ಕೋವಿಡ್ ಪರಿಸ್ಥಿತಿ ಪರಿಣಾಮಕಾರಿ ನಿರ್ವಹಣೆಗೆ ಸಚಿವ ಅರವಿಂದ ಲಿಂಬಾವಳಿ ಸೂಚನೆ
Team Udayavani, Apr 27, 2021, 9:17 PM IST
ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಂಡು ಕೋವಿಡ್ ಪರಿಸ್ಥಿತಿ ನಿಯಂತ್ರಿಸಬೇಕೆಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಇಂದು (ಮಂಗಳವಾರ) ಮಾರತ್ತಹಳ್ಳಿ ತುಳಸಿ ಚಿತ್ರ ಮಂದಿರ ರಸ್ತೆಯ ಎಸ್.ಬಿ.ಆರ್ ಕನ್ವೆನ್ಷನ್ ಹಾಲ್ ನಲ್ಲಿ ಕೋವಿಡ್ -19 ನಿಯಂತ್ರಣ ಕ್ರಮಗಳ ಪರಿಶೀಲನೆ ಕುರಿತು ಮಹದೇವಪುರ ವಿಧಾನಸಭಾ ಕ್ಷೇತ್ರದ ಆರೋಗ್ಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಿಬಿಎಂಪಿ ಮತ್ತು ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವರು ಮಾತನಾಡಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್- 19 ಹೇಗೆ ನಿಯಂತ್ರಣ ಮಾಡಬೇಕು ಹಾಗೂ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಈ ಸಭೆಯಲ್ಲಿ ಚರ್ಚಿಸಲಾಯಿತು. ಅಗತ್ಯ ಇರುವ ಕಡೆಗಳಲ್ಲಿ ಕಂಟೋನ್ಮೆಂಟ್ ಜೋನ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ರಾಜ್ಯದಲ್ಲಿ ಏ. 28 ರಿಂದ ಆರಂಭವಾಗುವ ಉಚಿತ ಕೋವಿಡ್ ಲಸಿಕೆ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ನೊಂದಣಿ ಮಾಡಿಸಲು ಜಾಗೃತಿ ಮೂಡಿಸಬೇಕು. ಈ ಲಸಿಕೆ ನೀಡುವ ಕಾರ್ಯ ದೊಡ್ಡ ರೀತಿಯಲ್ಲಿ ಆಯೋಜಿಸಿ ಎಲ್ಲರಿಗೂ ಲಸಿಕೆ ನೀಡುವಂತಾಗಬೇಕು ಇದಕ್ಕೆ ಜನಜಾಗೃತಿ ಕಾರ್ಯಕ್ರಮ ಏರ್ಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ವಾರಿಯರ್ಸ್ ಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು, ತಮ್ಮ ಆರೋಗ್ಯ ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಇದು ಒಂದು ಸಂಕಷ್ಟದ ಸಮಯ, ಈ ಸಮಯದಲ್ಲಿ ಅಧಿಕಾರಿಗಳು ಬದ್ದತೆಯಿಂದ ಮತ್ತು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕು, ಜನರು ಸಹ ಅಧಿಕಾರಿಗಳೊಂದಿಗೆ ಸಹಕರಿಸಿ ಕೋವಿಡ್ ಲಸಿಕೆ ಪಡೆದು, ಸರ್ಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ತಡೆಯಲು ಕೈಜೋಡಿಸಬೇಕೆಂದು ಸಚಿವ ಅರವಿಂದ ಲಿಂಬಾವಳಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ