ಪೌರಕಾರ್ಮಿಕರಿಗೆ ಸಿಹಿ ಹಂಚಿದ ಡಾ.ಸಿ.ಎನ್.ಅಶ್ವತ್ಥನಾರಾಯಣ
Team Udayavani, Aug 7, 2021, 3:40 PM IST
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಪೌರ ಕಾರ್ಮಿಕರಿಗೆ ಸಿಹಿ ಹಂಚಿಕೆ ಮಾಡಿದರು.
ಅರಮನೆ ನಗರ ವಾರ್ಡ್ನ ಲೋಲೆವೆಲ್ ಪಾರ್ಕ್ ಬಳಿ ನಡೆದ ಈ ಕಾರ್ಯಕ್ರಮದಲ್ಲಿ, ಪೌರಕಾರ್ಮಿಕರ ಜತೆ ಸಂವಾದ ನಡೆಸಿದ ಅವರು ಅವರ ಸಮಸ್ಯೆಗಳನ್ನು ಆಲಿಸಿ ನಂತರ ಎಲ್ಲರಿಗೂ ಸಿಹಿತಿಂಡಿ ತಿನಿಸು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಕಠಿಣ ಸಂದರ್ಭದಲ್ಲೂ ಪೌರ ಕಾರ್ಮಿಕರು ಕೆಲಸ ಮಾಡುತ್ತಾರೆ. ಮಳೆ, ಬಿಸಿಲು, ಯಾವುದನ್ನೂ ಲೆಕ್ಕಿಸದೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಇವರೆಲ್ಲರೂ ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆಂದು ಹೇಳಿದರು.
ಈಗಾಗಲೇ ಮಲ್ಲೇಶ್ವರ ಕ್ಷೇತ್ರದಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ವ್ಯಾಕ್ಸಿನೇಷನ್ ಆಗಿದೆ. ಅವರಿಗೆ ಸಕಾಲಕ್ಕೆ ಫುಡ್ ಕಿಟ್ಗಳನ್ನು ಒದಗಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೂ ಆದ್ಯತೆ ಮೇರೆಗೆ ನೆರವಿನ ಹಸ್ತ ಚಾಚಲಾಗುತ್ತಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ