ಸೇನೆ ಕೆಲಸದ ನೆಪದಲ್ಲಿ ವಂಚಿಸುತ್ತಿದ್ದ ಮಹಿಳೆ ಸೆರೆ


Team Udayavani, Aug 12, 2018, 12:11 PM IST

sene-kelasada.jpg

ಬೆಂಗಳೂರು: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹತ್ತಾರು ಮಂದಿಗೆ ಲಕ್ಷಾಂತರ ರೂ. ವಂಚಿಸಿದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೆಬ್ಟಾಳದ ಕೃಷ್ಣರಾಜನ್‌ (63), ಕೆಜಿಎಫ್ ಮೂಲದ ಸುಜಾತಾ (43) ಬಂಧಿತರು.

ಜ್ಯೋತಿಲಕ್ಷಿ ಮತ್ತು ಮೆಹಬೂಬ್‌ ಪಾಷಾ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ. ಆರೋಪಿಗಳಿಂದ ನಕಲಿ ಜಾಬ್‌ ಕಾರ್ಡ್‌, ಉದ್ಯೋಗ ಪ್ರಮಾಣಪತ್ರ, ಅಡ್ಮಿಟ್‌ ಕಾರ್ಡ್‌, ವೈದ್ಯಕೀಯ ತಪಾಸಣೆ ಪತ್ರ ಸೇರಿ ಹಲವು ದಾಖಲೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣರಾಜನ್‌ ಈ ಮೊದಲು ಮೆಕ್ಯಾನಿಕ್‌ ಆಗಿದ್ದು, ಅನಾರೋಗ್ಯ ಕಾರಣ 8 ವರ್ಷಗಳಿಂದ ನಿವೇಶನ- ಮನೆ ಕೊಡಿಸುವ ಮಧ್ಯವರ್ತಿ ಕೆಲಸ ಮಾಡುತ್ತಿದ್ದ. ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚಿಸುವುದೇ ಸುಜಾತಾಳ ಕೆಲಸವಾಗಿತ್ತು.

ಬೆಂಗಳೂರಿನ ರೈಲು ನಿಲ್ದಾಣ, ಬಸ್‌ ನಿಲ್ದಾಣ ಸೇರಿ ಹಲವೆಡೆ ಅಪರಿಚಿತರನ್ನು ಪರಿಚಯಿಸಿಕೊಳ್ಳುತ್ತಿದ್ದ ಸುಜಾತಾ, ನಂತರ ಕುಟುಂಬದ ಮಾಹಿತಿ ಸಂಗ್ರಹಿಸಿ ಸೇನೆ, ಚಾಲಕ, ತಾಂತ್ರಿಕ ಹುದ್ದೆ ಕೊಡಿಸುವುದಾಗಿ ನಂಬಿಸಿ, ಒಂದು ಹುದ್ದೆಗೆ 2 ಲಕ್ಷ ರೂ. ಬೇಡಿಕೆ ಇಡುತ್ತಿದ್ದಳು. ಈಕೆಯನ್ನು ನಂಬಿದ ಅಭ್ಯರ್ಥಿಗಳಿಂದ ಮುಂಗಡ 40 ಸಾವಿರ ರೂ. ಕೀಳುತ್ತಿದ್ದಳು.

ನಕಲಿ ವೈದ್ಯಕೀಯ ಪ್ರಮಾಣ ಪತ್ರ: ಹಣ ಪಡೆದ ಬಳಿಕ ಯುವಕರಿಂದ ಮೂಲ ದಾಖಲೆಗಳನ್ನು ಪಡೆದು, ವೈದ್ಯಕೀಯ ತಪಾಸಣೆಗೆ ಎಂದು ಮೆಹೆಬೂಬ್‌ ಪಾಷಾನ ಜತೆ ಊಟಿ, ಜಬಲ್‌ಪುರ ಹಾಗೂ ಇತರೆಡೆ ಕೆರೆದೊಯ್ದು ಅಲ್ಲಿನ ಜನರಲ್‌ ಆಸ್ಪತ್ರೆಯ ವೈದ್ಯರಿಗೆ ಲಂಚ ಕೊಟ್ಟು ನಕಲಿ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಳು.

ಜತೆಗೆ ಉಳಿದುಕೊಂಡಿದ್ದ ಹೋಟೆಲ್‌ಗೆ ಸೇನೆಯ ಸಮವಸ್ತ್ರ ಧರಿಸಿದವರನ್ನು ಕರೆಸಿ, ಸೇನೆಯ ಅಧಿಕಾರಿ ಎಂದು ಪರಿಚಯಿಸಿ, ಕೆಲ ಪರೀಕ್ಷೆ ನಡೆಸಿ ಬೆಂಗಳೂರಿಗೆ ವಾಪಸ್‌ ಕಳಿಸುತ್ತಿದ್ದಳು. ಕೆಲ ದಿನಗಳ ನಂತರ ಅಭ್ಯರ್ಥಿಗಳಿಗೆ ನಕಲಿ ಉದ್ಯೋಗ ಪ್ರಮಾಣ ಪತ್ರ ಕೊಟ್ಟು ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಳ್ಳುತ್ತಿದ್ದಳು. ಪ್ರತಿ ಅಭ್ಯರ್ಥಿ ಬಳಿ ವ್ಯವಹರಿಸುವಾಗ ಹೊಸ ಸಿಮ್‌ಕಾರ್ಡ್‌ ಬಳಸುತ್ತಿದ್ದಳು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಜೈಲು ಸೇರಿದ್ದ ಸುಜಾತಾ: ಸೇನೆ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ 2013ರಲ್ಲಿ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಸುಜಾತಾ ಜೈಲು ಸೇರಿದ್ದಳು. ಬಿಡುಗಡೆಯಾಗಿ ಬಂದು ಮತ್ತೆ ಅದೇ ಕೃತ್ಯದಲ್ಲಿ ತೊಡಗಿದ್ದಳು. ಇಂಗ್ಲಿಷ್‌, ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿ ಹಲವು ಭಾಷೆಗಳನ್ನು ಸಲಲಿತವಾಗಿ ಮಾತನಾಡಿ ಅಭ್ಯರ್ಥಿಗಳನ್ನು ವಂಚಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ತೆ ಹೇಗೆ?: ಆರೋಪಿ ಕೃಷ್ಣರಾಜನ್‌ ಪುತ್ರ ಮುತ್ತು, ಬಿಕಾಂ ಪದವೀಧರ ದೀಪುಶಂಕರ್‌ ಎಂಬಾತನನ್ನು 2018ರ ಜನವರಿಯಲ್ಲಿ ಪರಿಚಯಿಸಿಕೊಂಡಿದ್ದ. “ನನ್ನ ತಂದೆಗೆ ಸೇನೆಯಲ್ಲಿ ಕೆಲ ಅಧಿಕಾರಿಗಳ ಪರಿಚಯವಿದೆ. ಅವರ ಮೂಲಕ ಕೆಲಸ ಕೊಡಿಸುತ್ತೇನೆ’ ಎಂದು ಹೇಳಿ ಹೆಬ್ಟಾಳದಲ್ಲಿರುವ ತನ್ನ ಮನೆಗೆ ದೀಪುನನ್ನು ಕರೆದುದೊಯ್ದು, ಕೃಷ್ಣರಾಜನ್‌ಗೆ ಪರಿಚಯಿಸಿದ್ದ. ನಂತರ ಸುಜಾತಾಳನ್ನು ಮನೆಗೆ ಕರೆಸಿದ ಆರೋಪಿ ಕೃಷ್ಣರಾಜ್‌, ಗುಮಾಸ್ತ ಕೆಲಸ ಕೊಡಿಸುವುದಾಗಿ ದೀಪುನಿಂದ ಮುಂಗಡ 40 ಸಾವಿರ ರೂ. ಹಣ ಪಡೆದುಕೊಂಡಿದ್ದರು.

ಬಳಿಕ ದೀಪು ಶಂಕರ್‌ನನ್ನು ಊಟಿಯ ವೆಲ್ಲಿಂಗ್‌ಟನ್‌ನ ಹೊಟೆಲ್‌ಗೆ ಕರೆದುದೊಯ್ದು ಸುಜಾತಾ, ವೈದ್ಯಕೀಯ ಪರೀಕ್ಷೆ ಮಾಡಿಸಿ, 2 ದಿನಗಳ ಬಳಿಕ ನಗರಕ್ಕೆ ವಾಪಸ್‌ ಕರೆತಂದಿದ್ದಳು. ಬಳಿಕ ಮಿಲಿಟರಿ ಹುದ್ದೆಯ ನಕಲಿ ನೇಮಕ ಪತ್ರ ನೀಡಿ ತಲೆಮರೆಸಿಕೊಂಡಿದ್ದಳು. ದೀಪುಶಂಕರ್‌ ಸಂಬಂಧಿಸಿದ ಕಚೇರಿಗೆ ಹೋಗಿ ವಿಚಾರಿಸಿದಾಗ, ನೇಮಕಾತಿ ಪತ್ರ ನಕಲಿ ಎಂದು ತಿಳಿಸಿದೆ. ಈ ಸಂಬಂಧ ಜು.31ರಂದು ಹೆಬ್ಟಾಳ ಠಾಣೆಯಲ್ಲಿ ದೀಪು ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.