ಅಮೃತೋತ್ಸವ ಭವನ ಕಟ್ಟಡ ಬಾಕಿ ಕಾಮಗಾರಿಗೆ ಅನುದಾನ: ಸಚಿವ ಸಿ.ಸಿ.ಪಾಟೀಲ್ ಭರವಸೆ

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ವಾರ್ತಾ ಸಚಿವರ ಭೇಟಿ

Team Udayavani, Jul 16, 2021, 9:32 PM IST

cats

ಬೆಂಗಳೂರು : ಕನ್ನಡ ಚಲನಚಿತ್ರ ಅಮೃತೋತ್ಸವ ಭವನ ಕಟ್ಟಡ ಕಾಮಗಾರಿಗೆ ಅಗತ್ಯ ಅನುದಾನ ಒದಗಿಸುವ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಶುಕ್ರವಾರ (ಜು.16) ನಗರದ ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರ ಮನವಿಗೆ ಸ್ಪಂದಿಸಿದ ಅವರು, ಆಯವ್ಯಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಮೃತೋತ್ಸವ ಭವನ ಕಟ್ಟಡ ಕಾಮಗಾರಿಗೆ ಅನುದಾನದ ಅಗತ್ಯವಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ತಾವು ಕಟ್ಟಡಕ್ಕೆ ಭೇಟಿ ನೀಡಿದಾಗ ನೆಲ ಮಹಡಿಯಲ್ಲಿ ಸುಸಜ್ಜಿತ ಸಭಾಂಗಣ/ಚಿತ್ರಮಂದಿರ, ತಳ ಮಹಡಿಯಲ್ಲಿನ ಕಾಮಗಾರಿಗಳು ಬಾಕಿ ಇರುವುದು ಗಮನಕ್ಕೆ ಬಂದಿದೆ. ಈ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಬಿಗುಗಡೆಗೊಳಿಸುವ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.

ಪೂನಾದ ಭಾರತ ರಾಷ್ಟ್ರೀಯ ಚಲನಚಿತ್ರ ಪ್ರಾಚ್ಯಾಗಾರ (ಎನ್ಎಫ್ಎಐ)ದ ಮಾದರಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಚಲನಚಿತ್ರ ಭಂಡಾರ ಸ್ಥಾಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ಕನ್ನಡ ಚಿತ್ರರಂಗದ ಅಪೂರ್ವ ಘಟನೆಗಳನ್ನು ಸಾಕ್ಷೀಕರಿಸುವ, ದಾಖಲಿಸುವ ಹಾಗೂ ಕನ್ನಡ ಚಿತ್ರರಂಗದ ಕುರಿತು ಅಧ್ಯಯನ ದೃಷ್ಟಿಯಿಂದ ಇದೊಂದು ಉತ್ತಮ ಪ್ರಯತ್ನ ಎಂದು ಸಚಿವರು ಶ್ಲಾಘಿಸಿದರು.

ಅಮೃತೋತ್ಸವ ಭವನ ಕಟ್ಟಡದ ಆವರಣದಲ್ಲಿ ಮುಂದಿನ ದಿನಗಳಲ್ಲಿ ಉದ್ದೇಶಿತ ಸಿನಿಮಾ ಕಾಂಪ್ಲೆಕ್ಸ್ ನಿರ್ಮಾಣ ಮಾಡೋಣವೆಂದು ಅಕಾಡೆಮಿ ಅಧ್ಯಕ್ಷರಿಗೆ ಸಚಿವರು ಭರವಸೆ ನೀಡಿದರು.

2017-18ನೇ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸುವುದು, 2019-20ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ರಚಿಸುವುದು, ಅಮೃತೋತ್ಸವ ಭವನ ಕಟ್ಟಡದ ನಿರ್ವಹಣೆಗೆ ವಾರ್ಷಿಕ ಅನುದಾನ ಒದಗಿಸುವುದು, ಪ್ರಾದೇಶಿಕ ಭಾಷಾ ಚಿತ್ರೋತ್ಸವಕ್ಕೆ ಬಂಜಾರ ಭಾಷೆ ಚಿತ್ರೋತ್ಸವ ಸೇರ್ಪಡೆ, ಕೋವಿಡ್-19 ಕಾರಣದಿಂದಾಗಿ ಮುಂದೂಡಲಾಗಿರುವ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸುವುದೂ ಸೇರಿದಂತೆ ವಿವಿಧ ಪ್ರಸ್ತಾವನೆಯನ್ನು ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ  ಸುನೀಲ್ ಪುರಾಣಿಕ್ ಅವರು ವಾರ್ತಾ ಸಚಿವರ ಗಮನಕ್ಕೆ ತಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.