ದೆಹಲಿ ಸರ್ಕಾರಕ್ಕೆ ಸಚಿವೆ ಅಭಿನಂದನೆ
Team Udayavani, Aug 11, 2018, 11:29 AM IST
ಬೆಂಗಳೂರು: ದೆಹಲಿಯಲ್ಲಿ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸಲು ಸಮ್ಮತಿ ನೀಡಿರುವ ದೆಹಲಿ ಸರ್ಕಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಕನ್ನಡ ಭಾಷೆ, ಸಂಸ್ಕೃತಿ ಬೆಳವಣಿಗೆಗೆ ಅಕಾಡೆಮಿ ಸಹಕಾರಿಯಾಗಲಿದೆ. ದೆಹಲಿಯಲ್ಲಿ ನೆಲೆಸಿರುವ ಕನ್ನಡಿಗರ ಹಿತರಕ್ಷಣೆ ನಿಟ್ಟಿನಲ್ಲಿ ಕನ್ನಡ ಭಾಷಾ ಅಕಾಡೆಮಿ ಕಾರ್ಯನಿರ್ವಹಿಸಲಿದೆ. ದೆಹಲಿಯಲ್ಲಿ ಅಕಾಡೆಮಿ ಸ್ಥಾಪಿಸಬೇಕೆಂಬುದು ಸರ್ಕಾರದ ಕನಸಾಗಿತ್ತು. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ರಾಣಿ ಜಾರ್ಜ್ ಭೇಟಿ: ಕೇರಳದ ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ರಾಣಿ ಜಾರ್ಜ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಚಿವೆ ಡಾ.ಜಯಮಾಲಾ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು. ಇದೇ ವೇಳೆ ಕರ್ನಾಟಕ ಮತ್ತು ಕೇರಳ ಪರಂಪರಾ ಉತ್ಸವ ಆಚರಣೆ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ