಮತವ್ಯಕ್ತಪಡಿಸಿದ್ದಾರೆ.

ಸಾಲದ ಸಮಸ್ಯೆ: ರೈತರಿಗೆ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ, ಸರಿಯಾದ ಸಮಯಕ್ಕೆ ಸೂಕ್ತ ಸಾಲ ಸಿಗದಿರುವ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಎಲ್ಲ ರೈತರಿಗೂ ಸಾಲದೊರೆಯದಿರುವ ಬಗ್ಗೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬೆಳೆಗೆ ಸರಿಯಾದಮಾರುಕಟ್ಟೆ ವ್ಯವಸ್ಥೆ ದೊರೆಯದೇ ನಷ್ಟಅನುಭವಿಸಿರುವ ಬಗ್ಗೆ ರೈತರು ಸಮೀಕ್ಷೆಯಲ್ಲಿ ಬೇಸರವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಹಳ್ಳಿಗಳಿಗೆ ಮರು ವಲಸೆಹೋದ ರೈತ ಕುಟುಂಬಗಳು ಹಾಗೂ ಕಾರ್ಮಿಕರಿಗೆ ರಾಜ್ಯಸರ್ಕಾರ ಹಳ್ಳಿಗಳಲ್ಲಿಯೇ ಪರ್ಯಾಯ ಉದ್ಯೋಗ ಒಗದಿಸುವಲ್ಲಿವಿಫಲವಾಗಿದೆ. ಈಗ ಮತ್ತೆ ಲಾಕ್‌ಡೌನ್‌ ಆಗಿದೆ. ರಾಜ್ಯ ಸರ್ಕಾರಗ್ರಾಮೀಣ ಪ್ರದೇಶಗಳಲ್ಲಿಯೇ ಮರು ವಲಸಿಗರಿಗೆ ಪರ್ಯಾಯಉದ್ಯೋಗ ಒದಗಿಸುವ ಕಡೆಗೆ ಆದ್ಯತೆ ನೀಡಬೇಕು.

  • ಡಾ. ಪ್ರಕಾಶ್‌ ಕಮ್ಮರಡಿ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ

ಶಂಕರ ಪಾಗೋಜಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.